Wednesday, January 1, 2025

ಭೀಮಾ ಕೊರೆಗಾವ್ ವಿಜಯೋತ್ಸವ ಘಟನೆ ತಿಳಿಸುವ ಪ್ರಯತ್ನ ಶ್ಲಾಘನೀಯ ಕಾರ್ಯ : ಶಿವಬಸಪ್ಪ

ಭದ್ರಾವತಿ ನಗರದ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಲ್ಲಿ ನಿರ್ಮಿಸಲಾಗಿರುವ ಭೀಮಾ ಕೊರೆಗಾವ್ ವಿಜಯೋತ್ಸವ ಸ್ತಂಭ ಮಾದರಿಯನ್ನು ದಲಿತ ಮುಖಂಡರಾದ ನಿವೃತ್ತ ಪ್ರಾಂಶುಪಾಲ ಶಿವಬಸಪ್ಪ ಉದ್ಘಾಟಿಸಿ ಮಾತನಾಡಿದರು.  
    ಭದ್ರಾವತಿ: ಇತಿಹಾಸದಲ್ಲಿ ಮುಚ್ಚಿಹೋಗಿದ್ದ ಭೀಮಾ ಕೊರೆಗಾವ್ ವಿಜಯೋತ್ಸವ ಘಟನೆ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಹೊಲಯ-ಮಾದಿಗರ ಸಮನ್ವಯ ಸಮಿತಿ ಮುಂದಾಗಿರುವುದು ಶ್ಲಾಘನೀಯ ಎಂದು ದಲಿತ ಮುಖಂಡರಾದ ನಿವೃತ್ತ ಪ್ರಾಂಶುಪಾಲ ಶಿವಬಸಪ್ಪ ಪ್ರಶಂಸೆ ವ್ಯಕ್ತಪಡಿಸಿದರು. 
    ಭೀಮಾ ಕೊರೆಗಾವ್ ವಿಜಯೋತ್ಸವ ಆಚರಣೆ ಹಿನ್ನಲೆಯಲ್ಲಿ ಬುಧವಾರ ನಗರದ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಲ್ಲಿ ನಿರ್ಮಿಸಲಾಗಿರುವ ವಿಜಯೋತ್ಸವ ಸ್ತಂಭ ಮಾದರಿಯನ್ನು ಉದ್ಘಾಟಿಸಿ ಮಾತನಾಡಿದರು. 
    ಅಸ್ಪೃಷ್ಯರ ಸ್ವಾಭಿಮಾನ ಹಾಗು ಕೊರೆಗಾವ್ ವಿಜಯೋತ್ಸವದ ಸಂಕೇತವಾಗಿರುವ ಸ್ತಂಭದ ಮಾದರಿ ಇತಿಹಾಸದಲ್ಲಿ ಮುಚ್ಚಿಹೋಗಿರುವ ಘಟನೆಯನ್ನು ಜನರಿಗೆ ತಿಳಿಸಿಕೊಡುವ ನಿಟ್ಟಿನಲ್ಲಿ ಸಹಕಾರಿಯಾಗಿದೆ ಎಂದರು. 
    ಇದಕ್ಕೂ ಮೊದಲು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗು ಕೊರೆಗಾವ್ ಯುದ್ಧದ ವೀರರಿಗೆ ಪುಷ್ಪ ನಮನದೊಂದಿಗೆ ಗೌರವ ಸಲ್ಲಿಸಲಾಯಿತು. 
    ಸಮಿತಿ ಪ್ರಮುಖರಾದ ಸುರೇಶ್, ಎಂ. ಶಿವಕುಮಾರ್, ಧರ್ಮರಾಜ್, ಮಹೇಶ್ ಛಲವಾದಿ, ಜಗದೀಶ್, ಕೃಷ್ಣ ಛಲವಾದಿ, ಪುಟ್ಟರಾಜ್, ಕಾಚಗೊಂಡನಹಳ್ಳಿ ನಾಗರಾಜ್, ಸಿರಿಯೂರು ಜಯಪ್ಪ, ರಾಜಶೇಖರ್, ಕಾರ್ತಿಕ್ ಸೇರಿದಂತೆ  ಇನ್ನಿತರರು ಉಪಸ್ಥಿತರಿದ್ದರು. 

No comments:

Post a Comment