ಟಿ.ಜಿ ಬಸವರಾಜಯ್ಯ
ಭದ್ರಾವತಿ: ನಗರದ ಎಂಪಿಎಂ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ೩ನೇ ಬಾರಿಗೆ ಹಳೇನಗರದ ನಿವಾಸಿ ಟಿ.ಜಿ ಬಸವರಾಜಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಟಿ.ಜಿ ಬಸವರಾಜಯ್ಯ ಸತತವಾಗಿ ೩ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ೨ನೇ ಬಾರಿಗೆ ವಿ. ಗೋವಿಂದಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ನಗರದ ಗಣ್ಯರು, ವಿವಿಧ ಸಂಘ-ಸಂಸ್ಥೆಗಳು ಅಭಿನಂದಿಸಿವೆ.
ಟಿ.ಜಿ ಬಸವರಾಜಯ್ಯನವರು ಎಂಪಿಎಂ ನೊಂದ ನಿವೃತ್ತ ಕಾರ್ಮಿಕರ ಹೋರಾಟ ವೇದಿಕೆ ಪ್ರಧಾನ ಸಂಚಾಲಕರಾಗಿ, ಹಳೇನಗರ ಮನೆ ಮಾಲೀಕರ ಸಂಘದ ಅಧ್ಯಕ್ಷರಾಗಿ, ಶಿವ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಮತ್ತು ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
No comments:
Post a Comment