ಇತ್ತೀಚಿನ ದಿನಗಳಲ್ಲಿ ಅತ್ಯಂತ ಕಳವಳಕಾರಿಯಾಗಿರುವ ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದರ ಬಗ್ಗೆ ಜಾಗೃತಿ ಮೂಡಿಸಲು, `ಸೈಬರ್ ಕ್ರೈಂ ಜಾಗೃತಿ- ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು ಮತ್ತು ತಡೆಗಟ್ಟುವ ಕ್ರಮಗಳು' ಎಂಬ ವಿಚಾರ ಕುರಿತು ಭದ್ರಾವತಿಯಲ್ಲಿ ಸೈಲ್-ವಿಐಎಸ್ಎಲ್ ವತಿಯಿಂದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ: ಇತ್ತೀಚಿನ ದಿನಗಳಲ್ಲಿ ಅತ್ಯಂತ ಕಳವಳಕಾರಿಯಾಗಿರುವ ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದರ ಬಗ್ಗೆ ಜಾಗೃತಿ ಮೂಡಿಸಲು, `ಸೈಬರ್ ಕ್ರೈಂ ಜಾಗೃತಿ- ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು ಮತ್ತು ತಡೆಗಟ್ಟುವ ಕ್ರಮಗಳು' ಎಂಬ ವಿಚಾರ ಕುರಿತು ನಗರದ ಸೈಲ್-ವಿಐಎಸ್ಎಲ್ ವತಿಯಿಂದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರದಲ್ಲಿ ಅಧಿಕಾರಿಗಳು ಹಾಗು ಕಾರ್ಮಿಕರು ಒಟ್ಟು ೧೦೩ ಮಂದಿ ಪಾಲ್ಗೊಂಡಿದ್ದರು. ಶಿವಮೊಗ್ಗ ಸೈಬರ್ ಕ್ರೈಂ ಮತ್ತು ನಾರ್ಕೋಟಿಕ್ಸ್ ವಿಭಾಗದ ಉಪ ಪೊಲೀಸ್ ಅಧೀಕ್ಷಕ ಕೆ. ಕೃಷ್ಣಮೂರ್ತಿ ಕಾರ್ಯಾಗಾರ ನಡೆಸಿಕೊಟ್ಟರು.
ಪ್ರತಿಯೊಬ್ಬರೂ ತಮ್ಮ ಎಲ್ಲಾ ವ್ಯವಹಾರಗಳಲ್ಲಿ ಜಾಗರೂಕರಾಗಿರಬೇಕು ಮತ್ತು ಸೈಬರ್ ಅಪರಾಧದ ನಿದರ್ಶನಗಳು ವರದಿಯಾದಾಗ ಪೊಲೀಸರಿಗೆ ತಿಳಿಸಲು ಅಥವಾ ಟೋಲ್ ಫ್ರೀ ಸಂಖ್ಯೆ ೧೯೩೦ನ್ನು ಸಂಪರ್ಕಿಸಲು ಸೂಚಿಸಿದರು.
ಸೈಬರ್ ಕ್ರಿಮಿನಲ್ಗಳಿಂದ ವಂಚನೆಗೊಳಗಾದವರು ತಮ್ಮ ಅನುಭವಗಳನ್ನು ಹಂಚಿಕೊಳ್ಳಲು ಹಿಂಜರಿಯಬಾರದು ಮತ್ತು `ಗೋಲ್ಡನ್ ಅವರ್' ಒಳಗಡೆ ಅಂದರೆ ಅಪರಾಧ ನಡೆದ ಸಮಯದಿಂದ ೧ ಘಂಟೆ ಒಳಗಡೆ ಈ ಸಮಯ ಬಹಳ ಮುಖ್ಯವಾಗಿದ್ದು, ಈ ಸಮಯದಲ್ಲಿ ದೂರನ್ನು ದಾಖಲಿಸಿದ್ದಲ್ಲಿ ಕಳೆದುಕೊಂಡ ಹಣ ಹಿಂದಿರುಗಿ ಪಡೆಯುವ ಸಾಧ್ಯತೆ ಹೆಚ್ಚು ಎಂದರು.
ಪ್ರಸ್ತುತ ದಾಖಲಾಗಿರುವ ದೂರುಗಳು, ಅರಿವು ಮೂಡಿಸುವ ವೀಡಿಯೋಗಳೊಂದಿಗೆ ಮಾಹಿತಿ ನೀಡಲಾಯಿತು. ಅಲ್ಲದೆ ಅಧಿಕಾರಿಗಳು ಹಾಗು ಕಾರ್ಮಿಕರೊಂದಿಗೆ ಸಂವಾದ ನಡೆಸಲಾಯಿತು. ಈ ಹಿಂದೆ ನ.೧೧ರಂದು ಸಹ ಸೈಬರ್ ಅಪರಾಧ ಜಾಗೃತಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಸಹಾಯಕ ಪೊಲೀಸ್ ಉಪನಿರೀಕ್ಷಕ ವಿರೂಪಾಕ್ಷಪ್ಪ, ವಿಐಎಸ್ಎಲ್ ಕಾರ್ಖಾನೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್ಕುಮಾರ್ ಉಪಸ್ಥಿತರಿದ್ದರು.
No comments:
Post a Comment