ಭದ್ರಾವತಿ: ಸಂಬಂಧಿಕರ ಮದುವೆ ಕಾರ್ಯಕ್ಕೆ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸಿ ನಗರಕ್ಕೆ ಆಗಮಿಸಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಲ್ಲಿದ್ದ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ನಡೆದಿದೆ.
ಮೈಸೂರಿನ ಹುಣಸೂರು ನಿವಾಸಿ ಜಯಾಬಾಯಿ(೫೦) ಎಂಬುವರು ನಗರದ ಹುತ್ತಾ ಕಾಲೋನಿಯಲ್ಲಿರುವ ಒಕ್ಕಲಿಗರ ಸಭಾಭವನದಲ್ಲಿ ಸಂಬಂಧಿಕರ ಕಾರ್ಯಕ್ಕೆ ಫೆ.೯ರಂದು ಬೆಳಿಗ್ಗೆ ೧೦ ಗಂಟೆಗೆ ಹುಣಸೂರು ಗ್ರಾಮದಿಂದ ಪ್ರಯಾಣ ಬೆಳೆಸಿದ್ದು, ನಂತರ ಮೈಸೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಇಳಿದಿದ್ದಾರೆ. ಮಧ್ಯಾಹ್ನ ೧೨ ಗಂಟೆಗೆ ಮೈಸೂರು-ಭದ್ರಾವತಿ ಬಸ್ ಪ್ರಯಾಣ ಬೆಳೆಸಿ ಸಂಜೆ ೭ ಗಂಟೆಗೆ ನಗರದ ಭದ್ರಾವತಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಇಳಿದಿದ್ದಾರೆ.
ಬಸ್ ನಿಲ್ದಾಣದಲ್ಲಿ ತಮ್ಮ ಬಳಿ ಇದ್ದ ವ್ಯಾನಿಟಿ ಬ್ಯಾಗ್ ನೋಡಿದಾಗ ವ್ಯಾನಿಟಿ ಬ್ಯಾಗ್ ಜಿಪ್ ತೆರೆದಿದ್ದು, ಬ್ಯಾಗ್ನಲ್ಲಿದ್ದ ಒಂದು ಜೊತೆ ಹಸಿರು ಮತ್ತು ಗುಲಾಬಿ ಬಣ್ಣದ ಹರಳಿನ ಆಂಟಿಕ್ ಮಣಿ ರೀತಿಯಲ್ಲಿರುವ ಜುಮುಕಿ ಮತ್ತು ಒಂದು ಸಾದಾ ಡಿಸೈನ್ನ ಮೆರೂನ್ ಬಣ್ಣದ ಚಿಕ್ಕ ಹರಳಿರುವ ನೆಕ್ಲೇಸ್ ಹಾಗು ಒಂದು ಕಪ್ಪು ಬಣ್ಣದ ನೆಕ್ಲೇಸ್ ಒಟ್ಟು ೩೦ ಗ್ರಾಂ ತೂಕದ ೧.೮೫ ಲಕ್ಷ ರು. ಮೌಲ್ಯದ ಬಂಗಾರದ ಆಭರಣಗಳು ಕಳುವಾಗಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಫೆ.೧೦ರಂದು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
No comments:
Post a Comment