Sunday, January 12, 2025

ರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ : ಓಂ ಕ್ರಿಕೆಟರ್‍ಸ್ ತಂಡಕ್ಕೆ ಮೊದಲ ಬಹುಮಾನ, ಟ್ರೋಫಿ

ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಪುತ್ರ ಬಿ.ಎಸ್ ಬಸವೇಶ್‌ರವರ ಜನ್ಮದಿನದ ಅಂಗವಾಗಿ ಓಂ ಕ್ರಿಕೆಟರ್‍ಸ್ ಕ್ಲಬ್ ವತಿಯಿಂದ ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ `ಓಂ ಕಪ್ ಕ್ರಿಕೆಟ್ ಪಂದ್ಯಾವಳಿ'ಯಲ್ಲಿ ನಗರದ ಓಂ ಕ್ರಿಕೆಟರ್‍ಸ್ ತಂಡ ಮೊದಲ ಬಹುಮಾನದೊಂದಿಗೆ ಟ್ರೋಫಿ ತನ್ನದಾಗಿಸಿಕೊಂಡಿದೆ. 
    ಭದ್ರಾವತಿ : ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಪುತ್ರ ಬಿ.ಎಸ್ ಬಸವೇಶ್‌ರವರ ಜನ್ಮದಿನದ ಅಂಗವಾಗಿ ಓಂ ಕ್ರಿಕೆಟರ್‍ಸ್ ಕ್ಲಬ್ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ `ಓಂ ಕಪ್ ಕ್ರಿಕೆಟ್ ಪಂದ್ಯಾವಳಿ'ಯಲ್ಲಿ ನಗರದ ಓಂ ಕ್ರಿಕೆಟರ್‍ಸ್ ತಂಡ ಮೊದಲ ಬಹುಮಾನದೊಂದಿಗೆ ಟ್ರೋಫಿ ತನ್ನದಾಗಿಸಿಕೊಂಡಿದೆ. 
    ಭಾನುವಾರ ಜರುಗಿದ ಅಂತಿಮ ಪಂದ್ಯಾದಲ್ಲಿ ಬೆಂಗಳೂರಿನ ಜೈ ಕರ್ನಾಟಕ ತಂಡ ವಿರುದ್ಧ ಓಂ ಕ್ರಿಕೆಟರ್‍ಸ್ ತಂಡ ಜಯಭೇರಿ ಭಾರಿಸಿತು. ಮೊದಲನೇ ಬಹುಮಾನ ೨.೫೦ ಲಕ್ಷ ರು. ನಗದು ಮತ್ತು ಟ್ರೋಫಿ ಪಡೆದುಕೊಂಡಿತು. ಎರಡನೇ ಬಹುಮಾನ ಜೈ ಕರ್ನಾಟಕ ತಂಡ ಎರಡನೇ ಬಹುಮಾನ ೧.೨೫ ಲಕ್ಷ ರು. ನಗದು ಮತ್ತು ಟ್ರೋಫಿ ತನ್ನದಾಗಿಸಿಕೊಂಡಿತು. ಮೂರನೇ ಬಹುಮಾನ ಸಚಿನ್ ಇಲೆವೆನ್ ಬೆಂಗಳೂರು ಮತ್ತು ಪ್ರಕೃತಿ ನ್ಯಾಶ್ ತಂಡಗಳು ಹಂಚಿಕೊಂಡಿವೆ. 
    ಚಲನಚಿತ್ರ ನಟ ವಸಿಷ್ಠ ಸಿಂಹ ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸಿದರು. ಓಂ ಕ್ರಿಕೆಟರ್‍ಸ್ ಕ್ಲಬ್ ಅಧ್ಯಕ್ಷ ಗಿರೀಶ್, ಯುವ ಮುಖಂಡರಾದ ಬಿ.ಎಸ್ ಗಣೇಶ್, ಬಿ.ಎಸ್ ಬಸವೇಶ್, ಕುವೆಂಪು ವಿ.ವಿ ಸಿಂಡಿಕೇಟ್ ಸದಸ್ಯ ಎಂ. ಶಿವಕುಮಾರ್, ಪ್ರಮುಖರಾದ ಕುಮಾರ್(ಮಾಸ್ಟರ್), ಅಭಿಲಾಷ್, ಚಂದ್ರಶೇಖರ್, ಶಿವು ಪಾಟೀಲ್, ಕೇಶವ, ಮಂಜುನಾಥ್ ಕೊಯ್ಲಿ ಮತ್ತು  ವೈ. ನಟರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

No comments:

Post a Comment