ಭದ್ರಾವತಿ ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿರುವ ಸರ್ವೆ ನಂ.೩೯ರ ಬಳಸೊಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಮಂಗಳವಾರ ನಡೆಯಿತು.
ಭದ್ರಾವತಿ: ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿರುವ ಸರ್ವೆ ನಂ.೩೯ರ ಬಳಸೊಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಮಂಗಳವಾರ ನಡೆಯಿತು.
ಸರ್ಕಾರದ ಆದೇಶದಂತೆ ಸುಮಾರು ೧೦ ಎಕರೆ ವಿಸ್ತೀರ್ಣ ಹೊಂದಿರುವ ಬಳಸೊಕೆರೆ ತೆರವು ಕಾರ್ಯಾಚರಣೆ ಗ್ರಾಮ ಪಂಚಾಯಿತಿ ಆಡಳಿತ ಪೊಲೀಸರ ನೆರವಿನೊಂದಿಗೆ ಕೈಗೊಂಡಿತು. ತಾಲೂಕಿನ ಬಹುತೇಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇನ್ನೂ ಬಹಳಷ್ಟು ಕೆರೆಗಳು ಒತ್ತುವರಿಗೊಂಡಿದ್ದು, ತೆರವು ಕಾರ್ಯಾಚರಣೆ ಕೈಗೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಆಯಾ ಗ್ರಾಮ ಪಂಚಾಯಿತಿಗಳು ಹೆಚ್ಚಿನ ಆಸಕ್ತಿವಹಿಸಬೇಕಾಗಿದೆ.
ಕಾರ್ಯಾಚರಣೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ. ಆನಂದ, ಉಪಾಧ್ಯಕ್ಷ ಕೆ.ವಿ ಧನಂಜಯ(ಧಾನು), ಸದಸ್ಯ ಉಮೇಶ್, ಕಾರ್ಯದರ್ಶಿ ಸವಿತ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.