ನ್ಯೂಟೌನ್ ಪೊಲೀಸರ ಕಾರ್ಯಾಚರಣೆ : ಜಿಲ್ಲಾ ರಕ್ಷಣಾಧಿಕಾರಿ ಪ್ರಶಂಸೆ
![](https://blogger.googleusercontent.com/img/a/AVvXsEgLTF-HwhOxlcXz9Fg8KXvYb7DqfdQoBFgcEMuAfBAmuXxRzgoliQIf51kYUsZZLwBx9Icg7Jc2oQ0eQwVu1o5Q0eNrNrOfxzx3VN_ym5UfV1sCPD78X4yRFiPshbtYJqkMdUN0buaguiyLxLdI9BwhaB0hxEZ1i_LebUHDCjoQ20YnOPKkGNOfm8bWCpYs=w400-h230-rw)
ದ್ವಿಚಕ್ರ ವಾಹನ ಕಳವು ಪ್ರಕರಣವೊಂದನ್ನು ಬೇಧಿಸಿದ ಭದ್ರಾವತಿ ನಗರದ ನ್ಯೂಟೌನ್ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ ಕಳವು ಮಾಡಲಾಗಿದ್ದ ೧೦ ದ್ವಿಚಕ್ರ ವಾಹನಗಳನ್ನು ಪತ್ತೆ ಮಾಡಿರುವ ಘಟನೆ ನಡೆದಿದೆ.
ಭದ್ರಾವತಿ: ದ್ವಿಚಕ್ರ ವಾಹನ ಕಳವು ಪ್ರಕರಣವೊಂದನ್ನು ಬೇಧಿಸಿದ ನಗರದ ನ್ಯೂಟೌನ್ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ ಕಳವು ಮಾಡಲಾಗಿದ್ದ ೧೦ ದ್ವಿಚಕ್ರ ವಾಹನಗಳನ್ನು ಪತ್ತೆ ಮಾಡಿರುವ ಘಟನೆ ನಡೆದಿದೆ.
ಜೂ.೪ ರಂದು ಅಂತರಗಂಗೆ ವಾಸಿ ಎಸ್. ಷಣ್ಮುಖಪ್ಪ(೬೦) ತಮ್ಮ ಬಜಾಜ್ ಸಿ.ಟಿ-೧೦೦ ದ್ವಿಚಕ್ರ ವಾಹನ ನಗರದ ಬಿಳಕಿ ಕ್ರಾಸ್ ಹತ್ತಿರ ರೇಣುಕಾಂಬ ರೆಸ್ಟೋರೆಂಟ್ ಮುಂದೆ ನಿಲ್ಲಿಸಿದ್ದು, ಪುನಃ ಕೆಲಸ ಮುಗುಸಿಕೊಂಡು ಬಂದಾಗ ಅವರ ವಾಹನ ಕಳವು ಮಾಡಲಾಗಿತ್ತು. ಪ್ರಕರಣ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣ ಪತ್ತೆಗಾಗಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿಗಳಾದ ಅನಿಲ್ ಕುಮಾರ್ ಭೂಮರೆಡ್ಡಿ ಮತ್ತು ಎ.ಜಿ ಕಾರಿಯಪ್ಪರವರ ಮಾರ್ಗದರ್ಶನದಲ್ಲಿ, ಉಪ ಪೊಲೀಸ್ ಆಧೀಕ್ಷಕ ಕೆ.ಆರ್ ನಾಗರಾಜುರವರ ಮೇಲ್ವಿಚಾರಣೆ ಯಲ್ಲಿ, ನಗರ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್ ನೇತೃತ್ವದಲ್ಲಿ ಠಾಣಾ ಉಪ ನಿರೀಕ್ಷಕ ಟಿ. ರಮೇಶ ಮತ್ತು ಸಹಾಯಕ ಠಾಣಾ ಉಪ ನಿರೀಕ್ಷಕ ಟಿ.ಪಿ ಮಂಜಪ್ಪ ಹಾಗೂ ಸಿಬ್ಬಂದಿಗಳಾದ ನವೀನ, ಪ್ರಸನ್ನ ಮತ್ತು ಬಿ.ಎಂ ರಘುರವರನ್ನೊಳಗೊಂಡ ತನಿಖಾ ತಂಡ ರಚಿಸಲಾಗಿತ್ತು.
ತನಿಖಾ ತಂಡ ನ.೨೮ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು, ಕೋಟೆ ಅಗ್ರಹಾರ ವೃತ್ತ, ಸುಗ್ಗಿಹಳ್ಳಿ ಹತ್ತಿರದ ನಿವಾಸಿ ಎಲೆಕ್ಟ್ರಿಷಿಯನ್ ಕೆಲಸ ಮಾಡುವ ಎಂ.ಬಿ ನವೀನ ಕುಮಾರ್(೩೨) ಹಾಗು ತಾಲೂಕಿನ ವೀರಾಪುರ ಗ್ರಾಮ ಬಸ್ ನಿಲ್ದಾಣ ಎದುರಿನ ಗುಜರಿ ವ್ಯಾಪಾರಿ ಉಮ್ಮರ್ ಬೇಗ್(೨೬) ಅವರನ್ನು ಬಂಧಿಸಲಾಗಿದೆ.
ಈ ಇಬ್ಬರನ್ನು ವಿಚಾರಣೆಗೊಳಪಡಿಸಿದಾಗ ನವೀನ ಈತನು ನಗರ ವ್ಯಾಪ್ತಿಯಲ್ಲಿ ಒಟ್ಟು ೧೦ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದು, ಅದರಲ್ಲಿ ೭ ದ್ವಿಚಕ್ರ ವಾಹನಗಳನ್ನು ಗುಜುರಿ ವ್ಯಾಪಾರಿ ಉಮ್ಮರ್ ಬೇಗ್ಗೆ ಮಾರಾಟ ಮಾಡಿರುವುದು ತಿಳಿದು ಬಂದಿರುತ್ತದೆ.
ನ್ಯೂಟೌನ್ ಪೊಲೀಸ್ ಠಾಣೆ ೬, ಹಳೇನಗರ ಪೊಲೀಸ್ ಠಾಣೆ ೩ ಮತ್ತು ಹೊಸಮನೆ ಪೊಲೀಸ್ ಠಾಣೆ ೧ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಸೇರಿ ಒಟ್ಟು ೧೦ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಿ, ಅಂದಾಜು ಮೌಲ್ಯ ೫೫ ಸಾವಿರ ರೂಗಳ ಒಟ್ಟು ೩ ದ್ವಿಚಕ್ರ ವಾಹನಗಳನ್ನು ಮತ್ತು ೭ ದ್ವಿಚಕ್ರ ವಾಹನಗಳ ಬಿಡಿ ಭಾಗಗಳನ್ನು ಮಾರಾಟ ಮಾಡಿ ಗಳಿಸಿದ್ದ ರು. ೨,೧೦,೦೦೦ ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ಅಂದಾಜು ಮೌಲ್ಯ ೬೦ ಸಾವಿರ ರು. ಪಲ್ಸರ್ ದ್ವಿಚಕ್ರ ವಾಹನ ಸೇರಿ ಒಟ್ಟು ರು. ೩,೨೫,೦೦೦ ಮೌಲ್ಯದ ಸ್ವತ್ತು ವಶಕ್ಕೆ ಪಡೆಯಲಾಗಿದೆ. ತನಿಖಾ ತಂಡದ ಉತ್ತಮ ಕಾರ್ಯಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.