Sunday, January 26, 2025

ರೈಲ್ವೆ ಮೇಲ್ಸೇತುವೆ ಕೆಳಭಾಗದಲ್ಲಿ ಮೊದಲ ಫುಡ್ ಕೋರ್ಟ್ ಉದ್ಘಾಟನೆ

ಭದ್ರಾವತಿ ನಗರಸಭೆ ವತಿಯಿಂದ ಬಹು ವರ್ಷಗಳ ಬೇಡಿಕೆಯಂತೆ ನಗರದ ಮಹಾತ್ಮಗಾಂಧಿ ರಸ್ತೆ (ಟಿ.ಕೆ ರಸ್ತೆ)ಯ ರೈಲ್ವೆ ಮೇಲ್ಸೇತುವೆ ಕೆಳಭಾಗದಲ್ಲಿ ಫುಡ್‌ಕೋರ್ಟ್ ನಿರ್ಮಿಸಲಾಗಿದ್ದು, ಜ.೨೬ ಗಣರಾಜ್ಯೋತ್ಸವದಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. 
    ಭದ್ರಾವತಿ: ನಗರಸಭೆ ವತಿಯಿಂದ ಬಹು ವರ್ಷಗಳ ಬೇಡಿಕೆಯಂತೆ ನಗರದ ಮಹಾತ್ಮಗಾಂಧಿ ರಸ್ತೆ (ಟಿ.ಕೆ ರಸ್ತೆ)ಯ ರೈಲ್ವೆ ಮೇಲ್ಸೇತುವೆ ಕೆಳಭಾಗದಲ್ಲಿ ಫುಡ್‌ಕೋರ್ಟ್ ನಿರ್ಮಿಸಲಾಗಿದ್ದು, ಜ.೨೬ ಗಣರಾಜ್ಯೋತ್ಸವದಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. 
    ವಾರ್ಡ್ ನಂ. ೧೩, ೧೬ ಮತ್ತು ೧೭ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬೀದಿಬದಿ ವ್ಯಾಪಾರಸ್ಥರಿಗೆ ಅನುಕೂಲವಾಗುವಂತೆ ನಗರಸಭೆ ಅನುದಾನದಲ್ಲಿ ಒಟ್ಟು ೯ ಲಕ್ಷ ರು. ವೆಚ್ಚದಲ್ಲಿ ಫುಡ್‌ಕೋರ್ಟ್ ನಿರ್ಮಿಸಲಾಗಿದ್ದು, ಪ್ರಸ್ತುತ ಬೇಡಿಕೆಯಂತೆ ಒಟ್ಟು ೨೮ ವ್ಯಾಪಾರಿಗಳಿಗೆ ಮಳಿಗೆಗಳನ್ನು ನಿರ್ಮಿಸಲಾಗಿದೆ. ಸದ್ಯಕ್ಕೆ ಪ್ಲಾಟ್ ಫಾರಂ, ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ  ಕಲ್ಪಿಸಲಾಗಿದೆ.  ಮುಂದಿನ ದಿನಗಳಲ್ಲಿ ಶೌಚಾಲಯ ಸಹ ನಿರ್ಮಾಣವಾಗಲಿದೆ.  
    ಇದು ನಗರಸಭೆ ವತಿಯಿಂದ ನಿರ್ಮಿಸಲಾಗಿರುವ ಮೊದಲ ಫುಡ್‌ಕೋರ್ಟ್ ಆಗಿದ್ದು, ಹಳೇನಗರದ ಬಸವೇಶ್ವರ ವೃತ್ತ ಹಾಗು ಜನ್ನಾಪುರ ವಾಣಿಜ್ಯ ರಸ್ತೆಯಲ್ಲಿ ಫುಡ್‌ಕೋರ್ಟ್‌ಗಳ ನಿರ್ಮಾಣಕ್ಕೆ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ. 
    ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಸೂಡಾ ಸದಸ್ಯ ಎಚ್. ರವಿಕುಮಾರ್  ಸೇರಿದಂತೆ ನಗರಸಭೆ ಚುನಾಯಿತ ಹಾಗು ನಾಮನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು. 

No comments:

Post a Comment