Tuesday, October 29, 2024

ಚುನಾವಣೆಯಲ್ಲಿ ಗೆಲುವು : ಡಿಎಫ್‌ಓ ಅಭಿನಂದನೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಭದ್ರಾವತಿ ತಾಲೂಕು ಶಾಖೆಗೆ ನಡೆದ ಚುನಾವಣೆಯಲ್ಲಿ ಅರಣ್ಯ ಇಲಾಖೆ ಮತಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಪ್ರಥಮ ದರ್ಜೆ ಸಹಾಯಕ ಡಿ. ವೆಂಕಟೇಶ್ ಅವರನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅಭಿನಂದಿಸಿದ್ದಾರೆ. 
    ಭದ್ರಾವತಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಗೆ ನಡೆದ ಚುನಾವಣೆಯಲ್ಲಿ ಅರಣ್ಯ ಇಲಾಖೆ ಮತಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಪ್ರಥಮ ದರ್ಜೆ ಸಹಾಯಕ ಡಿ. ವೆಂಕಟೇಶ್ ಅವರನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅಭಿನಂದಿಸಿದ್ದಾರೆ. 
    ಅರಣ್ಯ ಇಲಾಖೆ ಮತಕ್ಷೇತ್ರದ ೧ ಸ್ಥಾನಕ್ಕೆ ಕಾಂತೇಶ್ ನಾಯ್ಕ ಮತ್ತು ಡಿ. ವೆಂಕಟೇಶ್ ಸ್ಪರ್ಧಿಸಿದ್ದರು. ತೀವ್ರ ಪೈಪೋಟಿ ನಡುವೆ ವೆಂಕಟೇಶ್ ಗೆಲುವು ಸಾಧಿಸಿದ್ದಾರೆ. ಇವರನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಸ್ ರೆಡ್ಡಿ ಹಾಗು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದು, ನೌಕರರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೋರಲಾಗಿದೆ.  

ಸರ್ಕಾರಿ ನೌಕರರ ಸಂಘದ ಚುನಾವಣೆ : ನಾಲ್ವರು ಗೆಲುವು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಭದ್ರಾವತಿ ತಾಲೂಕು ಶಾಖೆಗೆ ನಡೆದ ಚುನಾವಣೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತಕ್ಷೇತ್ರದಿಂದ ಸ್ಪರ್ಧಿಸಿದ್ದ ೪ ಜನ ಗೆಲುವು ಸಾಧಿಸಿದ್ದಾರೆ. 
    ಭದ್ರಾವತಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಗೆ ನಡೆದ ಚುನಾವಣೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತಕ್ಷೇತ್ರದಿಂದ ಸ್ಪರ್ಧಿಸಿದ್ದ ೪ ಜನ ಗೆಲುವು ಸಾಧಿಸಿದ್ದಾರೆ. 
    ಒಟ್ಟು ೪ ಸ್ಥಾನಗಳಿಗೆ ಉಮೇಶಪ್ಪ, ಡಾ.ಎಚ್.ಎಸ್ ಗಿರೀಶ್, ಎಚ್.ಎಂ ನಾಗರಾಜಪ್ಪ, ಪದ್ಮರಾಜ ಶೆಟ್ಟಿ, ಕೆ. ರಮೇಶ್, ಆರ್. ರೀನಾ, ಶ್ರೀನಿವಾಸ್ ಎಚ್. ಬಾಗೋಡಿ ಮತ್ತು  ಎಂ.ಎಚ್ ಹರೀಶ್ ಸೇರಿದಂತೆ ಒಟ್ಟು ೮ ಸ್ಪರ್ಧಿಗಳು ಸ್ಪರ್ಧಿಸಿದ್ದರು. ಈ ಪೈಕಿ ಡಾ.ಎಚ್.ಎಸ್ ಗಿರೀಶ್, ಕೆ. ರಮೇಶ್, ಶ್ರೀನಿವಾಸ್ ಎಚ್. ಬಾಗೋಡಿ ಮತ್ತು ಆರ್. ರೀನಾ ಗೆಲುವು ಸಾಧಿಸಿದ್ದಾರೆ. 
    ಚುನಾವಣೆಯಲ್ಲಿ ಗೆಲುವು ಸಾಧಿಸಿ ಆಯ್ಕೆಯಾದ ಕಾರ್ಯಕಾರಿ ಸಮಿತಿ ನೂತನ ಸದಸ್ಯರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಭಿನಂದನೆ ಸಲ್ಲಿಸಿದೆ. 

ವಿಐಎಸ್‌ಎಲ್‌ನಲ್ಲಿ ನ.೩ರವರೆಗೆ ಜಾಗೃತಾ ತಿಳುವಳಿಕೆ ಸಪ್ತಾಹ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ನ.೩ರವರೆಗೆ "ರಾಷ್ಟ್ರದ ಏಳಿಗೆಗಾಗಿ ಪ್ರಾಮಾಣಿಕತೆಯ ಸಂಸ್ಕೃತಿ" ಧ್ಯೇಯ ವ್ಯಾಕ್ಯದೊಂದಿಗೆ ಜಾಗೃತಾ ತಿಳುವಳಿಕೆ ಸಪ್ತಾಹ ಹಮ್ಮಿಕೊಳ್ಳಲಾಗಿದೆ. 
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ನ.೩ರವರೆಗೆ   "ರಾಷ್ಟ್ರದ ಏಳಿಗೆಗಾಗಿ ಪ್ರಾಮಾಣಿಕತೆಯ ಸಂಸ್ಕೃತಿ" ಧ್ಯೇಯ ವ್ಯಾಕ್ಯದೊಂದಿಗೆ ಜಾಗೃತಾ ತಿಳುವಳಿಕೆ ಸಪ್ತಾಹ ಹಮ್ಮಿಕೊಳ್ಳಲಾಗಿದೆ. 
    ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಹಾಗೂ ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗಾಗಿ ಭಿತ್ತಿಪತ್ರ ವಿನ್ಯಾಸ(ಪೋಸ್ಟರ್ ಡಿಸೈನ್), ಪ್ರಬಂಧ, ಆಶುಭಾಷಣ, ರಂಗೋಲಿ, ರಸಪ್ರಶ್ನೆ ಮತ್ತು ಚಿತ್ರಕಲೆಯಂತಹ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.
    ಕಾರ್ಖಾನೆಯ ಇಸ್ಪಾತ್ ಭವನದ ಮುಂಭಾಗ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಸರ್ದಾರ್ ವಲ್ಲಭಾಯ್ ಪಟೇಲ್ ಮತ್ತು ಸರ್. ಎಂ. ವಿಶ್ವೇಶ್ವರಾಯರವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು.  
    ಪ್ರತಿಜ್ಞಾ ವಿಧಿಯನ್ನು ಕನ್ನಡದಲ್ಲಿ ಡಾ. ಕೆ.ಎಸ್ ಸುಜೀತ್ ಕುಮಾರ್(ಹೆಚ್ಚುವರಿ ಮುಖ್ಯ ವೈದ್ಯಾಧಿಕಾರಿ) ಮತ್ತು ಹಿಂದಿಯಲ್ಲಿ ಶೋಭಾ ಶಿವಶಂಕರನ್ (ಪ್ರಧಾನ ವ್ಯವಸ್ಥಾಪಕರು ಹಣಕಾಸು ಮತ್ತು ಲೆಕ್ಕ) ಹಾಗು ಆಂಗ್ಲ ಭಾಷೆಯಲ್ಲಿ ಕೆ. ಹರಿಶಂಕರ್ (ಪ್ರಧಾನ ವ್ಯವಸ್ಥಾಪಕರು-ಸುರಕ್ಷತೆ) ಬೋಧಿಸಿದರು.
    ಟಿ. ರವಿಚಂದ್ರನ್ (ಪ್ರಧಾನ ವ್ಯವಸ್ಥಾಪಕರು-ಸೇವೆಗಳು), ಎಂ. ಸುಬ್ಬರಾವ್ (ಪ್ರಧಾನ ವ್ಯವಸ್ಥಾಪಕರು ಇ.ಎಂ.ಡಿ ಮತ್ತು ಸಿ.ಈ ಪ್ಲಾಂಟ್), ಎಲ್. ಪ್ರವೀಣ್ ಕುಮಾರ್ (ಪ್ರಧಾನ ವ್ಯವಸ್ಥಾಪಕರು- ಸಾರ್ವಜನಿಕ ಸಂಪರ್ಕ) ಮತ್ತು  ಅಜಯ್ ಡಿ. ಸೋಂಕುವಾರ್ (ಉಪ ಪ್ರಧಾನ ವ್ಯವಸ್ಥಾಪಕರು ಮೆಟೀರಿಯಲ್ ಮ್ಯಾನೇಜ್‌ಮೆಂಟ್)ರವರು ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನ ಮಂತ್ರಿ ಹಾಗು ಕೇಂದ್ರ ಜಾಗೃತಾ ಕಮಿಷನರ್‌ರವರ ಸಂದೇಶಗಳನ್ನು ವಾಚಿಸಿದರು. 
    ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಕೆ.ಎಸ್. ಸುರೇಶ್, ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್, ಅಧಿಕಾರಿಗಳ ಸಂಘದ ಅಧ್ಯಕ್ಷ ಪಾರ್ಥಸಾರಥಿ ಸೇರಿದಂತೆ ಅಧಿಕಾರಿಗಳು, ಕಾರ್ಮಿಕರು ಇನ್ನಿತರರು ಉಪಸ್ಥಿತರಿದ್ದರು. 
    ತ್ರಿವೇಣಿ ಪ್ರಾರ್ಥಿಸಿ, ರಘುನಾಥ ಬಿ. ಅಷ್ಟಪುತ್ರೆ (ಪ್ರಧಾನ ವ್ಯವಸ್ಥಾಪಕರು-ವಿಜಿಲೆನ್ಸ್) ಸ್ವಾಗತಿಸಿ, ಎಲ್. ಕುಥಲನಾಥನ್ ಸಹಾಯಕ ಮಹಾಪ್ರಬಂಧಕರು (ವಿಜಿಲೆನ್ಸ್) ಕಾರ್ಯಕ್ರಮ ನಿರೂಪಿಸಿದರು. ಕೇದಾರನಾಥ (ಸೆಕ್ಷನ್ ಅಸೋಸಿಯೆಟ್ಸ್) ವಂದಿಸಿದರು.  
    ನ್ಯೂಟೌನ್ ಶ್ರೀ ಶಾರದಾ ಮಂದಿರದಲ್ಲಿ ನ.೪ರಂದು ಮಧ್ಯಾಹ್ನ ೨.೧೫ಕ್ಕೆ ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿಗಳನ್ನು ವಿತರಿಸುವುದರೊಂದಿಗೆ ಜಾಗೃತಿ ತಿಳುವಳಿಕೆ ಕುರಿತು ನಾಟಕವನ್ನು ಆಯೋಜಿಸಲಾಗಿದೆ.

ಪುನೀತ್‌ರಾಜ್‌ಕುಮಾರ್ ಸೇವಾ ಕಾರ್ಯಗಳು ಸಮಾಜಕ್ಕೆ ಮಾದರಿ : ಬಿ.ಎಸ್ ಗಣೇಶ್

ಭದ್ರಾವತಿ ತಾಲೂಕು ಕಛೇರಿ ರಸ್ತೆ, ತಾಲೂಕು ಪಂಚಾಯಿತಿ ಸಮೀಪದ ಕನಕ ಆಟೋ ಚಾಲಕರ ಸಂಘದ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪುನೀತ್‌ರಾಜ್‌ಕುಮಾರ್‌ರವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಯುವ ಮುಖಂಡ ಬಿ.ಎಸ್ ಗಣೇಶ್ ಪಾಲ್ಗೊಂಡು ಮಾತನಾಡಿದರು. 
    ಭದ್ರಾವತಿ : ಕರ್ನಾಟಕ ರತ್ನ, ನಟ, ಸಮಾಜ ಸೇವಕ ದಿವಂಗತ ಪುನೀತ್‌ರಾಜ್‌ಕುಮಾರ್ ಸಮಾಜಕ್ಕೆ ಮಾದರಿಯಾಗಿದ್ದು, ಅವರ ಸೇವಾ ಕಾರ್ಯಗಳನ್ನು ನಾವುಗಳು ಸಹ ಮೈಗೂಡಿಸಿಕೊಳ್ಳಬೇಕೆಂದು ಯುವ ಮುಖಂಡ ಬಿ.ಎಸ್ ಗಣೇಶ್ ಹೇಳಿದರು. 
    ಅವರು ಮಂಗಳವಾರ ತಾಲೂಕು ಕಛೇರಿ ರಸ್ತೆ, ತಾಲೂಕು ಪಂಚಾಯಿತಿ ಸಮೀಪದ ಕನಕ ಆಟೋ ಚಾಲಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪುನೀತ್‌ರಾಜ್‌ಕುಮಾರ್‌ರವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. 
    ಭೂಮಿ ಮೇಲೆ ಮನುಷ್ಯ ಜನ್ಮ ಶ್ರೇಷ್ಠವಾಗಿದ್ದು, ನಮ್ಮ ಜನ್ಮ ಸಾರ್ಥಕವಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಸಾಮಾಜಿಕ ಸೇವಾಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕೆಂದರು. 
    ಸ್ಥಳೀಯ ಮುಖಂಡರಾದ ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್. ಮಹೇಶ್ ಕುಮಾರ್, ಡಿಎಸ್‌ಎಸ್ ಮುಖಂಡ ಪುಟ್ಟರಾಜ್, ತಾಲೂಕು ಬಗರ್ ಹುಕುಂ ಸಮಿತಿ ಸದಸ್ಯ ಮುರುಗೇಶ್, ತಾಲೂಕು ಕುರುಬರ ಸಂಘದ ನಿರ್ದೇಶಕ ಮಂಜುನಾಥ್ ಕೊಯ್ಲಿ, ಕುಮಾರ್(ಮಾಸ್ಟರ್) ಹಾಗು ಆಟೋ ಚಾಲಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಆಟೋ ಚಾಲಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಪುಣ್ಯಸ್ಮರಣೆ ಅಂಗವಾಗಿ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಬಿ.ಎಸ್ ಗಣೇಶ್, ಆರ್. ಮಹೇಶ್ ಕುಮಾರ್ ಚಾಲನೆ ನೀಡಿದರು.  

ಪುನೀತ್‌ರಾಜ್‌ಕುಮಾರ್‌ರವರ ಪುಣ್ಯಸ್ಮರಣೆ ಅಂಗವಾಗಿ ಭದ್ರಾವತಿ ತಾಲೂಕು ಕಛೇರಿ ರಸ್ತೆ, ತಾಲೂಕು ಪಂಚಾಯಿತಿ ಸಮೀಪದ ಕನಕ ಆಟೋ ಚಾಲಕರ ಸಂಘದ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಬಿ.ಎಸ್ ಗಣೇಶ್, ಆರ್. ಮಹೇಶ್ ಕುಮಾರ್ ಚಾಲನೆ ನೀಡಿದರು. 

ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಗಣಹೋಮ

ಭದ್ರಾವತಿ ನಗರದ ನ್ಯೂಕಾಲೋನಿ ಎಸ್‌ಎವಿ ವೃತ್ತದಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ೧೪ ವರ್ಷದ ಶ್ರೀ ವಿನಾಯಕ ಮಹೋತ್ಸವ ಅಂಗವಾಗಿ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಮಂಗಳವಾರ ಗಣಹೋಮ ಜರುಗಿತು.
    ಭದ್ರಾವತಿ: ನಗರದ ನ್ಯೂಕಾಲೋನಿ ಎಸ್‌ಎವಿ ವೃತ್ತದಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ೧೪ ವರ್ಷದ ಶ್ರೀ ವಿನಾಯಕ ಮಹೋತ್ಸವ ಅಂಗವಾಗಿ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಮಂಗಳವಾರ ಗಣಹೋಮ ಜರುಗಿತು.
    ಕಳೆದ ವರ್ಷ ಸಹ ಕಾರ್ಖಾನೆ ಉಳಿವಿಗಾಗಿ ಗಣಹೋಮ ಹಮ್ಮಿಕೊಳ್ಳಲಾಗಿತ್ತು. ಇದೀಗ ೨ನೇ ಬಾರಿ ಗಣಹೋಮ ಜರುಗಿದ್ದು, ಕಾಗದನಗರ ೭ನೇ ವಾರ್ಡ್ ನಾಗರಕಟ್ಟೆ ದೇವಸ್ಥಾನದ ಪ್ರಧಾನ ಅರ್ಚಕರಾದ ರಮೇಶ್ ತರಳಿಮಠ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. 
    ಮಧ್ಯಾಹ್ನ ೧೨ ಗಂಟೆಗೆ ಪೂರ್ಣಾಹುತಿ, ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಜರುಗಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ನ್ಯೂಕಾಲೋನಿ, ನ್ಯೂಟೌನ್, ಆಂಜನೇಯ ಅಗ್ರಹಾರ, ಬಾಲಭಾರತಿ, ಬೆಣ್ಣೆಕೃಷ್ಣ ಸರ್ಕಲ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು,  
    ನ.೨ರಂದು ಡೊಳ್ಳು ಕುಣಿತ, ತಮಟೆ ಹಾಗು ಮಂಗಳವಾದ್ಯಗಳೊಂದಿಗೆ ಉತ್ಸವ ಮೆರವಣಿಗೆಯೊಂದಿಗೆ ಸಂಜೆ ವಿನಾಯಕ ಮೂರ್ತಿ ವಿಸರ್ಜನೆ ನಡೆಯಲಿದೆ.