Tuesday, January 21, 2025

ತಹಸೀಲ್ದಾರ್‌ಗೆ ಕಾಂಗ್ರೆಸ್ ಹಿಂದುಳಿದ ಘಟಕದಿಂದ ಸನ್ಮಾನ, ಅಭಿನಂದನೆ


ಭದ್ರಾವತಿ ತಾಲೂಕು ದಂಡಾಧಿಕಾರಿಯಾಗಿ ಇತ್ತೀಚೆಗೆ ಅಧಿಕಾರವಹಿಸಿಕೊಂಡಿರುವ ತಹಸೀಲ್ದಾರ್ ಕೆ. ಪರುಸಪ್ಪ ಅವರನ್ನು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ನಗರ ಘಟಕದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. 
    ಭದ್ರಾವತಿ : ತಾಲೂಕು ದಂಡಾಧಿಕಾರಿಯಾಗಿ ಇತ್ತೀಚೆಗೆ ಅಧಿಕಾರವಹಿಸಿಕೊಂಡಿರುವ ತಹಸೀಲ್ದಾರ್ ಕೆ. ಪರುಸಪ್ಪ ಅವರನ್ನು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ನಗರ ಘಟಕದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. 
    ಕ್ಷೇತ್ರದ ನಾಗರೀಕರು ಉತ್ತಮ ಆಡಳಿತ ನಿರೀಕ್ಷೆ ಎದುರು ನೋಡುತ್ತಿದ್ದು, ತಕ್ಷಣ ನಾಗರೀಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವ ಮೂಲಕ ಪರಿಹರಿಸುವಂತೆ ಮನವಿ ಮಾಡಲಾಯಿತು. 
    ಘಟಕದ ಅಧ್ಯಕ್ಷ ಬಿ. ಗಂಗಾಧರ ನೇತೃತ್ವವಹಿಸಿದ್ದರು. ಉಪಾಧ್ಯಕ್ಷ ಜಯಕಾಂತ್,  ಪ್ರಧಾನ ಕಾರ್ಯದರ್ಶಿ ಜಗದೀಶ್ ಬೋಸ್ಲೆ, ಕುವೆಂಪು ವಿ.ವಿ ಸಿಂಡಿಕೇಟ್ ಸದಸ್ಯ ಎಂ. ಶಿವಕುಮಾರ್, ಮಹಮದ್ ರಫಿ, ಹರೀಶ್ ಕರಟೆ ಮತ್ತು ನಗರಸಭೆ ಮಾಜಿ ಸದಸ್ಯ ಗಂಗಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

No comments:

Post a Comment