Sunday, January 12, 2025

ಗ್ರಾಮಾಂತರ ಠಾಣೆಯಿಂದ ರಸ್ತೆ ಸುರಕ್ಷಾ ಸಪ್ತಾಹ ಅಂಗವಾಗಿ ಬೈಕ್ ಜಾಥಾ

ಭದ್ರಾವತಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹದ ಅಂಗವಾಗಿ ಭಾನುವಾರ ಬೈಕ್ ಜಾಥಾ ಮೂಲಕ ಜಾಗೃತಿ ಮೂಡಿಸಲಾಯಿತು. 
    ಭದ್ರಾವತಿ : ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹದ ಅಂಗವಾಗಿ ಭಾನುವಾರ ಬೈಕ್ ಜಾಥಾ ಮೂಲಕ ಜಾಗೃತಿ ಮೂಡಿಸಲಾಯಿತು. 
    ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೊಂದಿ, ಗೋಣಿಬೀಡು ಮತ್ತು ಶಂಕರಘಟ್ಟ ಗ್ರಾಮಗಳಲ್ಲಿ ಬೈಕ್ ಜಾಥಾ ನಡೆಸುವ ಮೂಲಕ ವಿದ್ಯಾರ್ಥಿಗಳು, ಗ್ರಾಮಸ್ಥರು, ವಾಹನ ಸವಾರರು ಮತ್ತು ಪಾದಚಾರಿಗಳಿಗೆ ಸಂಚಾರ ನಿಯಮಗಳ ಪಾಲನೆ, ಅಪಘಾತ ನಿಯಂತ್ರಣ ಕುರಿತು ಮತ್ತು ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಕುರಿತು ಅರಿವು ಮೂಡಿಸಲಾಯಿತು.
    ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಜಗದೀಶ್ ಹಂಚಿನಾಳರವರ ನೇತೃತ್ವದಲ್ಲಿ ನಡೆದ ಬೈಕ್ ಜಾಥಾ ಕಾರ್ಯಕ್ರಮದಲ್ಲಿ ಗ್ರಾಮಾಂತರ ಠಾಣೆ ಉಪ ನಿರೀಕ್ಷಕರಾದ ಶಿಲ್ಪ ನಾಯನೇಗಲಿ, ಮಹೇಶ್ ಹಾಗು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. 

No comments:

Post a Comment