Friday, January 10, 2025

ಭಕ್ತರ ಮನಸೂರೆಗೊಂಡ ವೈಕುಂಠನಾಥನ ದರ್ಶನ

ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ವೈಕುಂಠ ಏಕಾದಶಿ ಪ್ರಯುಕ್ತ ಜರುಗಿದ ವೈಕುಂಠನಾಥನ ದರ್ಶನ ಭಕ್ತರ ಮನಸೂರೆಗೊಳಿಸಿತು. 
     ಭದ್ರಾವತಿ : ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ವೈಕುಂಠ ಏಕಾದಶಿ ಪ್ರಯುಕ್ತ ಜರುಗಿದ ವೈಕುಂಠನಾಥನ ದರ್ಶನ ಭಕ್ತರ ಮನಸೂರೆಗೊಳಿಸಿತು. 
    ದೇವಸ್ಥಾನದ ಆವರಣದಲ್ಲಿ ಬೆಳಿಗ್ಗೆ ೪.೩೦ಕ್ಕೆ ಶ್ರೀ ಸ್ವಾಮಿಯ ಉತ್ಸವ ನಡೆಯಿತು. ಉತ್ಸವ ಮೂರ್ತಿಯನ್ನು ವೈಕುಂಠ ಮಂಟಪದಲ್ಲಿನ ಜೋಕಾಲಿಯಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ ಶ್ರೀ ಗೋದಾದೇವಿ ಅಮ್ಮನವರ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಮಹಿಳೆಯರು, ಮಕ್ಕಳು ಹಾಗು ವಿದ್ಯಾರ್ಥಿಗಳಿಂದ ಕೋಲಾಟ ನೃತ್ಯ ನಡೆಯಿತು. ಅನಾಗ ಕಲಾನಿಧಿ ಶ್ರೀ ಮೈತಿಲಿ ಶ್ರೀನಿವಾಸ್‌ರವರ ತಂಡದಿಂದ ಸಹ ಕಾರ್ಯಕ್ರಮ ಜರುಗಿತು. 
    ದೇವಸ್ಥಾನದ ಪ್ರಧಾನ ಅರ್ಚಕ ಶ್ರೀ ರಂಗನಾಥಶರ್ಮ ಹಾಗು ಸಹಾಯಕ ಅರ್ಚಕ ಎಸ್. ಶ್ರೀನಿವಾಸನ್‌ರವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ತಾಲೂಕು ಮುಜರಾಯಿ ಅಧಿಕಾರಿಯಾಗಿರುವ ತಹಸೀಲ್ದಾರ್ ಕೆ. ಪರುಸಪ್ಪ, ದೇವಸ್ಥಾನದ ಆಡಳಿತಾಧಿಕಾರಿ ಕೆ.ಆರ್ ಪ್ರಶಾಂತ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಜಿ. ರಮಾಕಾಂತ(ಪುಟ್ಟಣ್ಣ), ಮಲ್ಲಿಕಾರ್ಜುನ್, ನಾಗಣ್ಣ, ಕೃಷ್ಣಪ್ಪ, ಶ್ರೀಕಾಂತ್, ಶರತ್, ಸತೀಶ್ ಅಯ್ಯರ್, ಶ್ರೀವತ್ಸ ಮತ್ತುನರಸಿಂಹಾಚಾರ್ ಹಾಗು ವೇದ ಪಾಠ ಶಾಲೆಯ ವಿದ್ಯಾರ್ಥಿಗಳು ಹಾಗೂ ವಿಷ್ಣು ಸಹಸ್ರನಾಮ ಮಹಿಳಾ ಮಂಡಳಿ ಹಾಗೂ ಲಕ್ಷ್ಮೀನರಸಿಂಹ ಸ್ವಾಮಿಯ ಭಜನಾ ಮಂಡಳಿಯವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

No comments:

Post a Comment