Friday, January 24, 2025

ತರಂಗರಂಗ ಸಭಾಗೃಹ ಉದ್ಘಾಟನೆ : ಕಾರ್ಯದರ್ಶಿ ಎಸ್.ಎನ್ ಸುಭಾಷ್‌ಗೆ ಸನ್ಮಾನ

ಶಿವಭದ್ರ ಟ್ರಸ್ಟ್ ವತಿಯಿಂದ ಆರಂಭಿಸಲಾಗಿರುವ ಭದ್ರಾವತಿ ನಗರದ ನ್ಯೂಟೌನ್ ತರಂಗ ಕಿವುಡು ಮಕ್ಕಳ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಕಾರ್ಯದರ್ಶಿಯಾಗಿ ಸುಮಾರು ೪ ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಎಸ್.ಎನ್ ಸುಭಾಷ್‌ರವರನ್ನು ಶಾಲೆಯ ತರಂಗರಂಗ ಸಭಾಗೃಹದ ಉದ್ಘಾಟನೆ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ : ಶಿವಭದ್ರ ಟ್ರಸ್ಟ್ ವತಿಯಿಂದ ಆರಂಭಿಸಲಾಗಿರುವ ನಗರದ ನ್ಯೂಟೌನ್ ತರಂಗ ಕಿವುಡು ಮಕ್ಕಳ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಕಾರ್ಯದರ್ಶಿಯಾಗಿ ಸುಮಾರು ೪ ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಎಸ್.ಎನ್ ಸುಭಾಷ್‌ರವರನ್ನು ಶಾಲೆಯ ತರಂಗರಂಗ ಸಭಾಗೃಹದ ಉದ್ಘಾಟನೆ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
    ಟ್ರಸ್ಟ್ ವತಿಯಿಂದ ಲಯನ್ಸ್ ಕ್ಲಬ್ ಶುಗರ್ ಟೌನ್ ಸಹಯೋಗದೊಂದಿಗೆ ಶಾಲೆಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬರಲಾಗುತ್ತಿದ್ದು, ಶಿಥಿಲಗೊಂಡಿದ್ದ ಕಟ್ಟಡವನ್ನು ಶಾಸಕರ ಅನುದಾನ ಹಾಗು ಕ್ಲಬ್ ಆರ್ಥಿಕ ನೆರವಿನೊಂದಿಗೆ ನವೀಕರಣಗೊಳಿಸಲಾಗಿದೆ. ಜೊತೆಗೆ ನೂತನವಾಗಿ ತರಂಗರಂಗ ಸಭಾಗೃಹ ನಿರ್ಮಿಸಲಾಗಿದೆ. ಇದರ ಉದ್ಘಾಟನೆಯನ್ನು ನಗರದ ಹಿರಿಯ ಮುಖಂಡ, ಉದ್ಯಮಿ ಬಿ.ಕೆ ಜಗನ್ನಾಥ್ ನೆರವೇರಿಸಿದ್ದು, ಕಾರ್ಯಕ್ರಮದ ಅಂಗವಾಗಿ ಎಸ್.ಎನ್ ಸುಭಾಷ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಶಿವಮೊಗ್ಗದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ವಿಕಲಚೇತನರ ಹಾಗು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸುವರ್ಣ ವಿ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಗರಸಭೆ ಮಾಜಿ ಉಪಾಧ್ಯಕ್ಷ ಚನ್ನಪ್ಪ, ಲಯನ್ಸ್ ಕ್ಲಬ್ ಶುಗರ್ ಟೌನ್ ಪ್ರಮುಖರಾದ ಡಾ.ಟಿ ನರೇಂದ್ರ ಭಟ್, ಆರ್. ಉಮೇಶ್, ಅನಂತ ಕೃಷ್ಣ ನಾಯಕ್, ತಾರಾಮಣಿ ಹಾಗು ಟ್ರಸ್ಟ್  ಸದಸ್ಯರು ಮತ್ತು ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

No comments:

Post a Comment