ಭದ್ರಾವತಿ ಹಳೇನಗರ ವ್ಯಾಪ್ತಿಯ ಗಾಂಧಿನಗರದ ವೇಳಾಂಗಣಿ ಆರೋಗ್ಯ ಮಾತೆ ಧರ್ಮ ಕೇಂದ್ರದ ವತಿಯಿಂದ ಶಿವಮೊಗ್ಗ ಸೆಕ್ರೆಟ್ ಹಾರ್ಟ್ ಪ್ರಧಾನಾಲಯಕ್ಕೆ ಭಕ್ತಾದಿಗಳು ಪಾದಯಾತ್ರೆ ಕೈಗೊಂಡರು.
ಭದ್ರಾವತಿ : ಹಳೇನಗರ ವ್ಯಾಪ್ತಿಯ ಗಾಂಧಿನಗರದ ವೇಳಾಂಗಣಿ ಆರೋಗ್ಯ ಮಾತೆ ಧರ್ಮ ಕೇಂದ್ರದ ವತಿಯಿಂದ ಶಿವಮೊಗ್ಗ ಸೆಕ್ರೆಟ್ ಹಾರ್ಟ್ ಪ್ರಧಾನಾಲಯಕ್ಕೆ ಭಕ್ತಾದಿಗಳು ಪಾದಯಾತ್ರೆ ಕೈಗೊಂಡರು.
೨೦೨೫ ಜ್ಯೂಬಿಲಿ ವರ್ಷವನ್ನು ಯಾತ್ರಾತ್ರಿ ವರ್ಷವನ್ನಾಗಿ ಕ್ರೈಸ್ತ ಕಥೋಲಿಕ ಧರ್ಮದ ಜಗದ್ಗುರು ಫ್ರಾನ್ಸಿಸ್ರವರು ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ಭಕ್ತಾದಿಗಳು ಸಾಧ್ಯವಾದಷ್ಟು ಪುಣ್ಯಕ್ಷೇತ್ರಗಳಿಗೆ ತೆರಳಿ ಪ್ರಾರ್ಥಿಸಲು ಕರೆ ನೀಡಲಾಗಿದೆ ಎಂದು ಧರ್ಮ ಕೇಂದ್ರದ ಗುರುಗಳಾದ ಫಾದರ್ ಸ್ಟೀವನ್ ಡೇಸಾ ತಿಳಿಸಿದರು.
ಇದರ ಅಂಗವಾಗಿ ಧರ್ಮ ಕೇಂದ್ರದ ಇನ್ನೂರಕ್ಕೂ ಅಧಿಕ ಭಕ್ತರು ಧರ್ಮ ಕೇಂದ್ರದಿಂದ ಸುಮಾರು ೨೦ ಕಿಲೋ ಮೀಟರ್ ದೂರ ಕಾಲ್ನಡಿಗೆಯಲ್ಲಿ ಪ್ರಾರ್ಥಿಸುತ್ತಾ ಶಿವಮೊಗ್ಗಕ್ಕೆ ಯಾತ್ರೆ ಕೈಗೊಂಡರು.
ನಂತರ ಶಿವಮೊಗ್ಗ ಪ್ರಧಾನಾಲಯದ ಧರ್ಮ ಗುರುಗಳಾದ ಫಾದರ್ ಸ್ಟ್ಯಾನಿ ಡಿಸೋಜರವರಿಂದ ಪೂಜಾ ವಿಧಿ-ವಿಧಾನಗಳು ನೆರವೇರಿದವು. ಶಿವಮೊಗ್ಗ ವಿವಿಧ ಧರ್ಮ ಕೇಂದ್ರಗಳ ಗುರುಗಳು, ಸೈಂಟ್ ಚಾರ್ಲ್ಸ್ ಬರೋಮಿಯೋ ಸಂಸ್ಥೆಯ ಧರ್ಮ ಭಗಿನಿಯರು, ಮಕ್ಕಳು ಮತ್ತು ಭಕ್ತಾದಿಗಳು ಪಾಲ್ಗೊಂಡಿದ್ದರು.
No comments:
Post a Comment