Friday, January 3, 2025

೭೦ ವರ್ಷ ಮೇಲ್ಪಟ್ಟವರಿಗೆ ಉಚಿತ ಆರೋಗ್ಯ ಸೌಲಭ್ಯ ನೋಂದಣಿ


    ಭದ್ರಾವತಿ: ಭಾರತೀಯ ಜನತಾ ಪಕ್ಷದ ತಾಲೂಕು ಮಂಡಲದ ಮಾಜಿ ಅಧ್ಯಕ್ಷರಾದ ಜಿ. ಆನಂದಕುಮಾರ್(ನಗರ ಘಟಕ) ಮತ್ತು ಮಂಗೋಟೆ ರುದ್ರೇಶ್(ಗ್ರಾಮಾಂತರ ಘಟಕ) ನೇತೃತ್ವದಲ್ಲಿ ಜ.೫ರ ಭಾನುವಾರ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಆರೋಗ್ಯ ಸೌಲಭ್ಯ ನೋಂದಣಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 
    ಕೇಂದ್ರ ಸರ್ಕಾರದ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆ ಯೋಜನೆ ಇದಾಗಿದ್ದು, ಈ ಯೋಜನೆಯಡಿ ೭೦ ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರಿಗೆ ೫ ಲಕ್ಷ ರು.ಗಳವರೆಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಆರೋಗ್ಯ ಸೌಲಭ್ಯ ಒದಗಿಸಲಾಗುವುದು. 
    ಈ ಯೋಜನೆಯನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸುವ ಉದ್ದೇಶದಿಂದ ಸಂಸದ ಬಿ.ವೈ ರಾಘವೇಂದ್ರರವರು ಜಿಲ್ಲೆಯಾದ್ಯಂತ ಅಭಿಯಾನ ಕೈಗೊಂಡಿದ್ದು, ಇದಕ್ಕೆ ಪೂರಕವಾಗುವಂತೆ ನಗರದಲ್ಲಿ ಜಿ. ಆನಂದಕುಮಾರ್ ಮತ್ತು ಮಂಗೋಟೆ ರುದ್ರೇಶ್‌ರವರ ನೇತೃತ್ವದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಹೊಸಮನೆ ಮುಖ್ಯ ರಸ್ತೆ(ಸಂತೆ ಮೈದಾನದ ಎದುರು) ಜಿ. ಆನಂದಕುಮಾರ್‌ರವರ ಬಿಜೆಪಿ ಕಛೇರಿಯಲ್ಲಿ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆವರೆಗೆ ಅಭಿಯಾನ ನಡೆಯಲಿದೆ. 
    ಬಿಪಿಎಲ್ ಅಥವಾ ಎಪಿಎಲ್ ಪಡಿತರ ಚೀಟಿ ಹೊಂದಿರುವವರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗೆ ಮೊ: ಸಂಖ್ಯೆ ೯೮೪೫೭೯೧೯೯೪ ಅಥವಾ ೯೦೧೯೫೬೪೧೮೮ ಕರೆ ಮಾಡಬಹುದಾಗಿದೆ. 

No comments:

Post a Comment