Friday, February 7, 2025

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಜಾನಪದ ಕಲಾ ತಂಡದಿಂದ ಪ್ರದರ್ಶನ

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕ ಜಾನಪದ ಪರಿಷತ್ ಭದ್ರಾವತಿ ತಾಲೂಕು ಶಾಖೆ ವತಿಯಿಂದ ಜಾನಪದ ಕಲಾವಿದರು ಪಾಲ್ಗೊಂಡು ಉತ್ತಮ ಪ್ರದರ್ಶನ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 
    ಭದ್ರಾವತಿ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕ ಜಾನಪದ ಪರಿಷತ್ ತಾಲೂಕು ಶಾಖೆ ವತಿಯಿಂದ ಜಾನಪದ ಕಲಾವಿದರು ಪಾಲ್ಗೊಂಡು ಉತ್ತಮ ಪ್ರದರ್ಶನ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 
    ಪರಿಷತ್ ತಾಲೂಕು ಶಾಖೆ ಅಧ್ಯಕ್ಷ ಎಂ.ಆರ್ ರೇವಣಪ್ಪ ಮತ್ತು ಸಂಗಡಿಗರು  "ಗೀ ಗೀ ಪದ, ಸ್ವಚ್ಛ ಭಾರತ ಅಭಿಯಾನ ಗೀತೆ, ಗುರುವೇ ನಿನ್ನಾಟ ಬಲ್ಲವರ್ಯಾರು ಜಾನಪದ ಗೀತೆ ನೋಡುಗರ ಮೆಚ್ಚುಗೆಗೆ ಪಾತ್ರವಾಯಿತು.
    ತಂಡದಲ್ಲಿ ಕಲಾವಿದರಾದ ಚಂದ್ರಶೇಖರ ಚಕ್ರಸಾಲಿ, ನಿಸಾರ್‌ಖಾನ್, ದಯಾನಂದ್ ಸಾಗರ್, ಸೋಮಶೇಖರ್, ದೇವರಾಜ್ ಮತ್ತು ದೇವೇಂದ್ರ ಭಾಗವಹಿಸಿದ್ದರು.

No comments:

Post a Comment