Saturday, November 9, 2024

ನಗರಸಭೆ ಕಂದಾಯಾಧಿಕಾರಿಯಾಗಿ ರಮೇಶ್ ಅಧಿಕಾರ ಸ್ವೀಕಾರ : ಕಾಂಗ್ರೆಸ್ ಓಬಿಸಿ ಅಭಿನಂದನೆ

ಕಳೆದ ಕೆಲವು ತಿಂಗಳಿನಿಂದ ತೆರವಾಗಿದ್ದ ಭದ್ರಾವತಿ ನಗರಸಭೆ ಕಂದಾಯ ಅಧಿಕಾರಿ ಹುದ್ದೆಗೆ ರಮೇಶ್‌ರವರು ವರ್ಗಾವಣೆಗೊಂಡು ಬಂದಿದ್ದು, ಅವರನ್ನು ಬ್ಲಾಕ್ ಕಾಂಗ್ರೆಸ್ ನಗರ ಹಿಂದುಳಿದ ವರ್ಗಗಳ ಘಟಕದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. 
    ಭದ್ರಾವತಿ: ಕಳೆದ ಕೆಲವು ತಿಂಗಳಿನಿಂದ ತೆರವಾಗಿದ್ದ ನಗರಸಭೆ ಕಂದಾಯ ಅಧಿಕಾರಿ ಹುದ್ದೆಗೆ ರಮೇಶ್‌ರವರು ವರ್ಗಾವಣೆಗೊಂಡು ಬಂದಿದ್ದು, ಅವರನ್ನು ಬ್ಲಾಕ್ ಕಾಂಗ್ರೆಸ್ ನಗರ ಹಿಂದುಳಿದ ವರ್ಗಗಳ ಘಟಕದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. 
    ಈ ಹಿಂದೆ ಕಂದಾಯಾಧಿಕಾರಿಯಾಗಿದ್ದ ರಾಜ್‌ಕುಮಾರ್‌ರವರು ಸಾಗರ ನಗರಸಭೆಗೆ ವರ್ಗಾವಣೆಗೊಂಡಿದ್ದು, ಈ ಹಿನ್ನಲೆಯಲ್ಲಿ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ನಗರಸಭೆ ಕಂದಾಯ ವಿಭಾಗದ ಸಿಬ್ಬಂದಿ ಓಂಕಾರಪ್ಪನವರಿಗೆ ಪ್ರಭಾರ ವಹಿಸಿಕೊಡಲಾಗಿತ್ತು. ಇದೀಗ ಚಿಕ್ಕನಾಯಕನಹಳ್ಳಿ ಪುರಸಭೆಯಿಂದ ಮುಂಬಡ್ತಿಹೊಂದಿರಮೇಶ್‌ರವರು ವರ್ಗಾವಣೆಗೊಂಡು ಬಂದಿದ್ದಾರೆ. 
    ಬ್ಲಾಕ್ ಕಾಂಗ್ರೆಸ್ ನಗರ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಬಿ. ಗಂಗಾಧರ್ ನೇತೃತ್ವದಲ್ಲಿ ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.  ಪದಾಧಿಕಾರಿಗಳಾದ ಉಪಾಧ್ಯಕ್ಷ ಎನ್. ಮಂಜುನಾಥ್, ಸಂಚಾಲಕ ಮಂಜಣ್ಣ ಸಿದ್ದಾಪುರ, ಸಂಘಟನೆ ಕಾರ್ಯದರ್ಶಿಗಳಾದ ಹರೀಶ್ ಮತ್ತು ಮಹಮದ್ ರಫೀಕ್, ವಸಂತ್ ವಸಂತ್ ಕುಮಾರ್, ನಗರಸಭೆ ಸದಸ್ಯ ಸಯ್ಯದ್ ರಿಯಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಅಲಂಕಾರಿಗ ಉಡುಗೆಗಳೊಂದಿಗೆ ಕಣ್ಮನ ಸೆಳೆದ ಅನನ್ಯ ಹ್ಯಾಪಿ ಹಾರ್ಟ್ಸ್ ವಿದ್ಯಾರ್ಥಿಗಳು

ಭದ್ರಾವತಿ ಅಪ್ಪರ್ ಹುತ್ತಾ, ಅನನ್ಯ ಎಜ್ಯುಕೇಷನ್ ಟ್ರಸ್ಟ್, ಅನನ್ಯ ಶಾಲೆಯ ಆವರಣದಲ್ಲಿ  ಶನಿವಾರ ಅನನ್ಯ ಹ್ಯಾಪಿ ಹಾರ್ಟ್ಸ್ ಎಲ್‌ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಅನನ್ಯೋತ್ಸವದ ಅಂಗವಾಗಿ ಅಲಂಕಾರಿಗ ಉಡುಗೆ(ಪ್ಯಾನ್ಸಿ ಡ್ರೆಸ್) ಕಾರ್ಯಕ್ರಮ ಆಯೋಜಿಸಲಾಗಿತ್ತು. 
    ಭದ್ರಾವತಿ: ನಗರದ ಅಪ್ಪರ್ ಹುತ್ತಾ, ಅನನ್ಯ ಎಜ್ಯುಕೇಷನ್ ಟ್ರಸ್ಟ್, ಅನನ್ಯ ಶಾಲೆಯ ಆವರಣದಲ್ಲಿ  ಶನಿವಾರ ಅನನ್ಯ ಹ್ಯಾಪಿ ಹಾರ್ಟ್ಸ್ ಎಲ್‌ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಅನನ್ಯೋತ್ಸವದ ಅಂಗವಾಗಿ ಅಲಂಕಾರಿಗ ಉಡುಗೆ(ಪ್ಯಾನ್ಸಿ ಡ್ರೆಸ್) ಕಾರ್ಯಕ್ರಮ ಆಯೋಜಿಸಲಾಗಿತ್ತು. 
    ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ವೇಷಭೂಷಣ ಉಡುಗೆಗಳೊಂದಿಗೆ ಕಣ್ಮನ ಸೆಳೆದರು.  ಅನನ್ಯ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿವರ್ಷ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಇತ್ತೀಚೆಗೆ ನಾಡಹಬ್ಬ ದಸರಾ ವಿಶೇಷವಾಗಿ ಆಚರಿಸುವ ಮೂಲಕ ಗಮನ ಸೆಳೆಯಲಾಗಿತ್ತು. 
    ಟ್ರಸ್ಟ್ ಕಾರ್ಯದರ್ಶಿ ಬಿ. ಎಸ್ ಅನಿಲ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ವೇಣುಗೋಪಾಲ್ ಹಾಗೂ ಮುಖ್ಯ ಶಿಕ್ಷಕಿಯರಾದ ತನುಜಾ,  ಸುನಿತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ರಮ್ಯಾ ನಿರೂಪಿಸಿ, ಮಿನು ಪೆರೇರ ಸ್ವಾಗತಿಸಿದರು. ರೋಹಿಣಿ ವಂದಿಸಿದರು.

ಉಕ್ಕುಂದ ಗ್ರಾಮದಲ್ಲಿ ಮಣ್ಣು ಮಾದರಿ ಸಂಗ್ರಹದ ವಿಧಾನ ಪ್ರಾತ್ಯಕ್ಷಿಕೆ

ಶಿವಮೊಗ್ಗ ಇಡುವಕ್ಕಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗು ಕೃಷಿ ಮಹಾವಿದ್ಯಾಲಯದ ಕೃಷಿ ವಿಸ್ತರಣಾ ಶಿಕ್ಷಣ ವಿಭಾಗ ಸಹಯೋಗದೊಂದಿಗೆ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ವಿದ್ಯಾರ್ಥಿಗಳಿಂದ ಭದ್ರಾವತಿ ತಾಲೂಕಿನ ಉಕ್ಕುಂದ ಗ್ರಾಮದ ಅನುಗೌಡರವರ ತೋಟದಲ್ಲಿ ಮಣ್ಣು ಮಾದರಿ ಸಂಗ್ರಹ ವಿಧಾನದ ಪ್ರಾತ್ಯಕ್ಷಿಕೆಯನ್ನು ಆಯೋಜಿಸಲಾಗಿತ್ತು. 
    ಭದ್ರಾವತಿ: ಶಿವಮೊಗ್ಗ ಇಡುವಕ್ಕಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗು ಕೃಷಿ ಮಹಾವಿದ್ಯಾಲಯದ ಕೃಷಿ ವಿಸ್ತರಣಾ ಶಿಕ್ಷಣ ವಿಭಾಗ ಸಹಯೋಗದೊಂದಿಗೆ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ವಿದ್ಯಾರ್ಥಿಗಳಿಂದ ಉಕ್ಕುಂದ ಗ್ರಾಮದ ಅನುಗೌಡರವರ ತೋಟದಲ್ಲಿ ಮಣ್ಣು ಮಾದರಿ ಸಂಗ್ರಹ ವಿಧಾನದ ಪ್ರಾತ್ಯಕ್ಷಿಕೆಯನ್ನು ಆಯೋಜಿಸಲಾಗಿತ್ತು. 
    ಮಣ್ಣು ಪರೀಕ್ಷೆಯ ಪ್ರಾಮುಖ್ಯತೆ, ಮಣ್ಣು ಮಾದರಿ ಸಂಗ್ರಹಿಸುವಾಗ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಮಣ್ಣು ಮಾದರಿ ಸಂಗ್ರಹ ಮಾಡುವ ಸಂದರ್ಭದಲ್ಲಿ ಬಳಸುವ ವಿಧಾನಗಳ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಯಿತು.
    ಎಲ್ಲಾ ಬೆಳೆಗೂ ಶಿಫಾರಸ್ಸು ಮಾಡಿದ ಗೊಬ್ಬರದ ಪ್ರಮಾಣ ಒಂದೇ ರೀತಿ ಇರದ ಕಾರಣ ಮಣ್ಣು ಪರೀಕ್ಷೆ ಮಾಡಿಸಿ, ಮಣ್ಣಿನ ಫಲವತ್ತತೆಯ ಆಧಾರದ ಮೇಲೆ ಶಿಫಾರಸ್ಸು ಮಾಡಿದ ಪ್ರಮಾಣದಲ್ಲಿ ಎಷ್ಟು ಗೊಬ್ಬರ ಕೊಡಬೇಕೆಂದು ತಿಳಿದು ಬರುತ್ತದೆ. ಕೆಲವೊಂದು ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮಣ್ಣಲ್ಲಿ ಸಿಗುತ್ತವೆ. ಅಂತಹ ಪೋಷಕಾಂಶಗಳನ್ನು ಮತ್ತೆ ಸೇರಿಸುವುದರಿಂದ ಹೆಚ್ಚಿನ ಗೊಬ್ಬರ ಹಾಕಿದಂತೆ ಆಗುತ್ತದೆ. ಹಣವು ವ್ಯರ್ಥವಾಗುತ್ತದೆ. ಈ ಹಿನ್ನಲೆಯಲ್ಲಿ ಮಣ್ಣಿನ ಫಲವತ್ತತೆ, ಇಳುವರಿ ಮತ್ತು ಆರ್ಥಿಕ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚು ರಾಸಾಯನಿಕ ಗೊಬ್ಬರ ಕೊಡುವುದಕ್ಕೂ ಮುಂಚೆ ಮಣ್ಣು ಪರೀಕ್ಷೆ ಮಾಡಿಸುವುದು ಮುಖ್ಯ ಎಂದು ಮಾಹಿತಿ ನೀಡಲಾಯಿತು.

ನ.೧೨ರಂದು ಕೆಡಿಪಿ ಸಭೆ

    ಭದ್ರಾವತಿ: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತಾಲೂಕು ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಮಿತಿ ಸಭೆ ನ.೧೨ರಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕು ಪಂಚಾಯಿತಿ ಕಛೇರಿ ಸಭಾಂಗಣದಲ್ಲಿ ನಡೆಯಲಿದೆ. 
    ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಎಲ್ಲಾ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಏ.೧ ರಿಂದ ಸೆ.೩೦ರವರೆಗಿನ ಪ್ರಗತಿ ಪರಿಶೀಲನಾ ವರದಿ ಸಲ್ಲಿಸುವುದು. ಅಲ್ಲದೆ ಸಭೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೋರಿದ್ದಾರೆ.