ಭದ್ರಾವತಿ : ನಗರದ ಸೈಲ್ ವಿಐಎಸ್ಎಲ್ ಕಾರ್ಖಾನೆ ವತಿಯಿಂದ ವಿಐಎಸ್ಎಲ್ ಸಂಸ್ಥಾಪಕರ ದಿನ, ಸೈಲ್ ಸಂಸ್ಥಾಪನೆ ದಿನ ಮತ್ತು ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಿಐಎಸ್ಎಲ್ ವಸ್ತು ಪ್ರದರ್ಶನ ಉದ್ಘಾಟನೆ ಜ.೧೮ರಂದು ನಡೆಯಲಿದೆ.
ನ್ಯೂಟೌನ್ ವಿಐಎಸ್ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಸಂಜೆ ೭ ಗಂಟೆಗೆ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಉದ್ಘಾಟಿಸಲಿದ್ದಾರೆ. ಸ್ಥಳೀಯ ಪ್ರತಿಭೆಗಳಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾಂಸ್ಕೃತಿಕ ತಂಡಗಳಿಗೆ ಪ್ರತಿಭೆ ಪ್ರದರ್ಶಿಸಲು ವೇದಿಕೆ ಕಲ್ಪಿಸಿ ಕೊಡಲಾಗಿದೆ. ಇದರ ಸದುಪಯೋಗಪಡಿಸಿಕೊಂಡು ಯಶಸ್ವಿಗೊಳಿಸುವಂತೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್ ಕುಮಾರ್ ಕೋರಿದ್ದಾರೆ.
No comments:
Post a Comment