Wednesday, February 19, 2025

ಹಿಂದೂ ಧರ್ಮ ರಕ್ಷಣೆಗಾಗಿ ಶಿವಾಜಿ ಮಹಾರಾಜರ ಹೋರಾಟ ಅವಿಸ್ಮರಣೀಯ : ಬಿ.ಕೆ ಶಿವಕುಮಾರ್

ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಮತ್ತು ನಗರಸಭೆ, ಛತ್ರಪತಿ ಶಿವಾಜಿ ಸೇವಾ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ನಡೆಯಿತು. 
    ಭದ್ರಾವತಿ : ಹಿಂದೂ ಧರ್ಮ ರಕ್ಷಣೆಗಾಗಿ ಛತ್ರಪತಿ ಶಿವಾಜಿ ಮಹಾರಾಜರು ನಡೆಸಿರುವ ಹೋರಾಟ ಇಂದಿಗೂ ಅವಿಸ್ಮರಣೀಯವಾಗಿದೆ ಎಂದು ಪಿಎಲ್‌ಡಿ ಅಧ್ಯಕ್ಷ ಬಿ.ಕೆ ಶಿವಕುಮಾರ್ ಹೇಳಿದರು. 
    ಅವರು ಬುಧವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಮತ್ತು ನಗರಸಭೆ, ಛತ್ರಪತಿ ಶಿವಾಜಿ ಸೇವಾ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ಪಾಲ್ಗೊಂಡು ಮಾತನಾಡಿದರು 
    ರಾಷ್ಟ್ರಭಕ್ತರಾಗಿ, ಧರ್ಮ ರಕ್ಷಕರಾಗಿ, ಶಿವಾಜಿ ಮಹಾರಾಜರು ನೀಡಿರುವ ಕೊಡುಗೆ ಯಾರು ಮರೆವಂತಿಲ್ಲ. ಸನಾತನ ಕಾಲದಿಂದಲೂ ಹಿಂದೂ ಧರ್ಮ ನಾಶಪಡಿಸಲು ನಡೆಸುತ್ತಿದ್ದ ಕುತಂತ್ರ ಹಾಗು ಹಿಂದೂಗಳ ಮೇಲೆ ನಡೆಯುತ್ತಿದ್ದ ದೌರ್ಜನ್ಯ, ದಬ್ಬಾಳಿಕೆ ಬಾಲ್ಯದಲ್ಲಿಯೇ ಅರಿತುಕೊಂಡಿದ್ದ ಶಿವಾಜಿ ಮಹಾರಾಜರು ತಮ್ಮ ಜೀವನದ ಕೊನೆಯವರೆಗೂ ಹಿಂದೂ ಧರ್ಮ ರಕ್ಷಣೆಗಾಗಿ ಹೋರಾಟ ನಡೆಸಿದರು ಎಂದರು. 
    ಶಿವಾಜಿ ಮಹಾರಾಜರಿಗೆ ತಾಯಿಯೇ ಮೊದಲ ಗುರು. ರಾಷ್ಟ್ರ ಭಕ್ತರಾಗಿ, ಹಿಂದೂ ರಕ್ಷಕರಾಗಿ ಜಾತಿ, ಧರ್ಮ ಬೇಧಭಾವವಿಲ್ಲದೆ ಪ್ರಜೆಗಳಿಗೆ ಉತ್ತಮ ಆಡಳಿತ ನೀಡುವ ಮೂಲಕ ಇತಿಹಾಸದ ಪುಟದಲ್ಲಿ ಉಳಿದುಕೊಂಡಿದ್ದಾರೆ. ಅವರ ಆದರ್ಶ ಗುಣಗಳನ್ನು ನಾವೆಲ್ಲರೂ ಅನುಸರಿಸಬೇಕಾಗಿದೆ ಎಂದರು. 
    ಉಪ ತಹಸೀಲ್ದಾರ್ ಮಂಜಾನಾಯ್ಕ, ಉದ್ಯಮಿ ಬಿ.ಕೆ ಜಗನ್ನಾಥ್,  ಛತ್ರಪತಿ ಶಿವಾಜಿ ಸೇವಾ ಸಂಘದ ತಾಲೂಕು ಅಧ್ಯಕ್ಷ ಎಚ್.ಆರ್ ಲೋಕೇಶ್ವರ್‌ರಾವ್ ದೊಂಬಾಳೆ, ಪುರಸಭೆ ಮಾಜಿ ಉಪಾಧ್ಯಕ್ಷ ಟಿ. ವೆಂಕಟೇಶ್, ಡಿಎಸ್‌ಎಸ್ ಮುಖಂಡ ಈಶ್ವರಪ್ಪ, ಬಸವಂತಪ್ಪ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲೂಕು ಕಛೇರಿ ಸಿಬ್ಬಂದಿಗಳು, ಛತ್ರಪತಿ ಶಿವಾಜಿ ಸೇವಾ ಸಂಘದ ಪದಾಧಿಕಾರಿಗಳು, ನಿರ್ದೇಶಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

No comments:

Post a Comment