ಭದ್ರಾವತಿ ನಗರದ ಅಂಬೇಡ್ಕರ್ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳ ಬೀಳ್ಕೊಡುಗೆ ಸಮಾರಂಭ ನಗರಸಭೆ ವಾರ್ಡ್ ನಂ.೯ರ ಭದ್ರಾ ಕಾಲೋನಿ ಭದ್ರಾ ಪ್ರೌಢಶಾಲೆಯಲ್ಲಿ ನಡೆಯಿತು.
ಭದ್ರಾವತಿ : ನಗರದ ಅಂಬೇಡ್ಕರ್ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳ ಬೀಳ್ಕೊಡುಗೆ ಸಮಾರಂಭ ನಗರಸಭೆ ವಾರ್ಡ್ ನಂ.೯ರ ಭದ್ರಾ ಕಾಲೋನಿ ಭದ್ರಾ ಪ್ರೌಢಶಾಲೆಯಲ್ಲಿ ನಡೆಯಿತು.
ಶಾಲೆಯ ಮುಖ್ಯ ಶಿಕ್ಷಕ ಸಿ.ಎಸ್ ನಾಗರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಹ ಶಿಕ್ಷಕ ಶಿವ್ಯಾನಾಯ್ಕ ಮಾತನಾಡಿ, ಜೀವನದಲ್ಲಿ ಶಿಕ್ಷಕರು ಶಿಸ್ತನ್ನು ಕಾಪಾಡಿಕೊಳ್ಳಬೇಕು ಸಮಯ ಪಾಲನೆ ಮಾಡಿಕೊಳ್ಳಬೇಕು. ಮಕ್ಕಳಿಗೆ ಒಂದು ಗಂಟೆ ಬೋಧಿಸಲು ನಾವು ಮೂರು ಗಂಟೆಗಳ ಕಲಿಕೆ ಮಾಡಬೇಕಾದ ಅಗತ್ಯತೆ ಇದೆ. ಎಲ್ಲಾ ವಿಷಯಗಳಲ್ಲೂ ಪರಿಪೂರ್ಣತೆ ಹೊಂದಬೇಕು. ಆಗ ಮಾತ್ರ ಉತ್ತಮ ಶಿಕ್ಷಕರಾಗಿ ಹೊರಹೊಮ್ಮಲು ಸಾಧ್ಯ ಎಂದರು.
ಶಿಕ್ಷಕ ಶ್ರೀನಿವಾಸ್ ಜಾಜೂರ್ ಹೊಸ ವರ್ಷದ ಶುಭಾಶಯಗಳನ್ನು ಕೋರುತ್ತಾ ಹೊಸ ವರುಷದಲ್ಲಿ ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಜೀವನದ ಗುರಿ ಮುಟ್ಟುವ ವ್ಯಕ್ತಿತ್ವ ರೂಪಿಸಿಕೊಳ್ಳಬೇಕಾಗಿದೆ ಎಂದರು.
ಶಿವಕುಮಾರ್ ಹೊನ್ನತ್ತಿ, ಶಶಿಕುಮಾರ್, ಬಾಲು ಹಾಗು ವಿದ್ಯಾರ್ಥಿಗಳು ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
Super sir.... Thanku
ReplyDelete