Tuesday, January 7, 2025

ಅಧ್ಯಕ್ಷರಾಗಿ ಟಿ.ಎಸ್ ದುಗ್ಗೇಶ್, ಉಪಾಧ್ಯಕ್ಷರಾಗಿ ಎಂ. ಮಂಜುಳ ಅವಿರೋಧ ಆಯ್ಕೆ

ಟಿ.ಎಸ್ ದುಗ್ಗೇಶ್ 
    ಭದ್ರಾವತಿ: ನಗರದ ಬಿ.ಎಚ್ ರಸ್ತೆ, ಭಾವಸಾರ ಕ್ಷತ್ರಿಯ ಕೋ-ಆಪರೆಟೀವ್ ಸೊಸೈಟಿ ಅಧ್ಯಕ್ಷರಾಗಿ ಟಿ.ಎಸ್ ದುಗ್ಗೇಶ್ ಹಾಗು ಉಪಾಧ್ಯಕ್ಷರಾಗಿ ಎಂ. ಮಂಜುಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
    ೨೦೨೫-೨೦೩೦ನೇ ಸಾಲಿನ ೫ ವರ್ಷದ ಅವಧಿಗೆ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಟಿ.ಎಸ್ ದುಗ್ಗೇಶ್ ಅಧ್ಯಕ್ಷರಾಗಿ ಸತತ ೫ನೇ ಬಾರಿಗೆ ಪುನರಾಯ್ಕೆಯಾಗಿದ್ದು, ಈ ಬಾರಿ ಉಪಾಧ್ಯಕ್ಷರಾಗಿ ಎಂ. ಮಂಜುಳಾ ಆಯ್ಕೆಯಾಗಿದ್ದಾರೆ. ಚುನಾವಣೆ ಪ್ರಕ್ರಿಯೆಯಲ್ಲಿ ಎಲ್ಲಾ ನಿರ್ದೇಶಕರು ಪಾಲ್ಗೊಂಡಿದ್ದರು. ಮುಖ್ಯ ಶಿಕ್ಷಕ ವಿ. ಮೋತಿನಾಯ್ಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. 


ಎಂ. ಮಂಜುಳ  
  ಕಾರ್ಯದರ್ಶಿ ಎ.ಎಸ್ ಜಗದೀಶ ಕುಮಾರ್, ಭಾವಸರ ಕ್ಷತ್ರಿಯ ಸಮಾಜದ ಅಧ್ಯಕ್ಷ ಡಿ.ಕೆ ರಾಘವೇಂದ್ರರಾವ್, ಹಿರಿಯ ಮುಖಂಡರಾದ ಎಂ. ಸತೀಶ್, ಆರ್. ಜಗನ್ನಾಥ್, ಶ್ರೀಧರ, ಮಂಜುನಾಥ ಸ್ವಾಮಿ,  ಆರ್. ರಮೇಶ್ ಸೇರಿದಂತೆ ಇನ್ನಿತರರು ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದ್ದಾರೆ.

No comments:

Post a Comment