ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಸಲಹಾ ಸಮಿತಿ ಸಭೆ ಶನಿವಾರ ನಡೆಯಿತು.
ಭದ್ರಾವತಿ : ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಅಹವಾಲುಗಳನ್ನು ನೋಂದಾಯಿಸಲು ನೋಂದಣಿ ಪುಸ್ತಕದ ಕಡ್ಡಾಯ ನಿರ್ವಹಣೆ, ಸಿಸಿ ಕ್ಯಾಮೆರಾಗಳ ಅಳವಡಿಕೆ, ದೂರದರ್ಶನ ವ್ಯವಸ್ಥೆ ಸೇರಿದಂತೆ ಹಲವು ಸೌಲಭ್ಯಗಳ ಜೊತೆಗೆ ಇನ್ನಿತರ ಅಭಿವೃದ್ಧಿ ಕಾರ್ಯಗಳು ಕೈಗೊಳ್ಳುವಂತೆ ಶನಿವಾರ ನಡೆದ ರೈಲ್ವೆ ಸಲಹಾ ಸಮಿತಿ ವಿಶೇಷ ಸಭೆಯಲ್ಲಿ ಮನವಿ ಮಾಡಲಾಯಿತು.
ನಿಲ್ದಾಣದಲ್ಲಿ ಪ್ರದರ್ಶನ ಫಲಕಗಳು ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುವುದು, ಶೌಚಾಲಯಗಳ ಸ್ವಚ್ಛತೆ, ಲಿಫ್ಟ್ ಸೌಲಭ್ಯ ಒದಗಿಸುವುದು, ಅಪೂರ್ಣಗೊಂಡ ಶೆಲ್ಟರ್ ಕಾಮಗಾರಿ ಪೂರ್ಣಗೊಳಿಸುವುದು,, ನಿಲ್ದಾಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದು, ಲೋಯರ್ ಹುತ್ತಾ ರೈಲ್ವೆ ಕೆಳಸೇತುವೆಯಲ್ಲಿ ಒಳಚರಂಡಿ ವ್ಯವಸ್ಥೆ ಕೈಗೊಳ್ಳುವುದು, ಐಟಿಐ ಹಾಗೂ ಭಂಡಾರಹಳ್ಳಿ ಮಧ್ಯೆ ಹಾದು ಹೋಗುವ ರೈಲ್ವೆ ಹಳಿಗಳ ಭದ್ರತೆಗಾಗಿ ಫೆನ್ಸಿಂಗ್ ವ್ಯವಸ್ಥೆ ಕೈಗೊಳ್ಳುವುದು ಮತ್ತು ರೈಲ್ವೆ ನಿಲ್ದಾಣದ ಹೊರಗೆ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಸೂಕ್ತ ಕ್ರಮ, ಕೈಗೊಳ್ಳುವಂತೆ ಸಭೆಯಲ್ಲಿ ರೈಲ್ವೆ ಅಧಿಕಾರಿಗಳಿಗೆ ಮನವಿ ಮಾಡಿದರು.
ಅಭಿವೃದ್ಧಿ ವಿಚಾರದಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳು ಕೈಗೊಳ್ಳುವಂತೆ ಸಲಹೆ ನೀಡಲಾಯಿತು.
ರೈಲ್ವೆ ವಾಣಿಜ್ಯ ವಿಭಾಗದ ನಿರೀಕ್ಷಕ ಮಂಜುನಾಥ್, ನಿಲ್ದಾಣದ ಮೇಲ್ವಿಚಾರಕ ಮೋಹನ್ ಮಿಶ್ರ , ವಿಭಾಗೀಯ ಅಭಿಯಂತರ ಅಭಿಲಾಷ್, ಆರ್.ಪಿ.ಎಫ್, ರಘುನಾಥ್, ವಾಣಿಜ್ಯ ವಿಭಾಗದ ಮೇಲ್ವಿಚಾರಕರಾದ ಪ್ರವೀಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ರೈಲ್ವೆ ಸಲಹಾ ಸಮಿತಿ ಸದಸ್ಯರಾದ ಶ್ರೀವತ್ಸ, ರವಿಕುಮಾರ್, ಲತಾ ಪ್ರಭಾಕರ್ , ಕರುಣಾಕರ್ ಹಾಗೂ ಕೃಷ್ಣಚಲವಾದಿ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment