Sunday, November 17, 2024

ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಕಸಾಪ ದತ್ತಿ ಕಾರ್ಯಕ್ರಮ

ಭದ್ರಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ದಿವಂಗತ ಎಂ. ಮಲ್ಲಿಕಾರ್ಜುನ ಕೋಠಿ ದತ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 
    ಭದ್ರಾವತಿ : ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ದಿವಂಗತ ಎಂ. ಮಲ್ಲಿಕಾರ್ಜುನ ಕೋಠಿ ದತ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 
    ನಗರದ ಬೈಪಾಸ್ ರಸ್ತೆ, ವಿಶ್ವೇಶ್ವರಾಯ ನಗರದ ಸ್ಪೂರ್ತಿ ಇಂಟರ್‌ನ್ಯಾಷನಲ್ ಶಿಕ್ಷಣ ಸಂಯೋಜಕಿ ಬಿ. ಮಮತ ನವೀನ್ ವಚನ ಸಾಹಿತ್ಯ ದತ್ತಿ ವಿಷಯ ಕುರಿತು ಉಪನ್ಯಾಸ ನಡೆಸಿಕೊಟ್ಟರು. ಕಸಾಪ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ ಅಧ್ಯಕ್ಷತೆವಹಿಸಿದ್ದರು. 
    ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಎಂ.ಆರ್ ರೇವಣಪ್ಪ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ, ಕಸಾಪ ಕಾರ್ಯದರ್ಶಿ ಟಿ. ತಿಮ್ಮಪ್ಪ, ಕಮಲಾಕರ್, ದತ್ತಿದಾನಿ ನಾಗರತ್ನ ವಾಗೀಶ್ ಕೋಠಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಗಾಂಧಿನಗರ ವೇಲಾಂಗಣಿ ಆರೋಗ್ಯ ಮಾತೆ ದೇವಾಲಯದಲ್ಲಿ ಸಮುದಾಯೋತ್ಸವ

ಭದ್ರಾವತಿ ಗಾಂಧಿನಗರದ ವೇಲಾಂಗಣಿ ಆರೋಗ್ಯ ಮಾತೆ ದೇವಾಲಯದಲ್ಲಿ ಭಾನುವಾರ ಧರ್ಮ ಕೇಂದ್ರದ ಭಕ್ತಾಧಿಗಳಿಂದ ಸಮುದಾಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು.
    ಭದ್ರಾವತಿ : ಗಾಂಧಿನಗರದ ವೇಲಾಂಗಣಿ ಆರೋಗ್ಯ ಮಾತೆ ದೇವಾಲಯದಲ್ಲಿ ಭಾನುವಾರ ಧರ್ಮ ಕೇಂದ್ರದ ಭಕ್ತಾಧಿಗಳಿಂದ ಸಮುದಾಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. 
    ಶಿವಮೊಗ್ಗ ಧರ್ಮ ಕ್ಷೇತ್ರದ ಧರ್ಮಾಧ್ಯಕ್ಷರಾದ ಫ್ರಾನ್ಸಿಸ್ ಸೆರಾವೊರವರು ದೀಪ ಬೆಳಗಿಸಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಂತೆಯೇ ವಯಸ್ಕರ ಧರ್ಮೋಪದೇಶ ತರಗತಿಗಳನ್ನು ತೆಗೆದುಕೊಂಡರು. 
    ಪ್ರಾಸ್ತಾವಿಕ ನುಡಿಗಳನಾಡಿದ ಧರ್ಮಕೇಂದ್ರದ ಗುರುಗಳಾದ ಫಾದರ್ ಸ್ಟೀವನ್ ಡೇಸಾ, ಧರ್ಮ ಕೇಂದ್ರದ ಭಕ್ತಾಧಿಗಳು ವಿವಿಧ ವಲಯ(ವಾರ್ಡ್)ಗಳಲ್ಲಿ ವಾಸಿಸುವುದರಿಂದ ಆ ವಲಯಗಳ ಭಕ್ತ ಸಮೂಹವು ವಿವಿಧ ಸಂತರುಗಳ ಹೆಸರುಗಳನ್ನು ವಹಿಸಿಕೊಂಡು ಸಮುದಾಯದವನ್ನಾಗಿ ನಿರ್ಮಿಸಲಾಗಿದೆ. ಆ ವಿವಿಧ ಸಮುದಾಯಗಳ ಭಕ್ತಾಧಿಗಳು ಇಂದು ಒಟ್ಟುಗೂಡಿ ಸಮುದಾಯೋತ್ಸವ ಆಚರಿಸಲಾಗುತ್ತಿದೆ ಎಂದರು. 
    ಸಮುದಾಯೋತ್ಸವದ ಅಂಗವಾಗಿ ವಿವಿಧ ಸಮುದಾಯಗಳಿಂದ ಬೈಬಲ್ ಆಧಾರಿತ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧೆ ಏರ್ಪಡಿಸಲಾಗಿದೆ. ಈ ರೀತಿಯ ಚಟುವಟಿಕೆಗಳು ನಡೆಯುವುದರಿಂದ ಸಮುದಾಯದಲ್ಲಿರುವ ಕುಟುಂಬಗಳು ಒಂದುಗೂಡಲು, ಪರಸ್ಪರ ಅರ್ಥೈಸಿಕೊಳ್ಳಲು ಸಹಾಯವಾಗುತ್ತದೆ ಎಂದರು. 
    ಧರ್ಮ ಕೇಂದ್ರದಿಂದ ಒಟ್ಟು ೧೧ ಸಮುದಾಯಗಳು ವಿವಿಧ ರೀತಿಯ ಕಾರ್ಯಕ್ರಮಗಳನ್ನು ನೀಡಿ ಸ್ಪರ್ಧಿಸಿದವು. ನಿರ್ಮಲ ಮಾತೆ ಸಮುದಾಯ ಪ್ರಥಮ ಮತ್ತು ಆರೋಗ್ಯ ಮಾತೆ ಸಮುದಾಯ ದ್ವಿತೀಯ ಬಹುಮಾನಗಳನ್ನು ಪಡೆದುಕೊಂಡವು. 
    ಸಮುದಾಯದ ನಿರ್ದೇಶಕಿ ಸಿಸ್ಟರ್ ಬರ್ನಿ, ನಿರ್ಮಲ ಆಸ್ಪತ್ರೆ ಸುಪೀರಿಯರ್ ಸಿಸ್ಟರ್ ವಿಲ್ಮಾ, ಧರ್ಮಭಗಿನಿಯರು, ಸಮುದಾಯ ಒಕ್ಕೂಟಗಳ ಸದಸ್ಯರು, ಪಾಲನಾ ಪರಿಷತ್, ಆರ್ಥಿಕ ಸಮಿತಿಯ ಸದಸ್ಯರು ಮತ್ತು ಭಕ್ತಾಧಿಗಳು ಪಾಲ್ಗೊಂಡಿದ್ದರು.

ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕರಾಗಿ ಎಸ್. ಮಂಜುನಾಥ್ ನೇಮಕ

ಭದ್ರಾವತಿ ಜನ್ನಾಪುರ ನಿವಾಸಿ, ಮಾದಿಗ ಸಮಾಜ(ಕೆಆರ್‌ಎಂಎಸ್) ರಾಜ್ಯಾಧ್ಯಕ್ಷ ಎಸ್. ಮಂಜುನಾಥ್‌ರವರನ್ನು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕರಾಗಿ ನೇಮಕಗೊಳಿಸಲಾಗಿದೆ. ಶಾಸಕ ಬಿ.ಕೆ ಸಂಗಮೇಶ್ವರ್ ಭಾನುವಾರ ಆದೇಶ ಪತ್ರ ವಿತರಿಸಿದರು. 
    ಭದ್ರಾವತಿ: ನಗರದ ಜನ್ನಾಪುರ ನಿವಾಸಿ, ಮಾದಿಗ ಸಮಾಜ(ಕೆಆರ್‌ಎಂಎಸ್) ರಾಜ್ಯಾಧ್ಯಕ್ಷ ಎಸ್. ಮಂಜುನಾಥ್‌ರವರನ್ನು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕರಾಗಿ ನೇಮಕಗೊಳಿಸಲಾಗಿದೆ.  
     ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಒ.ಬಿ.ಸಿ, ಅಲ್ಪಸಂಖ್ಯಾತ ಉಸ್ತುವಾರಿ ಕೆ.ರಾಜು ಹಾಗು ಎ.ಐ.ಸಿ.ಸಿ ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ರಾಜೇಶ್ ಲಿಲೋತಿಯರವರ ಆದೇಶದ ಮೇರೆಗೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿರ್ದೇಶನದಂತೆ  ಕೆ.ಪಿ.ಸಿ.ಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್ ಧರ್ಮಸೇನ ಮಂಜುನಾಥ್‌ರವರನ್ನು ನೇಮಕಗೊಳಿಸಿದ್ದಾರೆ. 
     ಜಿಲ್ಲಾ ವ್ಯಾಪ್ತಿಯಲ್ಲಿ ಸಂಸದರು, ಶಾಸಕರು, ಜಿಲ್ಲಾಧ್ಯಕ್ಷರು ಹಾಗು ಪಕ್ಷದ ಮುಖಂಡರ ಸಹಕಾರದೊಂದಿಗೆ ಜಿಲ್ಲಾ ಬ್ಲಾಕ್ ಮತ್ತು ಬೂತ್ ಮಟ್ಟದಲ್ಲಿ ಪರಿಶಿಷ್ಟಜಾತಿ ಸಮುದಾಯದ ಎಲ್ಲಾ ಜನಾಂಗದ ಜನರನ್ನು ಗುರುತಿಸಿ ಪಕ್ಷದ ಸಂಘಟನೆಗೆ ಶ್ರಮಿಸುವಂತೆ ಕೋರಲಾಗಿದೆ.  ಆದೇಶ ಪತ್ರವನ್ನು ಭಾನುವಾರ ಶಾಸಕರ ಗೃಹ ಕಛೇರಿಯಲ್ಲಿ ಎಸ್. ಮಂಜುನಾಥ್‌ರವರಿಗೆ ನೀಡಿ ಅಭಿನಂದಿಸಲಾಯಿತು. 

ಪರಿಶಿಷ್ಟ ಜಾತಿ ಸಮುದಾಯದವರಿಗೆ ಪಕ್ಷದಲ್ಲಿ ಹೆಚ್ಚಿನ ಅವಕಾಶ : ಶಾಸಕರಿಗೆ ಕೃತಜ್ಞತೆ


ಭದ್ರಾವತಿಯಲ್ಲಿ ಭಾನುವಾರ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರನ್ನು ಗೃಹಕಛೇರಿಯಲ್ಲಿ ಮಾದಿಗ ಸಮಾಜ(ಕೆಆರ್‌ಎಂಎಸ್) ರಾಜ್ಯಾಧ್ಯಕ್ಷ, ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕ ಎಸ್. ಮಂಜುನಾಥ್ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. 
    ಭದ್ರಾವತಿ: ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರನ್ನು ಗುರುತಿಸಿ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿರುವುದು ಸ್ವಾಗತಾರ್ಹ ಸಂಗತಿಯಾಗಿದ್ದು, ಈ ನಿಟ್ಟಿನಲ್ಲಿ ಕಾರಣಕರ್ತರಾಗಿರುವ ಶಾಸಕ ಬಿ.ಕೆ ಸಂಗಮೇಶ್ವರ್‌ರವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಮಾದಿಗ ಸಮಾಜ(ಕೆಆರ್‌ಎಂಎಸ್) ರಾಜ್ಯಾಧ್ಯಕ್ಷ, ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕ ಎಸ್. ಮಂಜುನಾಥ್ ಹೇಳಿದರು. 
    ಅವರು ಭಾನುವಾರ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಗೃಹಕಛೇರಿಯಲ್ಲಿ ಅವರನ್ನು ಸನ್ಮಾನಿಸಿ ಮಾತನಾಡಿದರು. 
    ಈಗಾಗಲೇ ತಮ್ಮ ಮಾರ್ಗದರ್ಶನದಲ್ಲಿ ಕ್ಷೇತ್ರದಾದ್ಯಂತ ಪರಿಶಿಷ್ಟ ಜಾತಿ ಸಮುದಾಯದವರನ್ನು ಸಂಘಟಿಸಿದ್ದು, ಅಲ್ಲದೆ ಇತ್ತೀಚೆಗೆ ನಡೆದ ಚನ್ನಪಟ್ಟಣ ವಿಧಾನಸಭಾ ಚುನಾವಣೆಯಲ್ಲಿ ಉಸ್ತುವಾರಿಯಾಗಿ ನೇಮಕಗೊಳ್ಳಲು ಕಾರಣಕರ್ತರಾಗುವ ಮೂಲಕ ಇದೀಗ ರಾಜ್ಯ ಸಂಚಾಲಕರಾಗಿ ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿರುವುದು ಸಂತಸವನ್ನುಂಟುಮಾಡಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಹಕಾರ ನೀಡುವಂತೆ ಕೋರಿದರು. 
    ನಗರಸಭೆ ಮಾಜಿ ಉಪಾಧ್ಯಕ್ಷ ಚನ್ನಪ್ಪ, ಸದಸ್ಯ ಶರವಣ, ಸಿ. ಜಯಪ್ಪ, ಪ್ರಮೋದ್ ಕಡೂರು, ಬಸವರಾಜ್ ದಾನವಾಡಿ, ಮೋಹನ್, ನಂಜುಂಡನಾಯ್ಕ ನಾಗತಿಬೆಳಗಲು, ರಂಗಸ್ವಾಮಿ ದಾನವಾಡಿ, ಚಂದ್ರಪ್ಪ ಕೂಡ್ಲಿಗೆರೆ, ಸ್ವಾಮಿ, ನಾಗರಾಜ್ ತಟ್ಟೆಹಳ್ಳಿ, ಜೆಬಿಟಿ ಬಾಬು ಸೇರಿದಂತೆ ಮಾದಿಗ ಸಮಾಜದ ಪ್ರಮುಖರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.