Monday, January 20, 2025

ಎಸ್‌ಡಬ್ಲ್ಯೂಐಎಎ ರಾಷ್ಟ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ರಂಗ ಕಲಾವಿದೆ, ಶಿಕ್ಷಕಿ ಲಕ್ಷ್ಮಿ

ದಕ್ಷಿಣ ಭಾರತೀಯ ಮಹಿಳಾ ಸಾಧನೆಯ ರಾಷ್ಟ್ರ ಪ್ರಶಸ್ತಿ ಎಸ್‌ಡಬ್ಲ್ಯೂಐಎಎ-೨೦೨೪ ಮುಡಿಗೇರಿಸಿಕೊಳ್ಳುವ ಮೂಲಕ ಭದ್ರಾವತಿ ನಗರದ ಲಕ್ಷ್ಮಿ ಭದ್ರಾವತಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
    ಭದ್ರಾವತಿ : ದಕ್ಷಿಣ ಭಾರತೀಯ ಮಹಿಳಾ ಸಾಧನೆಯ ರಾಷ್ಟ್ರ ಪ್ರಶಸ್ತಿ ಎಸ್‌ಡಬ್ಲ್ಯೂಐಎಎ-೨೦೨೪ ಮುಡಿಗೇರಿಸಿಕೊಳ್ಳುವ ಮೂಲಕ ನಗರದ ಲಕ್ಷ್ಮಿ ಭದ್ರಾವತಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
    ದಕ್ಷಿಣ ಭಾರತದಲ್ಲೇ ರಂಗಭೂಮಿ ಕಲಾವಿದೆಯ ಸಾಧನೆಯ ಪ್ರಶಸ್ತಿಗೆ ಆಯ್ಕೆಯಾದ ಏಕೈಕ ಕಲಾವಿದೆ ಎಂಬ ಕೀರ್ತಿಗೆ ಲಕ್ಷ್ಮಿ ಪಾತ್ರರಾಗಿದ್ದಾರೆ. ಸೌಂದರ್ಯ ಮತ್ತು ಪ್ರತಿಭೆ ಇವರ ಸಾಧನೆಗೆ ಪೂರಕವಾಗಿವೆ. ತಂದೆಯ ಪ್ರೇರಣೆಯಿಂದ ವಿದ್ಯಾಭ್ಯಾಸದ ಜೊತೆ ಜೊತೆಗೆ ೯ನೇ ತರಗತಿಯಿಂದಲೇ ರಂಗಭೂಮಿಯಲ್ಲಿ ಗುರುತಿಸಿಕೊಂಡಿದ್ದು, ಹಲವು ಸಾಧನೆಗಳನ್ನು ಮಾಡಿದ್ದಾರೆ.  
    ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ಇವರು ಅನೇಕ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಶಾಲೆ ಮುಗಿದ ಬಳಿಕ ರಂಗ ಶಿಬಿರಗಳಲ್ಲಿ ಭಾಗವಹಿಸುವ ಜೊತೆಗೆ ಅದೆಷ್ಟೋ ಶಾಲಾ ಕಾಲೇಜುಗಳಿಗೆ ಉಚಿತವಾಗಿ ನಾಟಕ ಹಾಗೂ ನೃತ್ಯಗಳನ್ನು ಕಲಿಸಿ ಕೊಡುತ್ತಿದ್ದಾರೆ. ಯಾವುದೇ ವಿಷಯ ನೀಡಿದರೂ ಅದ್ಬುತವಾಗಿ ಉಪನ್ಯಾಸ ಮಂಡಿಸುವ ವಾಕ್ಚಾತುರ್ಯ ಹೊಂದಿರುವುದು ಇವರ ಮತ್ತೊಂದು ವಿಶೇಷತೆಯಾಗಿದೆ.  
    ಇವರು ತಮ್ಮ ಸಾಧನೆಯ ದಾರಿಯಲ್ಲಿ ಸಾಕಷ್ಟು ವೈಫಲ್ಯಗಳನ್ನು ಅನುಭವಿಸಿದ್ದು,  ಪ್ರತಿ ವಿಫಲ ಪ್ರಯತ್ನದಿಂದ ಯಶಸ್ಸು ಕಂಡುಕೊಂಡಿದ್ದಾರೆ. ಕುಟುಂಬದ ಬೆಂಬಲ, ಅಭಿಮಾನಿಗಳ ಪ್ರೀತಿಯಿಂದ ಪ್ರಸ್ತುತ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದ್ದಾರೆ. ಇವರ ಸಾಧನೆಗೆ ನಗರದ ಗಣ್ಯರು, ಅಭಿಮಾನಿಗಳು ಅಭಿನಂದಿಸಿದ್ದಾರೆ. 

No comments:

Post a Comment