Thursday, February 20, 2025

ಡಿಎಫ್‌ಓ ಕಛೇರಿ ಮುಂಭಾಗ ಫೆ.೨೧ರಂದು ಜೆಡಿಎಸ್ ಪ್ರತಿಭಟನೆ

ಆರ್. ಕರುಣಾಮೂರ್ತಿ 
    ಭದ್ರಾವತಿ : ಅರಣ್ಯ ಇಲಾಖೆ ವತಿಯಿಂದ ರೈತರನ್ನು ಒಕ್ಕಲೆಬ್ಬಿಸುವುದನ್ನು ವಿರೋಧಿಸಿ ಫೆ.೨೧ರಂದು ಬೆಳಿಗ್ಗೆ ೧೦.೩೦ಕ್ಕೆ ಜಾತ್ಯತೀತ ಜನತಾದಳ ತಾಲೂಕು ಶಾಖೆ ವತಿಯಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. 
    ತಾಲೂಕಿನ ರೈತರು ಕಳೆದ ಸುಮಾರು ೫೦-೬೦ ವರ್ಷಗಳಿಂದ ಎಲ್ಲಾ ದಾಖಲೆಗಳನ್ನು ಹೊಂದಿ ಸಾಗುವಳಿ ಮಾಡಿಕೊಂಡು ಬರುತ್ತಿದ್ದು, ಇದೀಗ ಅರಣ್ಯ ಇಲಾಖೆಯವರು ನೋಟಿಸ್ ನೀಡುವ ಮೂಲಕ ವಿನಾಕಾರಣ ಉಪವಿಭಾಗೀಯ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಅಲೆದಾಡುವಂತೆ ಮಾಡಿದ್ದು, ಇದರಿಂದ ರೈತರು ಆತಂಕಗೊಂಡಿದ್ದಾರೆ. 
    ರೈತರನ್ನು ಒಕ್ಕಲೆಬ್ಬಿಸುವುದನ್ನು ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ರೈತರು, ಕೃಷಿ ಕೂಲಿ ಕಾರ್ಮಿಕರು, ಸ್ಥಳೀಯ ಸಂಸ್ಥೆಗಳ ಹಾಲಿ ಮತ್ತು ಮಾಜಿ ಚುನಾಯಿತ ಪ್ರತಿನಿಧಿಗಳು, ಮಹಿಳೆಯರು, ಮುಖಂಡರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರತಿಭಟನೆ ಯಶಸ್ವಿಗೊಳಿಸುವಂತೆ ಪಕ್ಷದ ಹಿರಿಯ ಮುಖಂಡ, ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ ಕೋರಿದ್ದಾರೆ. 

No comments:

Post a Comment