Saturday, February 22, 2025

ಮಹಾ ಕುಂಭಮೇಳದಲ್ಲಿ ಪಾಲ್ಗೊಳ್ಳಲು ಪ್ರಯಾಣ ಬೆಳೆಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು

ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಪಾಲ್ಗೊಳ್ಳಲು ಭದ್ರಾವತಿ ನಗರದ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಶನಿವಾರ ವಿಶೇಷ ರೈಲಿನಲ್ಲಿ ಪ್ರಯಾಣ ಬೆಳೆಸಿದರು. 
    ಭದ್ರಾವತಿ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಪಾಲ್ಗೊಳ್ಳಲು ನಗರದ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಶನಿವಾರ ವಿಶೇಷ ರೈಲಿನಲ್ಲಿ ಪ್ರಯಾಣ ಬೆಳೆಸಿದರು. 
    ನಗರದ ರೈಲ್ವೆ ನಿಲ್ದಾಣಕ್ಕೆ ಶಿವಮೊಗ್ಗದಿಂದ ಸಂಜೆ ೫.೨೦ಕ್ಕೆ ಆಗಮಿಸಿದ ರೈಲಿನಲ್ಲಿ ಮಂಗೋಟೆ ರುದ್ರೇಶ್, ಕವಿತಾ ರಾವ್, ಬಾರಂದೂರು ಪ್ರಸನ್ನ, ರವಿಕುಮಾರ್, ಸುಲೋಚನಾ, ದೇವರಾಜ್ ಸೇರಿದಂತೆ ಬಿಜೆಪಿ ಪಕ್ಷದ ಹಾಗು ಹಿಂದೂಪರ ಸಂಘಟನೆಗಳ  ಮುಖಂಡರು, ಕಾರ್ಯಕರ್ತರು ಸೇರಿದಂತೆ ನೂರಾರು ಮಂದಿ ಪ್ರಯಾಣ ಬೆಳೆಸಿದರು. ಇದಕ್ಕೂ ಮೊದಲು ರೈಲ್ವೆ ನಿಲ್ದಾಣದಲ್ಲಿ ಮುಖಂಡರು, ಕಾರ್ಯಕರ್ತರು ಸಂಭ್ರಮ ಹಂಚಿಕೊಂಡರು. 
    ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಪ್ರಧಾನ ಕಾರ್ಯದರ್ಶಿ ಚನ್ನೇಶ್, ಹಿಂದುಳಿದ ಮೋರ್ಚಾದ ರಾಜಶೇಖರ್ ಉಪ್ಪಾರ ಸೇರಿದಂತೆ ಇನ್ನಿತರರು ಶುಭಕೋರಿದರು. 

No comments:

Post a Comment