Wednesday, February 5, 2025

ರಥಸಪ್ತಮಿ ಅಂಗವಾಗಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಉತ್ಸವ ಮೆರವಣಿಗೆ

ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಥಸಪ್ತಮಿ ಅಂಗವಾಗಿ ಸ್ವಾಮಿಯ ಉತ್ಸವ ಜರುಗಿತು. 
    ಭದ್ರಾವತಿ : ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಥಸಪ್ತಮಿ ಅಂಗವಾಗಿ ಸ್ವಾಮಿಯ ಉತ್ಸವ ಜರುಗಿತು. 
    ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ಶ್ರೀ ರಂಗನಾಥ ಶರ್ಮರವರ ನೇತೃತ್ವದಲ್ಲಿ ಬೆಳಿಗ್ಗೆ ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ಸ್ವಾಮಿಯ ಉತ್ಸವ ಮೆರವಣಿಗೆ ನಡೆಯಿತು. ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗು ಕುಂಭಮೇಳದ ಗಂಗಾ ಜಲ ವಿತರಣೆ ನಡೆಯಿತು. ದೇವಸ್ಥಾನದ ಸಹಾಯಕ ಅರ್ಚಕ ಶ್ರೀನಿವಾಸನ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಜಿ. ರಮಾಕಾಂತ್, ನರಸಿಂಹಚಾರ್, ಕೃಷ್ಣಪ್ಪ, ಶಂಕರಪ್ಪ, ರವಿ ಮಾಸ್ಟರ್, ಶರತ್, ಶ್ರೀಕಾಂತ್, ಪ್ರದೀಪ್, ಶೇಷಗಿರಿ ಮಾಸ್ಟರ್, ಡೆಕೋರೇಟ್ ಸಂಜು, ವಿವಿಧ ಭಜನಾ ತಂಡದ ಮಹಿಳೆಯರು, ವೇದ ಪಾಠ ಶಾಲೆ ವಿದ್ಯಾರ್ಥಿಗಳು ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು. 
    ರಥಬೀದಿ ರಸ್ತೆ ದುರಸ್ತಿಗೊಳಿಸಿ : 
    ದೇವಸ್ಥಾನ ಮುಂಭಾಗದ ರಥಬೀದಿ ರಸ್ತೆ ಹಲವಾರು ವರ್ಷಗಳಿಂದ ಹಾಳಾಗಿದ್ದು, ಇದರಿಂದಾಗಿ ರಥೋತ್ಸವ ನಡೆಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ನಗರಸಭೆ ಆಡಳಿತ ಗಮನ ಹರಿಸಿ ಮುಂದಿನ ಮಹಾರಥೋತ್ಸವದೊಳಗಾಗಿ ಹಾಳಾದ ರಸ್ತೆ ದುರಸ್ತಿಗೊಳಿಸಿ ಡಾಬರೀಕರಣ ಕೈಗೊಂಡು ಅನುಕೂಲ ಮಾಡಿಕೊಡುವಂತೆ ಸ್ಥಳೀಯ ಭಕ್ತರು ಕೋರಿದ್ದಾರೆ. 

No comments:

Post a Comment