Wednesday, January 22, 2025

ಜಾಯ್ ಶರ್ಲಿಗೆ ಕುವಿವಿ ಚಿನ್ನದ ಪದಕ

ಭದ್ರಾವತಿ ನಗರ ಜನ್ನಾಪುರ ನಿವಾಸಿ ಜಾಯ್ ಶರ್ಲಿಯವರು ಕುವೆಂಪು ವಿಶ್ವ ವಿದ್ಯಾಲಯದ ವಿಜ್ಞಾನ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. 
    ಭದ್ರಾವತಿ : ನಗರ ಜನ್ನಾಪುರ ನಿವಾಸಿ ಜಾಯ್ ಶರ್ಲಿಯವರು ಕುವೆಂಪು ವಿಶ್ವ ವಿದ್ಯಾಲಯದ ವಿಜ್ಞಾನ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. 
    ಕುವೆಂಪು ವಿಶ್ವವಿದ್ಯಾಲಯದಲ್ಲಿ ಬುಧವಾರ ಆಯೋಜಿಸಲಾಗಿದ್ದ ೩೪ನೇ ಘಟಿಕೋತ್ಸವದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ರವರು ಚಿನ್ನದ ಪದಕ ಜಾಯ್ ಶರ್ಲಿಯವರಿಗೆ ಪ್ರಧಾನ ಮಾಡಿದರು. ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ನಿವೃತ್ತ ಕುಲಪತಿ ಪ್ರೊ. ರಾಮ್ ರಾಮಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಚಿನ್ನದ ಪದಕ ಪಡೆದ ಜಾಯ್ ಶರ್ಲಿಯವರನ್ನು ತಾಲೂಕಿನ ಮಾವಿನಕೆರೆ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜಯಶ್ರೀ ಗಂಗಾಧರನ್ ಸೇರಿದಂತೆ ಇನ್ನಿತರ ಗಣ್ಯರು ಅಭಿನಂದಿಸಿದ್ದಾರೆ. 

No comments:

Post a Comment