Tuesday, February 4, 2025

ಜಿ. ಧರ್ಮಪ್ರಸಾದ್ ೩ನೇ ಅವಧಿಗೆ ಬಿಜೆಪಿ ಮಂಡಲ ಅಧ್ಯಕ್ಷರಾಗಿ ಆಯ್ಕೆ

ಮುಖಂಡರು, ಕಾರ್ಯಕರ್ತರಿಂದ ಸಂಭ್ರಮಾಚರಣೆ 

ಮೂರನೇ ಅವಧಿಗೆ ಭದ್ರಾವತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲದ ಅಧ್ಯಕ್ಷರಾಗಿ ಆಯ್ಕೆಯಾದ ಯುವ ಮುಖಂಡ, ಸಂಘಟಕ ಜಿ. ಧರ್ಮಪ್ರಸಾದ್ ಅವರನ್ನು ಮಹಾಶಕ್ತಿ ಕೇಂದ್ರದ ವತಿಯಿಂದ ಅಭಿನಂದಿಸಲಾಯಿತು.
    ಭದ್ರಾವತಿ : ಮೂರನೇ ಅವಧಿಗೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲದ ಅಧ್ಯಕ್ಷರಾಗಿ ಆಯ್ಕೆಯಾದ ಯುವ ಮುಖಂಡ, ಸಂಘಟಕ ಜಿ. ಧರ್ಮಪ್ರಸಾದ್ ಅವರನ್ನು ಮಹಾಶಕ್ತಿ ಕೇಂದ್ರದ ವತಿಯಿಂದ ಅಭಿನಂದಿಸಲಾಯಿತು.
   ಮಂಗಳವಾರ ಸಂಜೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು  ಧರ್ಮಪ್ರಸಾದ್‌ರವರ ನಿವಾಸದಲ್ಲಿ ಸನ್ಮಾನಿಸಿ ಅಭಿನಂದಿಸುವ ಮೂಲಕ ಪಕ್ಷದ ನಾಯಕರು ಹಿಂದಿನ ೨ ಅವಧಿಯ ಸಮರ್ಥ ನಾಯಕತ್ವ ಗುರುತಿಸಿ ೩ನೇ ಅವಧಿಗೆ ಆಯ್ಕೆ ಮಾಡಿರುವುದು ತುಂಬ ಸಂತಸದ ಸಂಗತಿಯಾಗಿದೆ. ವಿದ್ಯಾರ್ಥಿ ಜೀವನದಿಂದಲೇ ಸಂಘಟನೆ ಹಾಗು ನಾಯಕತ್ವ ಗುಣ ಬೆಳೆಸಿಕೊಂಡು ಬರುವ ಜೊತೆಗೆ ಹಲವಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಹಲವಾರು ಹೋರಾಟಗಳಲ್ಲಿ ಪಾಲ್ಗೊಂಡಿರುವ ಧರ್ಮಪ್ರಸಾದ್‌ರವರಿಗೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸ್ಥಾನಮಾನಗಳು ಲಭಿಸುವಂತಾಗಲಿ ಎಂದು ಸಂಭ್ರಮ ಹಂಚಿಕೊಂಡರು. 
  ಪಕ್ಷದ ಪ್ರಮುಖರಾದ ತೀರ್ಥಯ್ಯ, ಕೆ.ಎನ್ ಶ್ರೀಹರ್ಷ, ಎಚ್.ಎಲ್ ವಿಶ್ವನಾಥ್, ಮೊಸರಳ್ಳಿ ಅಣ್ಣಪ್ಪ, ಚನ್ನೇಶ್, ಕಾ.ರಾ ನಾಗರಾಜ್, ರಾಜಶೇಖರ್ ಉಪ್ಪಾರ ಮತ್ತು ನಂಜಪ್ಪ ಸೇರಿದಂತೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗು ವಿವಿಧ ಮೋರ್ಚಾಗಳ ಅಧ್ಯಕ್ಷರು, ಮಹಿಳಾ ಪ್ರಮುಖರು, ಕಾರ್ಯಕರ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

No comments:

Post a Comment