Wednesday, February 5, 2025

ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೈಯದ್ ರಿಯಾಜ್

ಭದ್ರಾವತಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ೩೦ನೇ ವಾರ್ಡ್ ಸದಸ್ಯರಾದ ಸೈಯದ್ ರಿಯಾಜ್ ಬುಧವಾರ ಅಧಿಕಾರ ಸ್ವೀಕರಿಸಿದರು. 
    ಭದ್ರಾವತಿ : ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ೩೦ನೇ ವಾರ್ಡ್ ಸದಸ್ಯರಾದ ಸೈಯದ್ ರಿಯಾಜ್ ಬುಧವಾರ ಅಧಿಕಾರ ಸ್ವೀಕರಿಸಿದರು. 
    ನಗರಸಭೆಯಲ್ಲಿ ಅಧಿಕಾರದ ಗದ್ದುಗೆ ಹಿಡಿದಿರುವ ಕಾಂಗ್ರೆಸ್ ಪಕ್ಷ ಅಧಿಕಾರ ಹಂಚಿಕೆ ಮಾಡಿಕೊಂಡಿದ್ದು, ಅದರಂತೆ ೧ ವರ್ಷದ ಅವಧಿಗೆ ವಾರ್ಡ್ ನಂ.೨೮ರ ಸದಸ್ಯರಾದ ಕಾಂತರಾಜ್‌ರವರು ಅಧಿಕಾರ ನಿರ್ವಹಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ತೆರವಾಗಿದ್ದ ಸ್ಥಾನಕ್ಕೆ ಇದೀಗ ಸೈಯದ್ ರಿಯಾಜ್ ಆಯ್ಕೆಯಾಗುವ ಮೂಲಕ ಅಧಿಕಾರ ವಹಿಸಿಕೊಂಡಿದ್ದಾರೆ. 
    ನಗರಸಭೆ ಚುನಾಯಿತ ಹಾಗು ನಾಮನಿರ್ದೇಶಿತ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾದ ಸೈಯದ್ ರಿಯಾಜ್‌ರನ್ನು ಅಭಿನಂದಿಸಿದ್ದಾರೆ. 

No comments:

Post a Comment