Wednesday, February 19, 2025

ಅಂಬೇಡ್ಕರ್‌ರವರ ೧೨ ಅಡಿ ಎತ್ತರದ ಕಂಚಿನ ಪ್ರತಿಮೆಗೆ ಹಾಲಿನ ಅಭಿಷೇಕ

ವಿವಿಧ ಬೇಡಿಕೆಗಳ ಈಡೇರಿಕೆಗೆ ಮುಖ್ಯಮಂತ್ರಿಗಳಿಗೆ ಮನವಿ 


ಭದ್ರಾವತಿ: ನಗರದ ಬಿ.ಎಚ್ ರಸ್ತೆ, ಅಂಡರ್‌ಬ್ರಿಡ್ಜ್ ಬಳಿ, ಅಂಬೇಡ್ಕರ್ ವೃತ್ತದಲ್ಲಿ ನೂತನವಾಗಿ ಉದ್ಘಾಟನೆಗೊಂಡಿರುವ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಪುತ್ಥಳಿಗೆ ಕರ್ನಾಟಕ ರಾಜ್ಯ ಚಾಣುಕ್ಯ ಸೇನೆ ವತಿಯಿಂದ ಬುಧವಾರ ಹಾಲಿನ ಅಭಿಷೇಕದೊಂದಿಗೆ ಬೃಹತ್ ಹೂವಿನ ಮಾಲಾರ್ಪಣೆ ನಡೆಯಿತು.
    ಭದ್ರಾವತಿ: ನಗರದ ಬಿ.ಎಚ್ ರಸ್ತೆ, ಅಂಡರ್‌ಬ್ರಿಡ್ಜ್ ಬಳಿ, ಅಂಬೇಡ್ಕರ್ ವೃತ್ತದಲ್ಲಿ ನೂತನವಾಗಿ ಉದ್ಘಾಟನೆಗೊಂಡಿರುವ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಪುತ್ಥಳಿಗೆ ಕರ್ನಾಟಕ ರಾಜ್ಯ ಚಾಣುಕ್ಯ ಸೇನೆ ವತಿಯಿಂದ ಬುಧವಾರ ಹಾಲಿನ ಅಭಿಷೇಕದೊಂದಿಗೆ ಬೃಹತ್ ಹೂವಿನ ಮಾಲಾರ್ಪಣೆ ನಡೆಯಿತು.
    ನಗರಸಭೆ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ೧೨ ಅಡಿ ಎತ್ತರದ ಡಾ. ಬಿ.ಆರ್ ಅಂಬೇಡ್ಕರ್‌ರವರ ನೂತನ ಕಂಚಿನ ಪ್ರತಿಮೆ ಜ.೨೬ರಂದು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟನೆಗೊಳಿಸಿದ್ದರು. ಕರ್ನಾಟಕ ರಾಜ್ಯ ಚಾಣುಕ್ಯ ಸೇನೆ ವತಿಯಿಂದ ಪ್ರತಿಮೆಗೆ ಹಾಲಿನ ಅಭಿಷೇಕದೊಂದಿಗೆ ಬೃಹತ್ ಹೂವಿನ ಮಾಲಾರ್ಪಣೆ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಮಾಡಲಾಯಿತು. 
    ಡಾ. ಬಿ.ಆರ್ ಅಂಬೇಡ್ಕರ್‌ರವರ ಜನ್ಮದಿನಾಚರಣೆ ಅಂಗವಾಗಿ ರಾಜ್ಯದ ವಿವಿಧ ಸಂಘ ಸಂಸ್ಥೆಗಳಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿಗಳಿಗೆ ಡಾ. ಬಿ.ಆರ್ ಅಂಬೇಡ್ಕರ್‌ರವರ ಪ್ರಶಸ್ತಿ ನೀಡಿ ಗೌರವಿಸುವುದರ ಜೊತೆಗೆ ಪ್ರಶಸ್ತಿ ಪುರಸ್ಕೃತರಿಗೆ ೫ ಲಕ್ಷ ರು. ಸಹಾಯ ಧನ ನೀಡುವುದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಾಸಂಖ್ಯಾತರ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ (ಸೋನಮಸೂರಿ) ಅಕ್ಕಿ ನೀಡುವುದು. ರಾಜ್ಯದಲ್ಲಿ ವಿಧವೆಯರ ಅಭಿವೃದ್ದಿ ನಿಗಮ ಸ್ಥಾಪಿಸಿ, ಆ ನಿಗಮಕ್ಕೆ ವಿಧವೆ ಮಹಿಳೆಯರನ್ನು ಮಾತ್ರ ಅಧ್ಯಕ್ಷರನ್ನಾಗಿ ಮಾಡುವಂತೆ ಒತ್ತಾಯಿಸಲಾಗಿದೆ. 
    ರಾಜ್ಯದ ಎಲ್ಲಾ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವವರನ್ನು ಸರ್ಕಾರ `ಡಿ' ಗ್ರೂಪ್ ನೌಕರರೆಂದು ಪರಿಗಣಿಸಿ ಅವರಿಗೆ ಪ್ರತಿ ತಿಂಗಳು ಏಜೆನ್ಸಿ ಮೂಲಕ ವೇತನ ನೀಡುವ ಬದಲಿಗೆ ಜಿಲ್ಲಾಧಿಕಾರಿಗಳ ಮೂಲಕ ನೀಡುವುದು. ಅವರ ಪ್ರತಿ ತಿಂಗಳ ವೇತನ ಸುಮಾರು ೩೫ ಸಾವಿರ ರು.ಗಳಿಗೆ ಹೆಚ್ಚಿಸುವುದು. ರಾಜ್ಯದ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಋತು ಚಕ್ರದ ರಜೆ ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಗಿದ್ದು, ಒಂದು ವೇಳೆ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ರಾಜ್ಯ ವ್ಯಾಪ್ತಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಲಾಗಿದೆ.  
    ಕರ್ನಾಟಕ ರಾಜ್ಯ ಚಾಣುಕ್ಯ ಸೇನೆ ರಾಜ್ಯಾಧ್ಯಕ್ಷ ನಾರಾಯಣ ಐಹೊಳೆ, ಆದಿ ಜಾಂಬವ ರಾಜ್ಯಾಧ್ಯಕ್ಷ ಪ್ರಕಾಶ್, ಕರ್ನಾಟಕ ಅಂಬೇಡ್ಕರ್ ವೈಚಾರಿಕೆ ವೇದಿಕೆ ಸಂಚಾಲಕ ಪಿ. ಮೂರ್ತಿ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.  

No comments:

Post a Comment