Sunday, January 5, 2025

ಉಚಿತ ಆರೋಗ್ಯ ಸೌಲಭ್ಯ ನೋಂದಣಿ ಅಭಿಯಾನಕ್ಕೆ ಬಿಳಿಕಿ ಶ್ರೀ ಚಾಲನೆ

ಭದ್ರಾವತಿಯಲ್ಲಿ ಭಾರತೀಯ ಜನತಾ ಪಕ್ಷದ ತಾಲೂಕು ಮಂಡಲದ ಮಾಜಿ ಅಧ್ಯಕ್ಷರಾದ ಜಿ. ಆನಂದಕುಮಾರ್(ನಗರ ಘಟಕ) ಮತ್ತು ಮಂಗೋಟೆ ರುದ್ರೇಶ್(ಗ್ರಾಮಾಂತರ ಘಟಕ) ನೇತೃತ್ವದಲ್ಲಿ  ಭಾನುವಾರ ಹಮ್ಮಿಕೊಳ್ಳಲಾಗಿದ್ದ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಆರೋಗ್ಯ ಸೌಲಭ್ಯ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಬಿಳಿಕಿ ಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು. 
    ಭದ್ರಾವತಿ: ಭಾರತೀಯ ಜನತಾ ಪಕ್ಷದ ತಾಲೂಕು ಮಂಡಲದ ಮಾಜಿ ಅಧ್ಯಕ್ಷರಾದ ಜಿ. ಆನಂದಕುಮಾರ್(ನಗರ ಘಟಕ) ಮತ್ತು ಮಂಗೋಟೆ ರುದ್ರೇಶ್(ಗ್ರಾಮಾಂತರ ಘಟಕ) ನೇತೃತ್ವದಲ್ಲಿ  ಭಾನುವಾರ ಹಮ್ಮಿಕೊಳ್ಳಲಾಗಿದ್ದ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಆರೋಗ್ಯ ಸೌಲಭ್ಯ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಬಿಳಿಕಿ ಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು. 
    ನಗರದ ಹೊಸಮನೆ ಮುಖ್ಯ ರಸ್ತೆ(ಸಂತೆ ಮೈದಾನದ ಎದುರು) ಜಿ. ಆನಂದಕುಮಾರ್‌ರವರ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆ ಯೋಜನೆ ಇದಾಗಿದ್ದು, ಈ ಯೋಜನೆಯಡಿ ೭೦ ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರಿಗೆ ೫ ಲಕ್ಷ ರು.ಗಳವರೆಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಆರೋಗ್ಯ ಸೌಲಭ್ಯ ಒದಗಿಸುವುದಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಲಾಯಿತು. 
    ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರಾದ ಮಧುಕರ್ ಕಾನಿಟ್ಕರ್,  ಪಕ್ಷದ ಮುಖಂಡರಾದ ಮೈಲಾರಪ್ಪ, ಉದಯ ಕುಮಾರ್, ಶಿವಕುಮಾರ್(ಪೆಟ್ರೋಲ್ ಬಂಕ್), ಸುಬ್ರಮಣ್ಯ, ಮಂಜುಳ, ಶಕುಂತಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆವರೆಗೆ ಜರುಗಿದ ಅಭಿಯಾನದಲ್ಲಿ ನೂರಾರು ಮಂದಿ ಪಾಲ್ಗೊಂಡು ಸದುಪಯೋಗಪಡೆದುಕೊಂಡರು. ಅಭಿಯಾನ ಯಶಸ್ವಿಗೆ ಕಾರಣಕರ್ತರಾದ ಪ್ರತಿಯೊಬ್ಬರಿಗೂ ಜಿ. ಆನಂದಕುಮಾರ್ ಮತ್ತು ಮಂಗೋಟೆ ರುದ್ರೇಶ್ ಕೃತಜ್ಞತೆ ಸಲ್ಲಿಸಿದ್ದಾರೆ. 

No comments:

Post a Comment