ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ಭದ್ರಾವತಿ ಸಿದ್ಧಾರೂಢ ನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಸಾವಿತ್ರಿಬಾಯಿಫುಲೆರವರ ೧೯೪ನೇ ಜನ್ಮದಿನೋತ್ಸವ ಆಚರಿಸಲಾಯಿತು.
ಭದ್ರಾವತಿ: ಸಾವಿತ್ರಿಬಾಯಿಪುಲೆಯವರು ದೇಶದ ಮೊಟ್ಟಮೊದಲ ಶಿಕ್ಷಕಿ ಮಾತ್ರವಲ್ಲದೆ ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ಸಿದ್ಧಾರೂಢ ನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್ ಹೇಳಿದರು.
ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಸಾವಿತ್ರಿಬಾಯಿಫುಲೆರವರ ೧೯೪ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಾವಿತ್ರಿಬಾಯಿಫುಲೆರವರು ಒಬ್ಬ ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ, ದೇಶದ ಮೊಟ್ಟಮೊದಲ ಶಿಕ್ಷಕಿ, ಧಣಿವರಿಯದ ಸತ್ಯಶೋಧಕಿ, ಆಧುನಿಕ ಶಿಕ್ಷಣದ ತಾಯಿ ಎಂದು ಬಣ್ಣಿಸಿದರು.
ಹತ್ತನೇ ತರಗತಿ ವಿದ್ಯಾರ್ಥಿನಿ ಭುವನ ಸಾವಿತ್ರಿಬಾಯಿ ಫುಲೆ ಅವರ ಜೀವನ ಮತ್ತು ಸಾಧನೆ ಕುರಿತಂತೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ದೈಹಿಕ ಶಿಕ್ಷಣ ಶಿಕ್ಷಕ ಶಿವಲಿಂಗೇಗೌಡ, ಎಲ್ಲಾ ವಿಭಾಗದ ಮುಖ್ಯೋಪಾಧ್ಯಾಯರು, ಶಿಕ್ಷಕರುಗಳು, ಬಿ. ಇಡಿ.ಉಪನ್ಯಾಸಕರು ಹಾಗೂ ಪ್ರಶಿಕ್ಷಣಾರ್ಥಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
No comments:
Post a Comment