ಗಂಗೋಜಿರಾವ್ ನಿಧನ
ಭದ್ರಾವತಿ : ತಾಲೂಕಿನ ಕಾಚಗೊಂಡನ ಹಳ್ಳಿ ನಿವಾಸಿ, ಸರ್ಕಾರಿ ಪಡಿತರ ವಿತರಕ ಗಂಗೋಜಿರಾವ್(೬೯) ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದರು.
ಪತ್ನಿ, ನಗರಸಭೆ ಮಾಜಿ ಸದಸ್ಯೆ ರೇಣುಕಾ ಸೇರಿದಂತೆ ೩ ಪುತ್ರಿಯರು, ಓರ್ವ ಪುತ್ರ ಇದ್ದಾರೆ. ಇವರ ಅಂತ್ಯಕ್ರಿಯೆ ಗ್ರಾಮದ ಹಿಂದೂ ರುದ್ರಭೂಮಿಯಲ್ಲಿ ಸಂಜೆ ನೆರವೇರಿತು.
ನಗರಸಭೆ ಸದಸ್ಯರಾದ ವಿ. ಕದಿರೇಶ್, ಕೆ. ಸುದೀಪ್ ಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿದ್ದಲಿಂಗಯ್ಯ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.
No comments:
Post a Comment