ಭದ್ರಾವತಿ ಹೊಸ ಸೇತುವೆ ರಸ್ತೆ, ಸಿದ್ದಾರೂಢನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಅಧ್ಯಕ್ಷರಾದ ಬಿ. ಸಿದ್ದಬಸಪ್ಪ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಭದ್ರಾವತಿ : ನಗರದ ಹೊಸ ಸೇತುವೆ ರಸ್ತೆ, ಸಿದ್ದಾರೂಢನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಅಧ್ಯಕ್ಷರಾದ ಬಿ. ಸಿದ್ದಬಸಪ್ಪ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಸಿದ್ದಬಸಪ್ಪ ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿದ್ದು, ಇದೀಗ ರಾಜ್ಯ ಉಪಾಧ್ಯಕ್ಷರಾಗಿ ಸಹ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ವತಿಯಿಂದ ಸಿದ್ದಬಸಪ್ಪರನ್ನು ಸನ್ಮಾನಿಸಿ ಗೌರವಿಸಲಾಯಿತು.
ವಿದ್ಯಾಸಂಸ್ಥೆ ಕಾರ್ಯದರ್ಶಿ ಎಸ್. ಕೆ ಮೋಹನ್, ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ, ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗು ಶಿಕ್ಷಕರು ಉಪಸ್ಥಿತರಿದ್ದರು.
No comments:
Post a Comment