Wednesday, January 22, 2025

ಪರಮೇಶ್ವರ್, ತಿಪ್ಪೇಸ್ವಾಮಿಗೆ ಸವಿತಾ ಸಮಾಜದಿಂದ ಸನ್ಮಾನ



ಶಿವಮೊಗ್ಗ ಜಿಲ್ಲಾ ಸವಿತಾ ಸಮಾಜದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಎಂ. ಪರಮೇಶ್ವರ್ ಮತ್ತು ಕೂಡ್ಲಿಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾಗಿರುವ ತಿಪ್ಪೇಸ್ವಾಮಿಯವರನ್ನು ಭದ್ರಾವತಿ ತಾಲೂಕು ಸವಿತಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.  
    ಭದ್ರಾವತಿ : ಶಿವಮೊಗ್ಗ ಜಿಲ್ಲಾ ಸವಿತಾ ಸಮಾಜದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಎಂ. ಪರಮೇಶ್ವರ್ ಮತ್ತು ಕೂಡ್ಲಿಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾಗಿರುವ ತಿಪ್ಪೇಸ್ವಾಮಿಯವರನ್ನು ತಾಲೂಕು ಸವಿತಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.   
    ಹಳೇನಗರದ ಸವಿತಾ ಸಮಾಜದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಎಂ. ಪರಮೇಶ್ವರ್ ಮತ್ತು ತಿಪ್ಪೇಸ್ವಾಮಿಯರನ್ನು ಸನ್ಮಾನಿಸಿ ಉತ್ತಮವಾಗಿ ಸೇವೆ ಸಲ್ಲಿಸುವ ಜೊತೆಗೆ ಸಮಾಜವನ್ನು ಮತ್ತಷ್ಟು ಸಂಘಟಿಸುವ ಮೂಲಕ ಏಳಿಗೆಗೆ ಶ್ರಮಿಸುವಂತೆ ಕೋರಲಾಗಿದೆ. 
      ಸಮಾಜದ ತಾಲೂಕು ಅಧ್ಯಕ್ಷ ವಿಶ್ವನಾಥ್, ಉಪಾಧ್ಯಕ್ಷ ಓಬಳೇಶ್, ಪ್ರಧಾನ ಕಾರ್ಯದರ್ಶಿ ರೆಡ್‌ಸನ್ ರಾಜು, ಸಹ ಕಾರ್ಯದರ್ಶಿ ಮಹೇಶ್ ಕುಮಾರ್, ಖಜಾಂಚಿ ನರಸಿಂಹಮೂರ್ತಿ, ಪ್ರಮುಖರಾದ ಶಿವಶಂಕರ್, ಗೋಪಿನಾಥ್, ಶಿವಪ್ರಸಾದ್, ವೆಂಕಟೇಶ್, ಗಣೇಶ್, ಸುರೇಶ್, ಜೋರಪ್ಪ, ಎಂಪೈರ್ ಲೋಕೇಶ್ ಸೇರಿದಂತೆ ಸೇರಿದಂತೆ ಸವಿತಾ ಸಮಾಜದ ಪದಾಧಿಕಾರಿಗಳು, ಹಿರಿಯರು, ಮುಖಂಡರು ಉಪಸ್ಥಿತರಿದ್ದರು.  

No comments:

Post a Comment