Friday, January 10, 2025

ಶ್ರೀ ಕ್ಷೇತ್ರ ನಾಗರಕಟ್ಟೆಯಲ್ಲಿ ವೈಕುಂಠ ಏಕಾದಶಿ-ಸಹಸ್ರ ದೀಪೋತ್ಸವ


ಭದ್ರಾವತಿ ಕಾಗದನಗರ ೭ನೇ ವಾರ್ಡ್ ಶ್ರೀ ಕ್ಷೇತ್ರ ನಾಗರಕಟ್ಟೆಯಲ್ಲಿ ತಾಲೂಕು ವೈಷ್ಣವ ಪರಿಷತ್ ವತಿಯಿಂದ ಶುಕ್ರವಾರ ವೈಕುಂಠ ಏಕಾದಶಿ ಹಾಗು ಸಹಸ್ರ ದೀಪೋತ್ಸವ ಜರುಗಿತು. ಶ್ರೀಕ್ಷೇತ್ರದ ಪ್ರಧಾನ ಅರ್ಚಕ ರಮೇಶ್ ಭಟ್ಟರು ತರಳಿಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಭದ್ರಾವತಿ : ಕಾಗದನಗರ ೭ನೇ ವಾರ್ಡ್ ಶ್ರೀ ಕ್ಷೇತ್ರ ನಾಗರಕಟ್ಟೆಯಲ್ಲಿ ತಾಲೂಕು ವೈಷ್ಣವ ಪರಿಷತ್ ವತಿಯಿಂದ ಶುಕ್ರವಾರ ವೈಕುಂಠ ಏಕಾದಶಿ ಹಾಗು ಸಹಸ್ರ ದೀಪೋತ್ಸವ ಜರುಗಿತು. 
    ಭಕ್ತರಿಗೆ ಬೆಳಿಗ್ಗೆ ೬ ಗಂಟೆಯಿಂದ ವೈಕುಂಠನಾಥ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.  ನಂತರ ಪಲ್ಲಕ್ಕಿ ಉತ್ಸವ ಮತ್ತು ಸಂಜೆ ವೆಂಕಟೇಶ್ವರ ಸ್ವಾಮಿಯವರಿಗೆ ದಾಸನ ಸೇವೆ ಹಾಗು ದೀಪೋತ್ಸವ ಜರುಗಿತು. ಶ್ರೀಕ್ಷೇತ್ರದ ಪ್ರಧಾನ ಅರ್ಚಕ ರಮೇಶ್ ಭಟ್ಟರು ತರಳಿಮಠರವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಸ್ಥಳೀಯ ಮುಖಂಡರು, ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು. 
    ಸಂಕಷ್ಟದ ನಡುವೆಯೂ ಅದ್ದೂರಿ ಆಚರಣೆ : 
    ಕಾರ್ಖಾನೆ ಸ್ಥಗಿತಗೊಂಡು ಸುಮಾರು ೯ ವರ್ಷಗಳು ಕಳೆದಿದ್ದು, ಕಾಗದನಗರ ಸಂಪೂರ್ಣ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಕಾರ್ಮಿಕರ ವಸತಿ ಗೃಹಗಳು ಪಾಳು ಬಿದ್ದಿವೆ. ಈ ಭಾಗದಲ್ಲಿ ಸ್ಮಶಾನ ಮೌನ ಆವರಿಸಿಕೊಂಡಿದೆ. ಇಂತಹ ಸ್ಥಳದಲ್ಲಿರುವ ೭ನೇ ವಾರ್ಡ್ ಶ್ರೀ ಕ್ಷೇತ್ರ ನಾಗರಕಟ್ಟೆಯಲ್ಲಿ ಈ ಬಾರಿ ಸಹ ವಿಜೃಂಭಣೆಯಿಂದ ವೈಕುಂಠ ಏಕಾದಶಿ ಹಾಗು ಸಹಸ್ರ ದೀಪೋತ್ಸವ ಆಚರಿಸಲಾಯಿತು. 


No comments:

Post a Comment