Saturday, December 28, 2024

ಡಿ.೨೯ರಂದು ಪ್ರತಿಭಾ ಪುರಸ್ಕಾರ-ಸನ್ಮಾನ ಸಮಾರಂಭ


  
 ಭದ್ರಾವತಿ: ತಾಲೂಕು ಕುರುಬರ ಸಂಘದ ವತಿಯಿಂದ ಡಿ.೨೯ರ ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ  ಪ್ರತಿಭಾ ಪುರಸ್ಕಾರ ಹಾಗು ಸನ್ಮಾನ ಸಮಾರಂಭ ಆಯೋಜಿಸಲಾಗಿದೆ. 
    ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ, ಶಾಖಾ ಮಠ, ಹೊಸದುರ್ಗದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಸಮಾರಂಭದ ದಿವ್ಯ ಸಾನಿಧ್ಯ ವಹಿಸಲಿದ್ದು, ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಿ.ಎಂ ಸಂತೋಷ್ ಅಧ್ಯಕ್ಷತೆ ವಹಿಸಲಿದ್ದಾರೆ. 
ಬೆಂಗಳೂರು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ, ಇನ್‌ಸೈಟ್-ಐಎಎಸ್ ಸಂಸ್ಥೆ ಸಂಸ್ಥಾಪಕ ಬಿ.ಜಿ ವಿನಯ್‌ಕುಮಾರ್, ತಹಸೀಲ್ದಾರ್ ಪರುಶಪ್ಪ ಕುರುಬರ , ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ ರಾಮಚಂದ್ರಪ್ಪ, ಕುರುಬರ ಸಂಘದ ಮಾಜಿ ಅಧ್ಯಕ್ಷ ಕೆ. ಕರಿಯಪ್ಪ, ಶ್ರೀ ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಿ. ಪ್ರಭಾಕರ ಬೀರಯ್ಯ, ಉಪಾಧ್ಯಕ್ಷ ಡಾ. ಎಚ್.ಆರ್ ನರೇಂದ್ರ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಎಚ್ ಉಮೇಶ್, ಕನಕ ಯುವ ಪಡೆ ಅಧ್ಯಕ್ಷ ಕೆ. ಲೋಕೇಶ್, ಸಂಗೊಳ್ಳಿರಾಯಣ್ಣ ಯುವಪಡೆ ಅಧ್ಯಕ್ಷ ಜಿ.ಎಸ್ ಹನುಮಂತಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.  

ಕೃಷಿ ಪತ್ತಿನ ಸಹಕಾರಕ್ಕೆ ನೂತನ ನಿರ್ದೇಶಕರು ಆಯ್ಕೆ


ಭದ್ರಾವತಿ: ತಾಲೂಕಿನ ಕಡದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ನೂತನ ನಿರ್ದೇಶಕರು ಆಯ್ಕೆಯಾಗಿದ್ದಾರೆ. 
    ಸಾಮಾನ್ಯ ಸ್ಥಾನದಿಂದ ಬಿ. ಆನಂದ, ಇಂದ್ರೇಗೌಡ, ಸುರೇಶ್, ಉಮೇಶ್, ಕೆ.ಜಿ ರವಿಕುಮಾರ್, ಮಹಿಳಾ ಮೀಸಲು ಕ್ಷೇತ್ರದಿಂದ ಎ. ಭಾಗ್ಯಲಕ್ಷ್ಮೀ, ಪಾರ್ವತಮ್ಮ, ಹಿಂದುಳಿದ `ಎ' ವರ್ಗದಿಂದ ಬಿ.ಎಸ್ ಹನುಮಂತಪ್ಪ, `ಬಿ' ವರ್ಗದಿಂದ ಡಿ. ಶಿವಶಂಕರ್, ಪರಿಶಿಷ್ಟ ಜಾತಿ ನಾಗರಾಜನಾಯ್ಕ ಮತ್ತು ಪರಿಶಿಷ್ಟ ಪಂಗಡದಿಂದ ಹನುಮಂತಪ್ಪ ಹಾಗು ಸಾಲಗಾರರಲ್ಲದ ಸಾಮಾನ್ಯ ಕ್ಷೇತ್ರದಿಂದ ವೆಂಕಟೇಶ್ ಸೇರಿದಂತೆ ಒಟ್ಟು ೧೨ ಮಂದಿ ನಿರ್ದೇಶಕರು ನೂತನವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ತಿಳಿಸಿದ್ದಾರೆ. 


ನಿರ್ಮಲ ಆಸ್ಪತ್ರೆಯಲ್ಲಿ ಅಪರಾಧ ತಡೆ ಮಾಸಾಚರಣೆ

ಭದ್ರಾವತಿ ನಗರದ ಸಂಚಾರಿ ಪೊಲೀಸ್ ಠಾಣೆವತಿಯಿಂದ ಹಳೇನಗರದ ನಿರ್ಮಲ ಸೇವಾ ಕೇಂದ್ರದ ಸಹಯೋಗದೊಂದಿಗೆ ನಿರ್ಮಲ ಆಸ್ಪತ್ರೆಯಲ್ಲಿ ಶನಿವಾರ ಅಪರಾಧ ತಡೆ ಮಾಸಾಚರಣೆ ನಡೆಯಿತು. 
    ಭದ್ರಾವತಿ:  ನಗರದ ಸಂಚಾರಿ ಪೊಲೀಸ್ ಠಾಣೆವತಿಯಿಂದ ಹಳೇನಗರದ ನಿರ್ಮಲ ಸೇವಾ ಕೇಂದ್ರದ ಸಹಯೋಗದೊಂದಿಗೆ ನಿರ್ಮಲ ಆಸ್ಪತ್ರೆಯಲ್ಲಿ ಶನಿವಾರ ಅಪರಾಧ ತಡೆ ಮಾಸಾಚರಣೆ ನಡೆಯಿತು. 
    ಸಂಚಾರಿ ಪೊಲೀಸ್ ಠಾಣೆ ಉಪ ನಿರೀಕ್ಷಕಿ ಶಾಂತಲರವರು ಅಪರಾಧ ತಡೆ ಮಾಸಾಚರಣೆ ಅಂಗವಾಗಿ, ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ, ಪೋಕ್ಸೋ ಕಾಯ್ದೆ, ಸೈಬರ್ ಅಪರಾಧ, ಸಂಚಾರ ನಿಯಮಗಳ ಕುರಿತು ಕಾನೂನು ಅರಿವು ಮೂಡಿಸಿದರು. 
    ನಿರ್ಮಲ ಸೇವಾ ಕೇಂದ್ರದ ಪ್ರಮುಖರು, ಮಹಿಳೆಯರು ಪಾಲ್ಗೊಂಡಿದ್ದರು. ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಸಾರ್ವಜನಿಕ ಸ್ಥಳಗಳು, ಶಾಲಾ-ಕಾಲೇಜು ಸೇರಿದಂತೆ ವಿವಿಧೆಡೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. 

ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕೇಂದ್ರ ಉಕ್ಕು ಪ್ರಾಧಿಕಾರ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದಲ್ಲಿ ಶನಿವಾರ ಶಿವಮೊಗ್ಗ ಎನ್.ಯು ಆಸ್ಪತ್ರೆ ಹಾಗು ಎಂಡಿ ಇಂಡಿಯಾ ಇನ್ಸೂರೆನ್ಸ್ ಕಂಪನಿ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬರ ಆಯೋಜಿಸಲಾಗಿತ್ತು. 
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದಲ್ಲಿ ಶನಿವಾರ ಶಿವಮೊಗ್ಗ ಎನ್.ಯು ಆಸ್ಪತ್ರೆ ಹಾಗು ಎಂಡಿ ಇಂಡಿಯಾ ಇನ್ಸೂರೆನ್ಸ್ ಕಂಪನಿ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬರ ಆಯೋಜಿಸಲಾಗಿತ್ತು. 
    ಎನ್.ಯು ಆಸ್ಪತ್ರೆಯ ಸಹಾಯಕ ವೈದ್ಯಕೀಯ ನಿರ್ದೇಶಕ ಡಾ. ಪ್ರವೀಣ್ ಮಳವಾಡೆ ಹಾಗು ತಜ್ಞ ವೈದ್ಯ ಡಾ. ಶರತ್ ಮೂತ್ರ ಶಾಸ್ತ್ರ, ಮೂತ್ರ ಪಿಂಡ ಹಾಗು ಬಂಜೆತನ ನಿವಾರಣೆ ಕುರಿತು ಆರೋಗ್ಯ ಮಾಹಿತಿ ನೀಡಿದರು. ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಧ್ಯಕ್ಷ ಬಿ.ಜಿ ರಾಮಲಿಂಗಯ್ಯ ಶಿಬಿರದ ನೇತೃತ್ವದ ವಹಿಸಿದ್ದರು. 
    ಎನ್.ಯು ಆಸ್ಪತ್ರೆ ಮುಖ್ಯ ಆಡಳಿತಾಧಿಕಾರಿ ಶ್ರೀಜಿತ್, ಮಾರುಕಟ್ಟೆ ಅಧಿಕಾರಿ ಪ್ರಿನ್ಸನ್ ಲೋಬೊ, ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಪ್ರಮುಖರಾದ ಉಪಾಧ್ಯಕ್ಷ ಅಡವೀಶಯ್ಯ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಕಾರ್ಯದರ್ಶಿಗಳಾದ ಹನುಮಂತರಾವ್, ಜಯರಾಜ್, ರವೀಂದ್ರ ರೆಡ್ಡಿ, ನಿರ್ದೇಶಕರಾದ ನರಸಿಂಹಚಾರ್, ಶಂಕರ್, ನಾಗರಾಜ್, ಮಹೇಶ್ವರಪ್ಪ, ವೆಂಕಟೇಶ್ ಪ್ರಸಾದ್, ರಾಮಪ್ಪ ಹಾಗು ಕೆಂಪಯ್ಯ ಸೇರಿದಂತೆ ನಿವೃತ್ತ ಕಾರ್ಮಿಕರು, ಎಂ.ಡಿ ಇಂಡಿಯಾ ಇನ್ಸೂರೆನ್ಸ್ ಕಂಪನಿ ಅಧಿಕಾರಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು. 
    ಶಿಬಿರದ ಆರಂಭದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ರವರ ನಿಧನಕ್ಕೆ ಸಂತಾಪ ಸೂಚಿಸಿ ಮೌನಾಚರಣೆ ನಡೆಸಲಾಯಿತು.