ಸೋಮವಾರ, ಮಾರ್ಚ್ 31, 2025

ನಗರದಲ್ಲಿ ಪವಿತ್ರ ರಂಜಾನ್ ಆಚರಣೆ

ಭದ್ರಾವತಿ ನಗರದಲ್ಲಿ ಮುಸ್ಲಿಂ ಸಮುದಾಯದವರು ಪ್ರೀತಿ, ಶಾಂತಿ, ಸಮಾನತೆ, ಮಾನವೀಯ ಮೌಲ್ಯಗಳ ಸಂಕೇತವಾದ ಪವಿತ್ರ ಈದ್ ಉಲ್ ಫಿತರ್(ರಂಜಾನ್) ಹಬ್ಬ ಸಡಗರ ಸಂಭ್ರಮದಿಂದ ಆಚರಿಸಿದರು. ಮಸೀದಿಯೊಂದರಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. 
    ಭದ್ರಾವತಿ: ನಗರದಲ್ಲಿ ಮುಸ್ಲಿಂ ಸಮುದಾಯದವರು ಪ್ರೀತಿ, ಶಾಂತಿ, ಸಮಾನತೆ, ಮಾನವೀಯ ಮೌಲ್ಯಗಳ ಸಂಕೇತವಾದ ಪವಿತ್ರ ಈದ್ ಉಲ್ ಫಿತರ್(ರಂಜಾನ್) ಹಬ್ಬ ಸಡಗರ ಸಂಭ್ರಮದಿಂದ ಆಚರಿಸಿದರು. 
    ನಗರದ ಪ್ರಮುಖ ಮಸೀದಿ ಹಾಗು ಈದ್ಗಾ ಮೈದಾನಗಳಲ್ಲಿ ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಪರಸ್ಪರ ಹಬ್ಬದ ಶುಭಾಶಯ ಕೋರಿದರು. ಹಬ್ಬದ ಪ್ರಯುಕ್ತ ಕಳೆದ ೧ ತಿಂಗಳಿನಿಂದ ಉಪಹಾಸ ವ್ರತ ಕೈಗೊಂಡು ಕೊನೆಯ ದಿನವಾದ ಸೋಮವಾರ ಸಾಮೂಹಿಕ ಪ್ರಾರ್ಥನೆಯೊಂದಿಗೆ ಅಂತ್ಯಗೊಳಿಸಿದರು. 
    ಅಲ್ಲದೆ ಹಬ್ಬದ ನಡುವೆ ಸರ್ವಧರ್ಮಗಳ ನಡುವೆ ಸಾಮರಸ್ಯ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೆಲವು ಮುಸ್ಲಿಂ ಸಂಘಟನೆಗಳಿಂದ ಇಫ್ತಾರ್ ಕೂಟ ಆಯೋಜಿಸುವ ಮೂಲಕ ಹಬ್ಬದ ಮಹತ್ವ ತಿಳಿಸಿಕೊಡಲಾಯಿತು. 
    ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ತರೀಕೆರೆ ರಸ್ತೆಯ ಸಾದತ್ ದರ್ಗಾ ಈದ್ಗಾ ಮೈದಾನದಲ್ಲಿ ಸಾವಿರಾರು ಮಂದಿ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಚುನಾಯಿತ ಪ್ರತಿನಿಧಿಗಳು, ಗಣ್ಯರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಹಬ್ಬದ ಶುಭಾಶಯ ಕೋರಿದರು. 

ಸಡಗರ ಸಂಭ್ರಮದ ಯುಗಾದಿ : ಚಂದ್ರ ದರ್ಶನ

ಭದ್ರಾವತಿ : ಹಿಂದೂ ವರ್ಷಾಚರಣೆ ಆರಂಭದ ದಿನ, ವರ್ಷದ ಮೊದಲ ಹಬ್ಬ ಯುಗಾದಿ ಬೇವು-ಬೆಲ್ಲ ಸವಿಯುವ ಮೂಲಕ ನಗರದೆಲ್ಲೆಡೆ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಸೋಮವಾರ ಸಂಜೆ ಚಂದ್ರನ ದರ್ಶನ ಮಾಡುವ ಮೂಲಕ ಚಂದ್ರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. 
    ಭದ್ರಾವತಿ : ಹಿಂದೂ ವರ್ಷಾಚರಣೆ ಆರಂಭದ ದಿನ, ವರ್ಷದ ಮೊದಲ ಹಬ್ಬ ಯುಗಾದಿ ಬೇವು-ಬೆಲ್ಲ ಸವಿಯುವ ಮೂಲಕ ನಗರದೆಲ್ಲೆಡೆ ಸಡಗರ ಸಂಭ್ರಮದಿಂದ ಆಚರಿಸಲಾಯಿತು. 
    ಹಿಂದೂ ಧರ್ಮದಲ್ಲಿ ಯುಗಾದಿ ಹಬ್ಬಕ್ಕೆ ವಿಶೇಷ ಮಹತ್ವವಿದ್ದು, ಮನೆಗಳಲ್ಲಿ ಮುಂಜಾನೆಯೇ ಎದ್ದು ಮಾವು-ಬೇವಿನ ತಳಿರು ತೋರಣಗಳಿಂದ ಅಲಂಕರಿಸಿ ದೇಹಕ್ಕೆ ಎಣ್ಣೆ ಹಚ್ಚಿಕೊಂಡು ಸ್ನಾನ ಮಾಡುವ ಮೂಲಕ ಹೊಸ ಹೊಸ ಉಡುಗೆ ತೊಡುಗೆಗಳೊಂದಿಗೆ ದೇವರಿಗೆ ಪೂಜೆ ಸಲ್ಲಿಸಿ ಬೇವು-ಬೆಲ್ಲ ಸವಿಯುವುದು ವಾಡಿಕೆಯಾಗಿದೆ. 
    ನಂತರ ಹೋಳಿಗೆ, ಪಾಯಸ ಸೇರಿದಂತೆ ಬಗೆ ಬಗೆಯ ತಿಂಡಿ ತಿನಿಸುಗಳೊಂದಿಗೆ ಹಬ್ಬದ ಸಂಭ್ರಮದಲ್ಲಿ ತೊಡಗುತ್ತಾರೆ. ಕುಟುಂಬರಸ್ಥರು, ಬಂದು-ಬಳಗದವರು ಹಬ್ಬಕ್ಕೆ ಬಂದು ಹೋಗುವುದು ವಿಶೇಷವಾಗಿದೆ. 
    ಯುಗಾದಿ ಹಬ್ಬದ ಹಿನ್ನಲೆಯಲ್ಲಿ ಹಲವು ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದು. ವಿಶೇಷವಾಗಿ ಯುಗಾದಿ ಹಬ್ಬ ಅದರಲ್ಲೂ ಮಹಿಳೆಯರ ಅಚ್ಚುಮೆಚ್ಚಿನ ಹಬ್ಬಗಳಲ್ಲಿ ಒಂದಾಗಿದೆ. 
    ಸೋಮವಾರ ಸಂಜೆ ಚಂದ್ರನ ದರ್ಶನ ಮಾಡುವ ಮೂಲಕ ಹಬ್ಬದ ವಿಶೇಷತೆಗಳಲ್ಲಿ ಒಂದಾದ ಚಂದ್ರ ದೇವರಿಗೆ ಪೂಜೆ ಸಲ್ಲಿಸುವುದು ವಾಡಿಕೆವಾಗಿದೆ. ಮಂಗಳವಾರ ಸಂಪ್ರದಾಯದಂತೆ ಮಾಂಸ ಆಹಾರ ಸೇವನೆ ಸಹ ಹಬ್ಬದ ಒಂದು ಭಾಗವಾಗಿದ್ದು, ಅಂತಿಮವಾಗಿ ಯುಗಾದಿ ಮುಕ್ತಾಯಗೊಳ್ಳಲಿದೆ. 

ಅಮಲೋದ್ಭವಿ ಮಾತೆ ದೇವಾಲಯದಲ್ಲಿ ಮಹಿಳಾ ದಿನಾಚರಣೆ

ಭದ್ರಾವತಿ ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದಲ್ಲಿ ವಿಶೇಷವಾಗಿ ಧರ್ಮಕೇಂದ್ರದ ಪುರುಷರು ಮಹಿಳಾ ದಿನಾಚರಣೆ ಆಯೋಜಿಸುವ ಮೂಲಕ ಗಮನ ಸೆಳೆದರು. ವೈದ್ಯಕೀಯ  ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವುದನ್ನು ಗುರುತಿಸಿ ಹಳೇನಗರದ ನಿರ್ಮಲ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಗ್ಲಾಡಿಸ್ ಪಿಂಟೋ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಭದ್ರಾವತಿ : ನಗರದ ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದಲ್ಲಿ ವಿಶೇಷವಾಗಿ ಧರ್ಮಕೇಂದ್ರದ ಪುರುಷರು ಮಹಿಳಾ ದಿನಾಚರಣೆ ಆಯೋಜಿಸುವ ಮೂಲಕ ಗಮನ ಸೆಳೆದರು. 
    ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವೈದ್ಯಕೀಯ  ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವುದನ್ನು ಗುರುತಿಸಿ ಹಳೇನಗರದ ನಿರ್ಮಲ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಗ್ಲಾಡಿಸ್ ಪಿಂಟೋ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಧರ್ಮ ಕೇಂದ್ರದ ಗುರುಗಳಾದ ಫಾದರ್ ಲಾನ್ಸಿ ಡಿಸೋಜಾ, ಸೈಂಟ್ ಚಾರ್ಲ್ಸ್ ವಿದ್ಯಾಸಂಸ್ಥೆಯ ಸಿಸ್ಟರ್ ಜೆಸಿಂತಾ, ಧರ್ಮ ಕೇಂದ್ರದ ಕಾರ್ಯದರ್ಶಿ ವಿಲ್ಸನ್ ಇತರರು ಉಪಸ್ಥಿತರಿದ್ದರು. 

ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ಜಾತಿಗಣತಿಗೆ ಸಚಿವ ಸಂಪುಟ ಒಪ್ಪಿಗೆ

ಮನೆ ಬಾಗಿಲಿಗೆ ಬರುವವರಿಗೆ ಸೂಕ್ತ ಮಾಹಿತಿ ನೀಡಿ : ಎಸ್. ಪುಟ್ಟರಾಜು

ಎಸ್. ಪುಟ್ಟರಾಜು
    ಭದ್ರಾವತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ಜಾತಿಗಣತಿಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿದ್ದು, ಈ ಹಿನ್ನಲೆಯಲ್ಲಿ ಜಾತಿಗಣತಿಗೆ ಮನೆ ಮನೆಗೆ ಬರುವವರಿಗೆ ಸೂಕ್ತ ದಾಖಲಾತಿಗಳೊಂದಿಗೆ ಮಾಹಿತಿ ನೀಡುವುದು ಅಗತ್ಯವಾಗಿದೆ. ತಾಲೂಕಿನ ಶೋಷಿತ ಮಾದಿಗ ಸಮಾಜದ ಮುಖಂಡರು, ಚಿಂತಕರು, ನೌಕರರು, ಕೂಲಿ ಕಾರ್ಮಿಕರು ಮತ್ತು ಸ್ತ್ರೀಶಕ್ತಿ ಸಮುದಾಯದವರು, ವಿದ್ಯಾರ್ಥಿಗಳು ಒಗ್ಗಟ್ಟಾಗಿ ಶೋಷಿತ ಸಮಾಜದ ಹಿತ ದೃಷ್ಟಿಯಿಂದ ಈ ಕುರಿತು ಎಲ್ಲೆಡೆ ಜಾಗೃತಿ ಮೂಡಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಅಧ್ಯಕ್ಷ ಎಸ್. ಪುಟ್ಟರಾಜು ಕೋರಿದ್ದಾರೆ. 
    ಒಳಮೀಸಲಾತಿಗಾಗಿ ಕಳೆದ ಸುಮಾರು ಮೂರು ದಶಗಳಿಂದ ಹೋರಾಟ ನಡೆಸಿಕೊಂಡು ಬಂದಿರುವ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯದ ಹರಿಕಾರ ಸಿದ್ದರಾಮಯ್ಯರವರು ಸಂತಸದ ಸುದ್ದಿ ನೀಡಿದ್ದು, ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ಜಾತಿಗಣತಿಗೆ ಮುಂದಾಗಿರುವುದು ಉತ್ತಮ ನಿರ್ಧಾರವಾಗಿದೆ. ಹೋರಾಟದ ಫಲ ಒಳಮೀಸಲು ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯಗಳಿಗೆ ಇದೆ ಎಂಬ ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾನೂನು ತೊಡಕು ಆಗದ ರೀತಿ ಎಚ್ಚರಿಕೆ ಹೆಜ್ಜೆ ಇಟ್ಟಿದ್ದ ಸಿದ್ದರಾಮಯ್ಯ ಸರ್ಕಾರ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನದಾಸ್‌ರವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚಿಸಿತು. ಆಯೋಗ ಮಧ್ಯಂತರ ವರದಿ ಸಲ್ಲಿಸಿದ್ದು, ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ಜಾತಿಗಣತಿ ನಡೆಸಿ ಎಂಪೋರಿಕಲ್ ದತ್ತಾಂಶ ಪಡೆದು ಜಾರಿಗೊಳಿಸುವುದರಿಂದ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನೆ ಸಲ್ಲಿಸುವುದು ಸೇರಿ ಯಾವುದೇ ರೀತಿ ಕಾನೂನು ತೊಡಕು ಎದುರಾಗದು ಎಂಬ ಸಲಹೆ ನೀಡಿದ ಮೇರೆಗೆ ತಕ್ಷಣವೇ ಸರ್ಕಾರ ಸಚಿವ ಸಂಪುಟದಲ್ಲಿ ಜಾತಿಗಣತಿಗೆ ಒಪ್ಪಿಗೆ ನೀಡಿದೆ. ಈ ಮೂಲಕ ನೊಂದ ಜನರ ಪರವಾಗಿ ಸರ್ಕಾರ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ. ಈ ಹಿನ್ನಲೆಯಲ್ಲಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. 
    ಸರ್ಕಾರ ಜಾತಿಗಣತಿಗೆ ಆಡಳಿತಾತ್ಮಕ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಜೂನ್ ತಿಂಗಳಿನಲ್ಲಿ ಜಾರಿಗೊಳಿಸುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಮಾಜ ಕಲ್ಯಾಣ ಖಾತೆ ಮಾಜಿ ಸಚಿವ ಎಚ್. ಆಂಚನೇಯರವರು ವಿಶೇಷ ಕಾಳಜಿವಹಿಸಿ ಹಗಲಿರುಳು ಒಳಮೀಸಲಾತಿ ಜಾರಿಗಾಗಿ ಶ್ರಮಿಸುತ್ತಾ ಬಂದಿದ್ದಾರೆ. ಜೊತೆಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ, ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ, ಸಮುದಾಯದ ಎಲ್ಲಾ ಶಾಸಕರು, ಮಾಜಿ ಶಾಸಕರು, ದಲಿತಪರ ಸಂಘಟನೆಗಳು ಕಳೆದ ಸುಮಾರು ೩೦ ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದು, ಹೋರಾಟಕ್ಕೆ ಇದೀಗ ಫಲ ಲಭಿಸಿದೆ. ಇದನ್ನು ಸಮುದಾಯದವರು ಸರಿಯಾಗಿ ಅರ್ಥಮಾಡಿಕೊಂಡು. ಜಾತಿಗಣತಿಗೆ ಮನೆ ಬಾಗಿಲಿಗೆ ಬರುವವರಿಗೆ ಆಧಾರ್ ಕಾರ್ಡ್ ಸಂಖ್ಯೆ ಜೊತೆಗೆ ಜೀವನ ಪರಿಸ್ಥಿತಿ, ಶೈಕ್ಷಣಿಕ, ಸಾಮಾಜಿಕ ಹಾಗು ಆರ್ಥಿಕ ಪರಿಸ್ಥಿತಿಯನ್ನು ದಾಖಲಿಸಲು ಸಹಕರಿಸಿ ಸಮುದಾಯದವರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತರಾಗುವಂತೆ  ಪುಟ್ಟರಾಜು ಮನವಿ ಮಾಡಿದ್ದಾರೆ. 

ಶನಿವಾರ, ಮಾರ್ಚ್ 29, 2025

ಎಂಪಿಎಂ ನಿವೃತ್ತ ಕಾರ್ಮಿಕರ ಪಿಂಚಣಿ ಹೆಚ್ಚಿಸಿ : ಕೇಂದ್ರ ಕಾರ್ಮಿಕ ಸಚಿವರಿಗೆ ಮನವಿ

ರಾಜ್ಯ ಸರ್ಕಾರಿ ಸ್ವಾಮ್ಯದ ಭದ್ರಾವತಿ ನಗರದ ಮೈಸೂರು ಕಾಗದ ಕಾರ್ಖಾನೆಯ ನಿವೃತ್ತ ಕಾರ್ಮಿಕರ ಇಪಿಎಸ್-೯೫ ಪಿಂಚಣಿಯನ್ನು ಕನಿಷ್ಠ ೭೫೦೦ ರು.ಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿ ಎಂಪಿಎಂ ನೊಂದ ನಿವೃತ್ತ ಕಾರ್ಮಿಕರ ಹೋರಾಟ ವೇದಿಕೆಯಿಂದ ಕೇಂದ್ರ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಲಾಯಿತು. 
    ಭದ್ರಾವತಿ: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ನಿವೃತ್ತ ಕಾರ್ಮಿಕರ ಇಪಿಎಸ್-೯೫ ಪಿಂಚಣಿಯನ್ನು ಕನಿಷ್ಠ ೭೫೦೦ ರು.ಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿ ಎಂಪಿಎಂ ನೊಂದ ನಿವೃತ್ತ ಕಾರ್ಮಿಕರ ಹೋರಾಟ ವೇದಿಕೆಯಿಂದ ಕೇಂದ್ರ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಲಾಯಿತು. 
    ಪ್ರಸ್ತುತ ನಿವೃತ್ತ ಕಾರ್ಮಿಕರಿಗೆ ಬರುತ್ತಿರುವ ಪಿಂಚಣಿ ಮೊತ್ತ ಅತ್ಯಂತ ಕಡಿಮೆ ಇದ್ದು, ಜೀವನ ನಿರ್ವಹಣೆ ಕಷ್ಟಕರವಾಗಿದೆ. ಈ ಹಿನ್ನಲೆಯಲ್ಲಿ ಪಿಂಚಣಿ ೭೫೦೦ ರು. ಗಳಿಗೆ ಹೆಚ್ಚಿಸುವ ಮೂಲಕ ಸಹಕರಿಸುವಂತೆ ಕೋರಲಾಗಿದೆ. 
    ಕೇಂದ್ರ ಕಾರ್ಮಿಕ ಸಚಿವರಿಗೆ ಶಿವಮೊಗ್ಗದ ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರ ಮೂಲಕ ಮನವಿ ಸಲ್ಲಿಸಲಾಯಿತು. ವೇದಿಕೆ ಪ್ರಮುಖರಾದ  ಟಿ.ಜಿ ಬಸವರಾಜಯ್ಯ, ಗೋವಿಂದಪ್ಪ, ಡಿ.ಮರಿಯಪ್ಪ, ಎಚ್. ಚನ್ನೇಶಪ್ಪ, ಲೋಕಾನಂದ ರಾವ್, ವೆಂಕಟೇಶಮೂರ್ತಿ, ತಾರಕೇಶ್ವರಪ್ಪ, ಕೆ.ರಾಮಚಂದ್ರ ಸೇರಿದಂತೆ ಸುಮಾರು ೬೫ ನಿವೃತ್ತ ಕಾರ್ಮಿಕರು ಉಪಸ್ಥಿತರಿದ್ದರು.

ಏ.೧ರಿಂದ ಬೇಸಿಗೆ ಶಿಬಿರ



    ಭದ್ರಾವತಿ : ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ, ಶ್ರೀ ಸತ್ಯ ಸಾಯಿ ಸೇವಾ ಸಮಿತಿ, ಪ್ರಶಾಂತಿ ಸೇವಾ ಟ್ರಸ್ಟ್ ಹಾಗು ಅಪರಂಜಿ ಅಭಿನಯ ಶಾಲೆ ವತಿಯಿಂದ ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ೧೦೦ನೇ ಜನ್ಮದಿನೋತ್ಸವ ಅಂಗವಾಗಿ ಏ.೧ ರಿಂದ ೧೦ರವರೆಗೆ  ೧೦ದಿನಗಳವರೆಗೆ ಆಯೋಜಿಸಲಾಗಿದೆ. 
    ಪ್ರತಿ ವರ್ಷದಂತೆ ಈ ಬಾರಿ ಸಹ ರಂಗಕರ್ಮಿ, ಕಿರುತೆರೆ-ಚಲನಚಿತ್ರ ನಟ ಅಪರಂಜಿ ಶಿವರಾಜ್‌ರವರ ನೇತೃತ್ವದಲ್ಲಿ ಶಿಬಿರ ನ್ಯೂಟೌನ್ ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರದಲ್ಲಿ ನಡೆಯುತ್ತಿದ್ದು, ಶಿಬಿರದಲ್ಲಿ ೫ ರಿಂದ ೧೫ ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದಾಗಿದೆ. 
    ಡ್ರಾಮಾ ಜ್ಯೂನಿಯರ್, ಅಭಿನಯ ತರಬೇತಿ, ಗೀತಗಾಯನ, ನೃತ್ಯ, ಚಿತ್ರಕಲೆ, ವ್ಯಕ್ತಿತ್ವ ವಿಕಸನ ಮತ್ತು ಕಲಾಕೃತಿ ರಚನೆ(ಕ್ರಾಫ್ಟ್ ವರ್ಕ್ಸ್) ಚಟುವಟಿಕೆಗಳು ಶಿಬಿರದಲ್ಲಿ ನಡೆಯಲಿವೆ. ಶಿಬಿರ ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೩.೩೦ರವರೆಗೆ ನಡೆಯಲಿದ್ದು, ೨೫ ರಿಂದ ೩೦ ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು ಹೆಸರು ನೋಂದಾಯಿಸಲು ಮೊ: ೯೯೮೦೫೩೪೪೦೬ ಸಂಖ್ಯೆಗೆ ಕರೆ ಮಾಡಬಹುದಾಗಿದೆ. 

ಮುಖ್ಯಮಂತ್ರಿಗಳ ವಿಶೇಷ ಅನುದಾನ ಬಿಡುಗಡೆ : ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಕಾಮಗಾರಿಗಳಿಗೆ ಚಾಲನೆ

ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಕ್ಷೇತ್ರದ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಹಾಗು ಹೊಸ ಕಾಮಗಾರಿ ಆರಂಭಿಸಲು ಅನುದಾನ ಬಿಡುಗಡೆಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ರ ಬರೆದ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಸುಮಾರು ೧೦ ಕೋ.ರು. ಗಳಿಗೂ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ. ಈ ಹಿನ್ನಲೆಯಲ್ಲಿ ಶುಕ್ರವಾರ ಒಂದೇ ದಿನ ಹಲವಾರು ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.      
    ಭದ್ರಾವತಿ : ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಕ್ಷೇತ್ರದ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಹಾಗು ಹೊಸ ಕಾಮಗಾರಿ ಆರಂಭಿಸಲು ಅನುದಾನ ಬಿಡುಗಡೆಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ರ ಬರೆದ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಸುಮಾರು ೧೦ ಕೋ.ರು. ಗಳಿಗೂ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ. ಈ ಹಿನ್ನಲೆಯಲ್ಲಿ ಶುಕ್ರವಾರ ಒಂದೇ ದಿನ ಹಲವಾರು ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.      
      ತಾಲೂಕಿನ ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳಿಗೆರೆ ಮುಖ್ಯ ರಸ್ತೆಯಿಂದ ಸಿದ್ಧರ ದೇವಸ್ಥಾನಕ್ಕೆ ಹೋಗುವ ರಸ್ತೆ ಅಭಿವೃದ್ಧಿ, ಉದಯನಗರ ಗ್ರಾಮದ ಮುಖ್ಯರಸ್ತೆಯಿಂದ ಬದನೆಹಾಳು ಮಾರ್ಗವಾಗಿ ಬಂಡಿ ಗುಡ್ಡಕ್ಕೆ ಹೋಗುವ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ಹಾಗು ಪಾಲಿ ಕ್ಲಿನಿಕ್ ಕಟ್ಟಡ ಉದ್ಘಾಟನೆ ನೆರವೇರಿಸಲಾಯಿತು. 
    ದೊಡ್ಡೇರಿ ಗ್ರಾಮದಲ್ಲಿ ಕೆರೆ ಏರಿ ಮೇಲೆ ಸಿಸಿ ರಸ್ತೆ ಮತ್ತು ಬಾಕ್ಸ್ ಚರಂಡಿ ನಿರ್ಮಾಣ, ಉಕ್ಕುಂದ ಗ್ರಾಮದ ಮುಖ್ಯ ರಸ್ತೆಯಿಂದ ನಗರಕ್ಕೆ ಕೂಡುವ ರಸ್ತೆ ಡಾಂಬರೀಕರಣ, ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಜ್ಜಿ ಗುಡ್ಡದಿಂದ ಕಾಚಗೊಂಡನಹಳ್ಳಿಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ, ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರತ್ನಪುರದಿಂದ ಉಕ್ಕುಂದ  ಗ್ರಾಮಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಹಾಗು ಅಂತರಗಂಗೆ ಬೋವಿ ಕಾಲೋನಿಯ ಅಂಗನವಾಡಿ ಕಟ್ಟಡ ಉದ್ಘಾಟಿಸಲಾಯಿತು. 


    ಕೆಂಚನಹಳ್ಳಿ ಕಾಲೋನಿಯಿಂದ ಹಡ್ಲಘಟ್ಟ ಗ್ರಾಮಕ್ಕೆ ಹೋಗುವ ರಸ್ತೆ ಅಭಿವೃದ್ಧಿ, ಬಾರಂದೂರು ಮತ್ತು ಮಾವಿನಕೆರೆ ಮುಖ್ಯ ರಸ್ತೆಯಿಂದ ಕೆಂಚನಹಳ್ಳಿ ಮತ್ತು ನೀರುಗುಂಡಿ ಮೊಸರಳ್ಳಿಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ, ಮಾವಿನಕೆರೆ ಕಾಲೋನಿಯಿಂದ ಶಿವಪುರ ಗ್ರಾಮಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ, ಕಾರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳಿಂಗನಹಳ್ಳಿ ಮುಖ್ಯ ರಸ್ತೆಯಿಂದ ಕೆಂಚೇನಹಳ್ಳಿಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ, ಬಿ.ಎಚ್ ರಸ್ತೆಯಿಂದ ಕೆಂಪೇಗೌಡ ನಗರದ ಮಾರ್ಗವಾಗಿ ಕಾಳಿಂಗನಹಳ್ಳಿ ಕೂಡುವ ರಸ್ತೆ ಕಾಮಗಾರಿ, ಕಾರೇಹಳ್ಳಿ ಭದ್ರಾ ಪ್ಯಾಕೇಜ್ ರಸ್ತೆಯಿಂದ ಬಿ.ಎಚ್ ರಸ್ತೆವರೆಗೆ ಅಭಿವೃದ್ಧಿ ಕಾಮಗಾರಿ, ಹಳೇ ಬಾರಂದೂರು ಮುಖ್ಯ ರಸ್ತೆಯಿಂದ, ಬಿ.ಎಚ್ ರೋಡ್ ಮುಖ್ಯರಸ್ತೆಯವರೆಗೆ ಕಾಂಕ್ರೀಟ್ ರಸ್ತೆ ಮತ್ತು ಬಾಳೇ ಮಾರನಹಳ್ಳಿ ಮುಖ್ಯ ರಸ್ತೆಯಿಂದ ಹಳೇ ಹಿರಿಯೂರು ಚಾನೆಲ್‌ವರಗೆ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. 
    ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಜಿಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಯುವ ಮುಖಂಡ ಬಿ.ಎಸ್ ಗಣೇಶ್ ಸೇರಿದಂತೆ ಆಯಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ದಿ ಅಧಿಕಾರಿಗಳು, ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. 

ಜಿಲ್ಲಾಮಟ್ಟದ ಕ್ರೀಡಾಕೂಟ : ಮಹಿಳಾ ತಂಡಕ್ಕೆ ಹಲವು ಬಹುಮಾನ

ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ವತಿಯಿಂದ ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟದಲ್ಲಿ ತಾಲೂಕಿನ ಮಹಿಳಾ ದೈಹಿಕ ಶಿಕ್ಷಣ ಶಿಕ್ಷಕರ ತಂಡ ಭಾಗವಹಿಸಿ ಹಲವು ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದೆ. 
    ಭದ್ರಾವತಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ವತಿಯಿಂದ ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟದಲ್ಲಿ ತಾಲೂಕಿನ ಮಹಿಳಾ ದೈಹಿಕ ಶಿಕ್ಷಣ ಶಿಕ್ಷಕರ ತಂಡ ಭಾಗವಹಿಸಿ ಹಲವು ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದೆ. 
    ಗುಂಪು ಸ್ಪರ್ಧೆಗಳಾದ ಹ್ಯಾಂಡ್ ಬಾಲ್-ಪ್ರಥಮ ಸ್ಥಾನ ಮತ್ತು ವಾಲಿಬಾಲ್ ಹಾಗೂ ಥ್ರೋಬಾಲ್ ದ್ವಿತೀಯ ಸ್ಥಾನ ಪಡೆದು ಕೊಂಡಿದೆ. ಮುಂಜೀರಾ(ನಾಯಕಿ), ಜ್ಯೋತಿ, ನೂರ್ ಫಾತಿಮಾ, ರತ್ನಮ್ಮ. ರೇವತಿ, ದಿವ್ಯ, ರೇಖಾ, ನಂದಿನಿ, ನಿರ್ಮಲ, ಸವಿತ ಮತ್ತು ಸುನೀತಾಬಾಯಿ ಸೇರಿದಂತೆ ಇನ್ನಿತರರು ತಂಡದಲ್ಲಿ ಭಾಗವಹಿಸಿದ್ದರು. 
    ವೈಯಕ್ತಿಕ ಸ್ಪರ್ಧೆಯಲ್ಲಿ ಪಿ. ಸುಜಾತಾ ಎತ್ತರ ಜಿಗಿತ ಪ್ರಥಮ ಸ್ಥಾನ, ೧೦೦ ಮೀ. ಓಟ ಮತ್ತು ಡಿಸ್ಕಸ್ ಥ್ರೋ ತೃತಿಯ ಸ್ಥಾನ, ಅಮೀರ್ ಉನ್ನಿಸ ಉದ್ದಜಿಗಿತ ಪ್ರಥಮ ಸ್ಥಾನ, ೧೦೦ ಮೀ. ಓಟ ತೃತಿಯ ಸ್ಥಾನ ಮತ್ತು ೮೦೦ ಮೀ. ಓಟ ದ್ವಿತೀಯ ಸ್ಥಾನ, ಫಾತಿಮಾ ಉದ್ದ ಜಿಗಿತ ದ್ವಿತೀಯ ಸ್ಥಾನ ಹಾಗು  ಜಾವಲಿನ್ ಮತ್ತು  ೪೦೦ ಮೀ. ಓಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ವಿಜೇತ ತಂಡಕ್ಕೆ ದೈಹಿಕ ಶಿಕ್ಷಣ ಶಿಕ್ಷಕ, ವ್ಯವಸ್ಥಾಪಕ ಶಿವಲಿಂಗೇಗೌಡ, ಕ್ಷೇತ್ರ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಪ್ರಭು. ಪ್ರಮುಖರಾದ ಶ್ರೀಧರ್ ಸಾವಂತ್, ರಾಜಾ ನಾಯ್ಕ, ಶ್ರೀಕಾಂತ್, ಸಿದ್ದಯ್ಯ, ಶಿವರಾಜ್, ಖಚಾಂಚಿ  ಕರಣ ಸಿಂಗ್ ಮತ್ತು ಇತರೆ ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದಿಸಿದ್ದಾರೆ.  
 

ಶುಕ್ರವಾರ, ಮಾರ್ಚ್ 28, 2025

ಕನ್ನಡ ಸಾಹಿತ್ಯ ಭವನದ ಸಭಾಮಂಟಪ ರಂಗಮಂದಿರದ ಮಾದರಿಯಲ್ಲಿ ನಿರ್ಮಿಸಿ

ಭದ್ರಾವತಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕನ್ನಡ ಸಾಹಿತ್ಯ ಭವನದ ಸಭಾಮಂಟಪ ರಂಗಮಂದಿರದ ಮಾದರಿಯಲ್ಲಿ ನಿರ್ಮಾಣಗೊಳಿಸುವಂತೆ ಅಂಬೇಡ್ಕರ್ ಜಾನಪದ ಕಲಾ ಸಂಘದಿಂದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. 
    ಭದ್ರಾವತಿ : ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕನ್ನಡ ಸಾಹಿತ್ಯ ಭವನದ ಸಭಾಮಂಟಪ ರಂಗಮಂದಿರದ ಮಾದರಿಯಲ್ಲಿ ನಿರ್ಮಾಣಗೊಳಿಸುವಂತೆ ಅಂಬೇಡ್ಕರ್ ಜಾನಪದ ಕಲಾ ಸಂಘದಿಂದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. 
    ನ್ಯೂಟೌನ್ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಛೇರಿಯಲ್ಲಿ ಸಂಜೆ ನೂತನ ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಂಬಂಧ ಏರ್ಪಡಿಸಲಾಗಿದ್ದ ಸಭೆಯಲ್ಲಿ ಮನವಿ ಸಲ್ಲಿಸಲಾಯಿತು. 
    ನಗರದಲ್ಲಿ ರಂಗಮಂದಿರದ ಕೊರತೆ ಇದ್ದು, ಈ ಹಿನ್ನಲೆಯಲ್ಲಿ ನಾಟಕಗಳು ಹೆಚ್ಚು ಪ್ರದರ್ಶನಗೊಳ್ಳುತ್ತಿಲ್ಲ. ಬಾಡಿಗೆಗೆ ಕಲ್ಯಾಣ ಮಂಟಪಗಳಿಗೆ ಹಣ ಕೊಟ್ಟು ನಾಟಕ ಪ್ರದರ್ಶನ ಮಾಡುವುದು ಅಸಾಧ್ಯವಾಗಿದೆ. ಕೆಲವು ರಂಗ ತಂಡಗಳು ಮತ್ತು ರಂಗ ಕಲಾವಿದರು ನಾಟಕ ಪ್ರದರ್ಶನ ಮಾಡಲು ಉತ್ಸುಕರಾಗಿದ್ದಾರೆ. ಅಲ್ಲದೆ ಪ್ರಸ್ತುತ ರಂಗ ಚಟುವಟಿಕೆಗಳು ಕಣ್ಮರೆಯಾಗುತ್ತಿದ್ದು, ಇವುಗಳನ್ನು ಉಳಿಸಿಕೊಳ್ಳುವುದು ಅಗತ್ಯವಾಗಿದೆ. ಈ ಹಿನ್ನಲೆಯಲ್ಲಿ ನೂತನ ಕನ್ನಡ ಸಾಹಿತ್ಯ ಭವನದ ಸಭಾಮಂಟಪ ರಂಗಮಂದಿರದ ಮಾದರಿಯಲ್ಲಿ ನಿರ್ಮಾಣ ಮಾಡಬೇಕೆಂದು ಮನವಿಯಲ್ಲಿ ಕೋರಲಾಗಿದೆ.
    ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಕನ್ನಡ ಸಾಹಿತ್ಯ ಪರಿಷತ್ ಭವನ ನಿರ್ಮಾಣ ಸಮಿತಿ ಅಧ್ಯಕ್ಷೆ, ಎಮರಿಟಸ್ ಪ್ರಾಧ್ಯಾಪಕಿ ಡಾ. ವಿಜಯದೇವಿ, ಸಮಿತಿ ಪ್ರಮುಖರಾದ ಡಿ. ಪ್ರಭಾಕರ ಬೀರಯ್ಯ, ಜಾನಪದ ಪರಿಷತ್ ಹಿರಿಯೂರು ಹೋಬಳಿ ಘಟಕದ ಅಧ್ಯಕ್ಷ ಜಯರಾಂ ಗೊಂದಿ, ಅಂಬೇಡ್ಕರ್ ಜಾನಪದ ಕಲಾ ಸಂಘದ ತಮಟೆ ಜಗದೀಶ್, ದಿವಾಕರ್, ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಯುಗಾದಿ ಕವಿತಾ ವಾಚನ ಸ್ಪರ್ಧೆಯಲ್ಲಿ ಸಾಹಿತಿ ಜೆ.ಎನ್ ಬಸವರಾಜಪ್ಪ ಕವನ ವಾಚನ

ಶಿವಮೊಗ್ಗ ಸಹ್ಯಾದ್ರಿ ಲಲಿತ ಕಲಾ ಅಕಾಡೆಮಿ ವತಿಯಿಂದ ಕೀರ್ತಿನಗರದ ವನಿತಾ ವಿದ್ಯಾಲಯದ ಸಹಯೋಗದೊಂದಿಗೆ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಯುಗಾದಿ ಕವಿತಾ ವಾಚನ ಸ್ಪರ್ಧೆಯಲ್ಲಿ ಭದ್ರಾವತಿ ನಗರದ ಹೊಸಮನೆ ನಿವಾಸಿ, ಹಿರಿಯ ಸಾಹಿತಿ ಜೆ.ಎನ್ ಬಸವರಾಜಪ್ಪ ಭಾಗವಹಿಸಿದ್ದರು. 
    ಭದ್ರಾವತಿ : ಶಿವಮೊಗ್ಗ ಸಹ್ಯಾದ್ರಿ ಲಲಿತ ಕಲಾ ಅಕಾಡೆಮಿ ವತಿಯಿಂದ ಕೀರ್ತಿನಗರದ ವನಿತಾ ವಿದ್ಯಾಲಯದ ಸಹಯೋಗದೊಂದಿಗೆ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಯುಗಾದಿ ಕವಿತಾ ವಾಚನ ಸ್ಪರ್ಧೆಯಲ್ಲಿ ನಗರದ ಹೊಸಮನೆ ನಿವಾಸಿ, ಹಿರಿಯ ಸಾಹಿತಿ ಜೆ.ಎನ್ ಬಸವರಾಜಪ್ಪ ಭಾಗವಹಿಸಿದ್ದರು. 
    ವನಿತಾ ವಿದ್ಯಾಲಯದಲ್ಲಿ ಜರುಗಿದ ಸ್ಪರ್ಧೆಯಲ್ಲಿ ಸುಮಾರು ೨೦ಕ್ಕೂ ಹೆಚ್ಚು ಕವಿಗಳು ಪಾಲ್ಗೊಂಡಿದ್ದರು. ಜೆ.ಎನ್ ಬಸವರಾಜಪ್ಪರವರು ತಾವು ರಚಿಸಿರುವ ಮತ್ತೆ ಮತ್ತೆ ಯುಗಾದಿ ಕವನ ವಾಚಿಸಿದರು. ಈಗಾಗಲೇ ಹಲವಾರು ವೇದಿಕೆಗಳಲ್ಲಿ ಬಸವರಾಜಪ್ಪರವರು ತಮ್ಮ ಕವನಗಳನ್ನು ವಾಚಿಸಿದ್ದಾರೆ. ಅಲ್ಲದೆ ಭದ್ರಾವತಿ ಆಕಾಶವಾಣಿ ಕೇಂದ್ರದ ಹಲವಾರು ಕಾರ್ಯಕ್ರಮಗಳಲ್ಲೂ ಭಾಗವಹಿಸಿದ್ದಾರೆ. 
    ವಿಜೇತರಿಗೆ ಪ್ರಾಂಶುಪಾಲ ಪ್ರೊ. ಸತ್ಯನಾರಾಯಣ ಬಹುಮಾನಗಳನ್ನು ವಿತರಿಸಿದರು. ಸಹ್ಯಾದ್ರಿ ಲಲಿತ ಕಲಾ ಅಕಾಡೆಮಿ ಅಧ್ಯಕ್ಷೆ ತಾರಾ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ವನಿತಾ ವಿದ್ಯಾಲಯದ ರಮ್ಯ ಉಪಸ್ಥಿತರಿದ್ದರು. 

ಅವ್ಯಸ್ಥೆಯ ಸಂಚಾರ ಸುಗಮಗೊಳಿಸಲು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ

ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಸಂಚಾರ ದಟ್ಟಣೆ ಅಧಿಕವಾಗುತ್ತಿದ್ದು, ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸಂಚಾರಿ ಪೊಲೀಸರೊಂದಿಗೆ ಶುಕ್ರವಾರ ನಗರಸಭೆ ಆಡಳಿತ ಅಧ್ಯಕ್ಷೆ ಕೆ.ಸಿ ಗೀತಾ ರಾಜಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಚರ್ಚೆ ನಡೆಸಿತು. 
    ಭದ್ರಾವತಿ: ನಗರಸಭೆ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಸಂಚಾರ ದಟ್ಟಣೆ ಅಧಿಕವಾಗುತ್ತಿದ್ದು, ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸಂಚಾರಿ ಪೊಲೀಸರೊಂದಿಗೆ ಶುಕ್ರವಾರ ನಗರಸಭೆ ಆಡಳಿತ ಅಧ್ಯಕ್ಷೆ ಕೆ.ಸಿ ಗೀತಾ ರಾಜಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಚರ್ಚೆ ನಡೆಸಿತು. 
    ನಗರಸಭೆ ಹಿರಿಯ ಸದಸ್ಯ ಬಿ.ಟಿ ನಾಗರಾಜ್ ಮಾತನಾಡಿ, ಈ ಹಿಂದೆ ಪೊಲೀಸ್ ಅಧಿಕಾರಿಗಳು ಪ್ರತಿನಿತ್ಯ ಸಂಜೆ ಬೀದಿಗೆ ಬರುತ್ತಿದ್ದರು. ಸುಗಮ ಸಂಚಾರಕ್ಕೆ ಮಾಧ್ಯಮ ಪ್ರತಿನಿಧಿ, ಮುಖಂಡರು, ಸಾರ್ವಜನಿಕರಿಂದ ಮಾಹಿತಿ ಪಡೆಯುತ್ತಿದ್ದರು. ಸ್ವತಃ ಅಧಿಕಾರಿಗಳೇ ನಗರಸಭೆ, ಮತ್ತಿತರರ ಸಿಬ್ಬಂದಿಗಳೊಂದಿಗೆ ಬಿಡಾಡಿ ದನಗಳನ್ನು  ಹಿಡಿದು ಠಾಣೆಗಳಲ್ಲಿ ಕಟ್ಟಿ ಹಾಕುತ್ತಿದ್ದರು. ಈಗ ಪೊಲೀಸ್ ಅಧಿಕಾರಿಗಳಿಗೆ ಜನ ಸಂಪರ್ಕವೇ ಇಲ್ಲವಾಗಿದೆ. ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕಾಲ ಕಳೆದು ಹೋಗುತ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿ, ಈ ಹಿಂದೆ ನಗರಸಭೆಯಿಂದ ಸಂಚಾರ ನಿಯಂತ್ರಣಕ್ಕಾಗಿ ೫ ಲಕ್ಷ ರೂ ವೆಚ್ಚದಲ್ಲಿ ಟವರ್, ಮೈಕ್, ಸಿಗ್ನಲ್ ಮಾಡಿಸಲಾಗಿತ್ತು. ಅವೆಲ್ಲವೂ ಈಗ ನಾಪತ್ತೆಯಾಗಿದೆ. ಎಲ್ಲಿಗೆ ಹೋಗಿದೆ ಪತ್ತೆ ಹಚ್ಚಿ ಎಂದು ಪೊಲೀಸ್ ಅಧಿಕಾರಿಗಳಿಗೆ ಪ್ರಶ್ನಿಸಿದರು.  
    ಸದಸ್ಯ ಚನ್ನಪ್ಪ ಮಾತನಾಡಿ, ತರೀಕೆರೆ ರಸ್ತೆಯ ಗಾಂಧಿ ವೃತ್ತದಲ್ಲಿ ಗ್ಯಾರೇಜ್‌ಗಳ ಮುಂಭಾಗದಲ್ಲಿ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸಿಕೊಂಡು ರಿಪೇರಿ ಮಾಡುತ್ತಾ ಸಂಚಾರಕ್ಕೆ ಅಡ್ಡಿಪಡಿಸುತ್ತಾ ಸಂಚಾರಕ್ಕೆ ತೊಂದರೆಯಾಗಿದೆ. ಭದ್ರಾ ಕಾಲೋನಿ ಸರ್ಕಾರಿ ಶಾಲೆ ಮುಂಭಾಗ ಅಪಘಾತ ವಲಯವಾಗಿದೆ. ಅಲ್ಲಿ ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ. ನಗರದೆಲ್ಲೆಡೆ ಸಂಚಾರ ವ್ಯವಸ್ಥೆ ತುಂಬಾ ಹದಗೆಟ್ಟಿದೆ ಸರಿಪಡಿಸಿ, ಟ್ರಾಫಿಕ್ ಸಿಗ್ನಲ್‌ಗೆ ಅಳವಡಿಕೆಗೆ ಅಗತ್ಯವಿರುವ ಅನುದಾನ ಸಂಬಂಧ ಶಾಸಕರ ಬಳಿ ಚರ್ಚಿಸೋಣ, ಮಾರ್ಕೆಟ್ ಬಳಿ ರಂಜಾನ್ ಹಾಗು ಯುಗಾದಿ ಹಬ್ಬಕ್ಕೆ ಸುಗಮ ವಾಹನ ಸಂಚಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಿ ಎಂದರು.
    ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್ ಮಾತನಾಡಿ, ಯಾವ ರಸ್ತೆಯಲ್ಲಿ ನೋಡಿದರೂ ಬಾರ್‌ಗಳ ಮುಂದೆ ಮತ್ತು ನಗರಸಭೆ ಕಚೇರಿ ಮುಂದೆ ವಾಹನಗಳ ದಟ್ಟಣೆ ಹೆಚ್ಚಾಗಿದೆ. ರೈಲು ಬರುವಾಗ ಬಿ.ಎಚ್.ರಸ್ತೆ ಲಕ್ಷ್ಮೀ ಸ್ವೀಟ್ ಹೌಸ್, ಸೃಷ್ಟಿ ಸಿಲ್ಕ್ಸ್ ಮುಂಭಾಗ ಆಟೋಗಳ ನಿಲ್ದಾಣವಾಗಿ ಮಾರ್ಪಾಡಾಗುತ್ತಿದ್ದು, ಇದರಿಂದಾಗಿ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದರು. 
    ಸದಸ್ಯ ಜಾರ್ಜ್ ಮಾತನಾಡಿ, ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ವಾಹನಗಳು ನಿಲ್ಲಿಸಿ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದರು, ಸದಸ್ಯ ಮೋಹನ್‌ಕುಮಾರ್ ಮಾತನಾಡಿ, ಬಿ.ಎಚ್ ರಸ್ತೆಯ ಫುಟ್‌ಪಾತ್ ಜನರಿಗೆ ಉಪಯೋಗವಾಗದೆ ವ್ಯಾಪಾರಸ್ಥರು, ಕೋಳಿ ಅಂಗಡಿ ಮುಂತಾದವರಿಂದ ತೊಂದರೆಯಾಗುತ್ತಿದೆ, ಪೊಲೀಸ್ ಅಧಿಕಾರಿಗಳ ಆದೇಶದಂತೆ ಪೊಲೀಸರು ಕೇವಲ ಕೇಸುಗಳನ್ನು ಹಾಕಿಕೊಂಡು ಕಾಲ ಕಳೆಯುತ್ತಿದ್ದಾರೆ. ಸುಗಮ ರಸ್ತೆ ಸಂಚಾರಕ್ಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು. ಸದಸ್ಯ ಆರ್. ಶ್ರೇಯಸ್(ಚಿಟ್ಟೆ)ಮಾತನಾಡಿ, ಎಲ್ಲಾ ವೃತ್ತಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕೆಂದರು. ಸದಸ್ಯ ಹನುಮಂತಪ್ಪ ಅಂಬೇಡ್ಕರ್ ವೃತ್ತದಲ್ಲಿರುವ ಕಟ್ಟೆಯನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಬೇಕೆಂದರು.
    ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್ ಮಾತನಾಡಿ, ನಗರದೆಲ್ಲೆಡೆ ರಸ್ತೆಗಳಲ್ಲಿ ಅಡ್ಡಾದಿಡ್ಡಿ ವಾಹನಗಳ ನಿಲುಗಡೆಯಿಂದ ತೊಂದರೆಯಾಗುತ್ತಿದೆ. ಶಾಲೆಗಳ ಕಾಂಪೌಂಡ್ ಹಾರಿ ಮಧ್ಯ ಸೇವನೆ ಮಾಡುತ್ತಾರೆ. ಮಹಿಳೆಯರು ರಸ್ತೆಗಳಲ್ಲಿ ಓಡಾಡುವುದೇ ತೋದರೆಯಾಗಿದೆ. ಪೊಲೀಸರು ಶಿಸ್ತು ಕ್ರಮ ಜರುಗಿಸಿ ಎಂದರು.  
    ಪೊಲೀಸ್ ನಗರವೃತ್ತ ನಿರೀಕ್ಷಕ ಶ್ರೀಶೈಲಕುಮಾರ್ ಮಾತನಾಡಿ, ನಗರದಲ್ಲಿ ಟಿ.ಕೆ ರಸ್ತೆ ಮಾದರಿ ರಸ್ತೆ ಡಿವೈಡರ್ ಇದ್ದರೆ ಸಿಗ್ನಲ್ ಲೈಟ್ಸ್ ಅಳವಡಿಸುವ ವ್ಯವಸ್ಥೆ ಮಾಡಬಹುದು. ಇಲ್ಲದಿರುವುದರಿಂದ ಅವಶ್ಯಕತೆಯಿಲ್ಲ. ಇರುವೆಡೆ ಸಿಗ್ನಲ್‌ಲೈಟ್ಸ್ ಅಳವಡಿಕೆಗೆ ಸುಮಾರು ಎರಡೂವರೆ ಲಕ್ಷ ರು. ಬೇಕಾಗುತ್ತದೆ. ನಗರದಲ್ಲಿ ಮದ್ಯಸೇವಿಸಿ ವಾಹನ ಚಲಾಯಿಸುವುದು ಹೆಚ್ಚಾಗಿದೆ. ಕಟ್ಟುನಿಟ್ಟಾಗಿ ಕ್ರಮಕೈಗೊಂಡರೆ ಬಿಡುವಂತೆ ಒತ್ತಡ ಹೆಚ್ಚಾಗುತ್ತದೆ. ಆದರೂ ಸಹ ಕ್ರಮ ಜರುಗಿಸುತ್ತೇವೆ ಎಂದರು. ಪೇಪರ್‌ಟೌನ್ ಠಾಣೆ ಉಪ ನಿರೀಕ್ಷಕಿ ಕವಿತಾ ಮಾತನಾಡಿ, ಮಿಲ್ಟ್ರಿಕ್ಯಾಂಪ್ ಬಳಿ ಪ್ರೊ.ಬಿ. ಕೃಷ್ಣಪ್ಪ ವೃತ್ತದಲ್ಲಿ ಸಂಚಾರ ನಿಯಂತ್ರಣಕ್ಕೆ ಪೊಲೀಸರಿಗೆ ಬಾಕ್ಸ್ ಒಂದನ್ನು ನಿರ್ಮಿಸಿಕೊಡಿ ಎಂದರು.  
 ಪೌರಾಯುಕ್ತ ಪ್ರಕಾಶ್ ಎಂ.ಚೆನ್ನಪ್ಪನವರ್ ಸಭೆಯ ಔಚಿತ್ಯವನ್ನು ಹಾಗೂ ಸಂಚಾರದಲ್ಲಿ ಆಗುತ್ತಿರುವ ಅವ್ಯವಸ್ಥೆಯನ್ನು ಸರಿಪಡಿಸಲು ಸಿ.ಸಿ ಕ್ಯಾಮರಾ, ಹೈಲೈಟ್ಸ್ ದೀಪಗಳು, ಸಂಚಾರ ನಿಯಂತ್ರಣಕ್ಕೆ ಬೇಕಾದ ಸೌಲಭ್ಯಗಳು, ಫುಟ್ ಪಾತ್ ಅವ್ಯವಸ್ಥೆ ಮುಂತಾದ ಉಪಯುಕ್ತ ವಿಚಾರಗಳು ಚರ್ಚೆಯಾಗಿರುವುದು ಸಂತಸ ತಂದಿದೆ ಎಂದರು. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಕೆ. ಸುದೀಪ್‌ಕುಮಾರ್, ಕಾಂತರಾಜ್ ಉಪಸ್ಥಿತರಿದ್ದರು.  ವಿವಿಧ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ಹಾಗು ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು. 

ಗುರುವಾರ, ಮಾರ್ಚ್ 27, 2025

ಉಜ್ಜನಿಪುರ ನಗರ ಆರೋಗ್ಯ ಕೇಂದ್ರದ ಬಳಿ ಸ್ವಚ್ಛತಾ ಕಾರ್ಯ : ತ್ಯಾಜ್ಯ ಎಸೆಯದಂತೆ ಜಾಗೃತಿ

ಭದ್ರಾವತಿ ನಗರಸಭೆ ಪೌರಕಾರ್ಮಿಕರು ಸೂಪರ್‌ವೈಸರ್ ಎನ್. ಗೋವಿಂದ ನೇತೃತ್ವದಲ್ಲಿ ಗುರುವಾರ ಉಜ್ಜನಿಪುರ ನಗರ ಆರೋಗ್ಯ ಕೇಂದ್ರದ ಬಳಿ ಸ್ವಚ್ಛತಾ ಕಾರ್ಯ ಕೈಗೊಂಡು ತ್ಯಾಜ್ಯ ಎಸೆಯದಂತೆ ಜಾಗೃತಿ ಮೂಡಿಸುವ ಜೊತೆಗೆ ಒಂದು ವೇಳೆ ತ್ಯಾಜ್ಯ ಎಸೆಯುವುದು ಮುಂದುವರೆಸಿದ್ದಲ್ಲಿ ೫೦೦ ರು. ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿ ಫಲಕ ಅಳವಡಿಸಿದರು. 
ಭದ್ರಾವತಿ: ನಗರಸಭೆ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ತ್ಯಾಜ್ಯ ಪ್ರಮಾಣ ಹೆಚ್ಚಳವಾಗುತ್ತಿದ್ದು, ಮನೆ ಮನೆ ಕಸ ಸಂಗ್ರಹಣೆ ನಡುವೆಯೂ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಕಂಡು ಬರುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ಈ ನಡುವೆ ನಗರಸಭೆ ಆಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯದಂತೆ ಎಚ್ಚರಿಕೆ ಫಲಕಗಳನ್ನು ಅಳವಡಿಸಿ ಜಾಗೃತಿ ಮೂಡಿಸಲಾಗುತ್ತಿದೆ. 
ಉಜ್ಜನಿಪುರ ನಗರ ಆರೋಗ್ಯ ಕೇಂದ್ರದ ಬಳಿ ತ್ಯಾಜ್ಯ ಎಸೆಯದಂತೆ ಸ್ಥಳೀಯ ನಿವಾಸಿಗಳಿಗೆ ಹಲವಾರು ಬಾರಿ ತಿಳುವಳಿಕೆ ನೀಡಲಾಗಿದೆ. ಪ್ರತಿದಿನ ನೂರಾರು ಮಂದಿ ರೋಗಿಗಳು  ಆಸ್ಪತ್ರೆಗೆ ಬಂದು ಹೋಗುತ್ತಿದ್ದಾರೆ. ಆಸ್ಪತ್ರೆ ಬಳಿ ಜನಸಂದಣಿ ಹೆಚ್ಚಾಗಿದ್ದು, ಇಂತಹ ಸ್ಥಳದಲ್ಲಿ ಪ್ರತಿದಿನ ತ್ಯಾಜ್ಯ ಕಂಡು ಬರುತ್ತಿದೆ. 
ತ್ಯಾಜ್ಯ ಎಸೆಯದಂತೆ ಹಲವಾರು ಬಾರಿ  ಸೂಚನೆ ನೀಡಲಾಗಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನಲೆಯಲ್ಲಿ ನಗರಸಭೆ ಪೌರಕಾರ್ಮಿಕರು ಸೂಪರ್‌ವೈಸರ್ ಎನ್. ಗೋವಿಂದ ನೇತೃತ್ವದಲ್ಲಿ ಗುರುವಾರ ನಗರ ಆರೋಗ್ಯ ಕೇಂದ್ರದ ಬಳಿ ಸ್ವಚ್ಛತಾ ಕಾರ್ಯ ಕೈಗೊಂಡು ತ್ಯಾಜ್ಯ ಎಸೆಯದಂತೆ ಜಾಗೃತಿ ಮೂಡಿಸುವ ಜೊತೆಗೆ ಒಂದು ವೇಳೆ ತ್ಯಾಜ್ಯ ಎಸೆಯುವುದು ಮುಂದುವರೆಸಿದ್ದಲ್ಲಿ ೫೦೦ ರು. ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿ ಫಲಕ ಅಳವಡಿಸಿದರು. 
ಪೌರಕಾರ್ಮಿಕರಾದ ನಾಗಣ್ಣ, ಸುಶೀಲಮ್ಮ, ಸುಬ್ರಮಣಿ, ಮೋಹನ್, ಕುಮಾರಿಯಮ್ಮ, ಎಂ. ಮಂಜುನಾಥ್, ವಿಶ್ವನಾಥ್, ಹೇಮಂತ, ಮಂಜಾ, ಶಂಕರ, ಅಯ್ಯಪ್ಪ, ಜಯರಾಜ್ ಮತ್ತು ಕೃಷ್ಣ(ಡ್ರೈವರ್) ಸೇರಿದಂತೆ ಇನ್ನಿತರರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. 
 

ವಿಐಎಸ್‌ಎಲ್ ನಗರಾಡಳಿತ ಅಧಿಕಾರಿ ಮೋಹನ್‌ರಾಜ್ ಶೆಟ್ಟಿ ವರ್ಗಾವಣೆ

ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದಿಂದ ಸನ್ಮಾನ 

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಗರಾಡಳಿತ ಇಲಾಖೆಯಲ್ಲಿ ನಗರಾಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮೋಹನ್‌ರಾಜ್ ಶೆಟ್ಟಿ ಕೇಂದ್ರ ಸರ್ಕಾರದ ಅಸ್ಸಾಂ ಬ್ರಹ್ಮಪುತ್ರ ವಾಲಿ ಫರ್ಟಿಲೈಜರ್ ಕಾರ್ಪೋರೇಷನ್ ಲಿಮಿಟೆಡ್(ಬಿವಿಎಫ್‌ಸಿಎಲ್) ಕಂಪನಿ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದಿಂದ ಸನ್ಮಾನಿಸಿ ಗೌರವಿಸಲಾಯಿತು. 
    ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಗರಾಡಳಿತ ಇಲಾಖೆಯಲ್ಲಿ ನಗರಾಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮೋಹನ್‌ರಾಜ್ ಶೆಟ್ಟಿ ಕೇಂದ್ರ ಸರ್ಕಾರದ ಅಸ್ಸಾಂ ಬ್ರಹ್ಮಪುತ್ರ ವಾಲಿ ಫರ್ಟಿಲೈಜರ್ ಕಾರ್ಪೋರೇಷನ್ ಲಿಮಿಟೆಡ್(ಬಿವಿಎಫ್‌ಸಿಎಲ್) ಕಂಪನಿ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ. 
    ಮೋಹನ್‌ರಾಜ್ ಶೆಟ್ಟಿಯವರು ಮಾ.೩೧ರಂದು ನಗರಾಡಳಿತ ಅಧಿಕಾರಿ ಹುದ್ದೆಯಿಂದ ಬಿಡುಗಡೆಗೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದಲ್ಲಿ ಗುರುವಾರ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕರ್ತವ್ಯ ನಿರ್ವಹಣೆ ಸಂದರ್ಭದಲ್ಲಿ ಹೆಚ್ಚಿನ ಸಹಕಾರ ನೀಡಿದ ನಿವೃತ್ತ ಕಾರ್ಮಿಕರಿಗೆ ಮೋಹನ್‌ರಾಜ್ ಶೆಟ್ಟಿ ಕೃತಜ್ಞತೆ ಸಲ್ಲಿಸಿದರು. 
    ಕಲ್ಯಾಣ ಕೇಂದ್ರದ ಅಧ್ಯಕ್ಷ ಬಿ.ಜೆ ರಾಮಲಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕರಾದ ನರಸಿಂಹಚಾರ್, ಶಂಕರ್, ಕೆಂಪಯ್ಯ, ಪ್ರಸಾದ್, ಅಡವೀಶಯ್ಯ, ನಾಗರಾಜ್, ಬಸವರಾಜ್, ಜಯರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಹನುಮಂತರಾವ್ ಸ್ವಾಗತಿಸಿ, ಕಾರ್ಯದರ್ಶಿ ಮಹೇಶ್ ವಂದಿಸಿದರು. 

ಎಂಪಿಎಂ ನಿವೃತ್ತ ಕಾರ್ಮಿಕ ಎಂ. ಪುಟ್ಟಸ್ವಾಮಿ ನಿಧನ

ಎಂ. ಪುಟ್ಟಸ್ವಾಮಿ 
    ಭದ್ರಾವತಿ: ನಗರದ ಹುಡ್ಕೋ ಕಾಲೋನಿ ಉಂಬ್ಳೆಬೈಲು ರಸ್ತೆ ನಿವಾಸಿ, ಮೈಸೂರು ಕಾಗದ ಕಾರ್ಖಾನೆ ಓಲ್ಡ್ ಸ್ಟಾಕ್ ರೂಮ್ ನಿವೃತ್ತ ಕಾರ್ಮಿಕ ಎಂ. ಪುಟ್ಟಸ್ವಾಮಿ (೭೨) ಬುಧವಾರ ರಾತ್ರಿ ನಿಧನ ಹೊಂದಿದ್ದಾರೆ. 
    ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಇದ್ದಾರೆ. ಮೃತರ ಅಂತ್ಯಕ್ರಿಯೆ ಬೈಪಾಸ್ ರಸ್ತೆ ಸಮೀಪದ ತಿಮ್ಲಾಪುರ ರಸ್ತೆಯ ಶಂಕರಪ್ಪನಕಟ್ಟೆ ಶ್ರೀ ಸತ್ಯಹರಿಶ್ಚಂದ್ರ ಹಿಂದು ರುದ್ರಭೂಮಿಯಲ್ಲಿ ಗುರುವಾರ ಸಂಜೆ ನೆರವೇರಿತು. ಇವರ ನಿಧನಕ್ಕೆ ಮೈಸೂರು ಕಾಗದ ಕಾರ್ಖಾನೆ ನಿವೃತ್ತ ಕಾರ್ಮಿಕರು, ಸ್ಥಳೀಯ ಮುಖಂಡರು, ನಗರದ ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಮೆಸ್ಕಾಂ ಗ್ರಾಹಕರ ಸಲಾಹ ಸಮಿತಿ ಸಭೆ, ಕಚೇರಿ ಉದ್ಘಾಟನೆ


ಭದ್ರಾವತಿ ಮೆಸ್ಕಾಂ ನಗರ ಉಪ ವಿಭಾಗ ಹಾಗೂ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ರಚಿಸಲಾದ ಗ್ರಾಹಕರ ಸಲಾಹ ಸಮಿತಿ ಸಭೆ ಹಾಗೂ ಕಚೇರಿ ಉದ್ಘಾಟನಾ ಸಮಾರಂಭ ನಗರದ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ಉಂಬ್ಳೆಬೈಲು ರಸ್ತೆಯಲ್ಲಿರುವ ಮೆಸ್ಕಾಂ ಕಛೇರಿಯಲ್ಲಿ ಗುರುವಾರ ನಡೆಯಿತು. ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ನೂತನ ಕಚೇರಿ ಉದ್ಘಾಟಿಸಿದರು.
    ಭದ್ರಾವತಿ: ಮೆಸ್ಕಾಂ ನಗರ ಉಪ ವಿಭಾಗ ಹಾಗೂ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ರಚಿಸಲಾದ ಗ್ರಾಹಕರ ಸಲಾಹ ಸಮಿತಿ ಸಭೆ ಹಾಗೂ ಕಚೇರಿ ಉದ್ಘಾಟನಾ ಸಮಾರಂಭ ನಗರದ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ಉಂಬ್ಳೆಬೈಲು ರಸ್ತೆಯಲ್ಲಿರುವ ಮೆಸ್ಕಾಂ ಕಛೇರಿಯಲ್ಲಿ ಗುರುವಾರ ನಡೆಯಿತು.
    ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ನೂತನ ಕಚೇರಿ ಉದ್ಘಾಟಿಸಿದರು. ಸಲಹಾ ಸಮಿತಿ ತಾಲೂಕು ಅಧ್ಯಕ್ಷ ಬಸವಂತಪ್ಪ ಅಧ್ಯಕ್ಷತೆ ವಹಿಸಿದ್ದರು. 
    ನಗರದ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಾಶ್ ಬಳ್ಳಾಪುರ ಮಾತನಾಡಿ, ಸಲಹಾ ಸಮಿತಿ ರಚನೆಯಿಂದ ಗ್ರಾಹಕರ ಕುಂದುಕೊರತೆಗಳನ್ನು ತಕ್ಷಣ ಬಗೆಹರಿಸಬಹುದಾಗಿದೆ. ಅಲ್ಲದೆ ಗ್ರಾಹಕರಿಗೆ ಸಮಿತಿ ಹೆಚ್ಚಿನ ಸಹಕಾರಿಯಾಗಲಿದೆ ಎಂದರು.
    ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್, ಮೆಸ್ಕಾಂ ಗ್ರಾಮಾಂತರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೊಹಮ್ಮದ್ ಮುನಾಫ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ,  ಉದ್ಯಮಿ ಬಿ.ಕೆ ಜಗನ್ನಾಥ್, ನಗರಸಭೆ ಸದಸ್ಯರಾದ ಚನ್ನಪ್ಪ, ಬಿ.ಟಿ ನಾಗರಾಜ್, ಮಾವಿನಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್, ಮುಖಂಡರಾದ ಪ್ರಕಾಶ್‌ರಾವ್, ಸಿ. ಜಯಪ್ಪ, sಸುರೇಶ್ ವರ್ಮಾ, ವಿಜಯಲಕ್ಷ್ಮೀ, ಮಂಜುನಾಥ್ ಸೇರಿದಂತೆ ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
    ನಗರ ಉಪ ವಿಭಾಗ ಹಾಗೂ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ರಚಿಸಲಾದ ಮೆಸ್ಕಾಂ ಗ್ರಾಹಕರ ಸಲಾಹ ಸಮಿತಿಯಲ್ಲಿ ತಲಾ ೧೨ ಸದಸ್ಯರಂತೆ ಒಟ್ಟು ೪೬ ಸದಸ್ಯರಿದ್ದು, ಈ ಪೈಕಿ ೫ ಸದಸ್ಯರು ಮುಖ್ಯ ಸಮಿತಿಯಲ್ಲಿದ್ದಾರೆ. 
 

ಭದ್ರಾವತಿ ಮೆಸ್ಕಾಂ ನಗರ ಉಪ ವಿಭಾಗ ಹಾಗೂ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ರಚಿಸಲಾದ ಗ್ರಾಹಕರ ಸಲಾಹ ಸಮಿತಿ ಸಭೆ ಹಾಗೂ ಕಚೇರಿ ಉದ್ಘಾಟನಾ ಸಮಾರಂಭ ನಗರದ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ಉಂಬ್ಳೆಬೈಲು ರಸ್ತೆಯಲ್ಲಿರುವ ಮೆಸ್ಕಾಂ ಕಛೇರಿಯಲ್ಲಿ ಗುರುವಾರ ನಡೆಯಿತು. ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಮೆಸ್ಕಾಂ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 

ಬುಧವಾರ, ಮಾರ್ಚ್ 26, 2025

ಯುಗಾದಿ ಹಬ್ಬದಂದು ರೈಲ್ವೆ ಮೇಲ್ಸೇತುವೆ ಸಾರ್ವಜನಿಕ ಸೇವೆಗೆ ಸಮರ್ಪಣೆ

ಭದ್ರಾವತಿ ಹಳೇನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ಬಿಜೆಪಿ ಪಕ್ಷದ ಯುವ ಮುಖಂಡರಾದ ಜಿ. ಆನಂದಕುಮಾರ್ ಮತ್ತು ಮಂಗೋಟೆ ರುದ್ರೇಶ್‌ರವರು ಆನಂದ ಸಾಮಾಜಿಕ ಸೇವಾ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ ರಾಘವೇಂದ್ರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. 
    ಭದ್ರಾವತಿ : ಕಳೆದ ಸುಮಾರು ೩ ವರ್ಷಗಳಿಂದ ನಿರ್ಮಾಣಗೊಳ್ಳುತ್ತಿರುವ ನಗರದ ಕಡದಕಟ್ಟೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಮುಕ್ತಾಯಗೊಂಡಿದ್ದು, ಯುಗಾದಿ ಹಬ್ಬದಂದು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುವುದು ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು. 
    ಅವರು ಹಳೇನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ಬಿಜೆಪಿ ಪಕ್ಷದ ಯುವ ಮುಖಂಡರಾದ ಜಿ. ಆನಂದಕುಮಾರ್ ಮತ್ತು ಮಂಗೋಟೆ ರುದ್ರೇಶ್‌ರವರು ಆನಂದ ಸಾಮಾಜಿಕ ಸೇವಾ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದರು. 
ರೈಲ್ವೆ ಮೇಲ್ಸೇತುವೆಯಿಂದ ಸಾಕಷ್ಟು ಪ್ರಯೋಜನವಾಗಲಿದ್ದು, ಬಿ.ಎಚ್ ರಸ್ತೆಯಲ್ಲಿ ಶಿವಮೊಗ್ಗ-ಭದ್ರಾವತಿ ನಡುವೆ ಸಂಚರಿಸುವ ವಾಹನಗಳ ಸುಗಮ ಸಂಚಾರಕ್ಕೆ ಸಹಕಾರಿಯಾಗಿದೆ ಎಂದರು. 
    ನಗರಸಭೆ ಮಾಜಿ ಸದಸ್ಯ, ಪಕ್ಷದ ಯುವ ಮುಖಂಡ ಜಿ. ಆನಂದಕುಮಾರ್‌ರವರು ಪ್ರತಿ ವರ್ಷದಂತೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ನೆನಪಿನಲ್ಲಿ ಕ್ಯಾಲೆಂಡರ್ ಬಿಡುಗಡೆಗೊಳಿಸುತ್ತಿದ್ದು, ಅಲ್ಲದೆ ಆನಂದ ಸಾಮಾಜಿಕ ಸೇವಾ ಸಂಸ್ಥೆ ಮೂಲಕ ಹಲವಾರು ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಾ ಬಂದಿದ್ದಾರೆ. 
    ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಮಂಡಲ ಅಧ್ಯಕ್ಷ ಜಿ.ಧರ್ಮ ಪ್ರಸಾದ್, ಮುಖಂಡರಾದ ಟಿ.ಎಸ್ ದುಗ್ಗೇಶ್, ಅಣ್ಣಪ್ಪ, ಬಿ.ಜಿ ರಾಮಲಿಂಗಯ್ಯ, ಎಂ. ಮಂಜುನಾಥ್, ಮಧುಕರ್ ಕಾನಿಟ್ಕರ್, ದಿನೇಶ್, ಕೆ.ಎಚ್ ತೀರ್ಥಯ್ಯ, ನಗರಸಭಾ ಸದಸ್ಯೆ ಅನುಪಮ ಚನ್ನೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮಲಗಿದ್ದ ವ್ಯಕ್ತಿ ಮೇಲೆ ಕುಸಿದುಬಿದ್ದ ಗೋಡೆ : ಅಗ್ನಿಶಾಮಕದಳ ಸಿಬ್ಬಂದಿಯಿಂದ ರಕ್ಷಣೆ

ಭದ್ರಾವತಿ ಕಾಗದನಗರದ ಪಾಳುಬಿದ್ದು ಶಿಥಿಲಗೊಂಡಿದ್ದ, ತುಂಬಾ ಹಳೇಯದಾದ ಮನೆಯೊಂದರಲ್ಲಿ ಮಲಗಿದ್ದ ವ್ಯಕ್ತಿಯೋರ್ವನ ಮೇಲೆ ಗೋಡೆ ಕುಸಿದುಬಿದ್ದಿದ್ದು, ಅಗ್ನಿಶಾಮಕದಳ ಸಿಬ್ಬಂದಿಗಳು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸುವಲ್ಲಿ ಯಶಸ್ವಿಯಾಗಿರುವ ಘಟನೆ ಬುಧವಾರ ನಡೆದಿದೆ. 
    ಭದ್ರಾವತಿ : ಕಾಗದನಗರದ ಪಾಳುಬಿದ್ದು ಶಿಥಿಲಗೊಂಡಿದ್ದ, ತುಂಬಾ ಹಳೇಯದಾದ ಮನೆಯೊಂದರಲ್ಲಿ ಮಲಗಿದ್ದ ವ್ಯಕ್ತಿಯೋರ್ವನ ಮೇಲೆ ಗೋಡೆ ಕುಸಿದುಬಿದ್ದಿದ್ದು, ಅಗ್ನಿಶಾಮಕದಳ ಸಿಬ್ಬಂದಿಗಳು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸುವಲ್ಲಿ ಯಶಸ್ವಿಯಾಗಿರುವ ಘಟನೆ ಬುಧವಾರ ನಡೆದಿದೆ. 
    ಸುಮಾರು ೩೮ ವರ್ಷದ ಆನಂದ ಸ್ವಾಮಿ ಎಂಬುವರು ಕಾಗದನಗರದ ೭ನೇ ವಾರ್ಡ್‌ನ ಪಾಳುಬಿದ್ದಿದ್ದ ಮನೆಯೊಂದರಲ್ಲಿ ಮಲಗಿದ್ದಾಗ ಸಂಜೆ ೫ ಗಂಟೆ ಸಮಯದಲ್ಲಿ ಏಕಾಏಕಿ ಮನೆಯ ಗೋಡೆ ಕುಸಿದು ಬಿದ್ದಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗ್ನಿಶಾಮಕದಳ ಸಿಬ್ಬಂದಿಗಳು ಧಾವಿಸಿ ಸ್ಥಳೀಯರೊಂದಿಗೆ ಜೆಸಿಬಿ ಯಂತ್ರದ ಮೂಲಕ ಗೋಡೆ ಮಣ್ಣು ತೆರವುಗೊಳಿಸಿ ರಕ್ಷಿಸಿದ್ದಾರೆ. 
    ಅಗ್ನಿಶಾಮಕಠಾಣೆ ಸಹಾಯಕ ಠಾಣಾಧಿಕಾರಿ ಸಿ.ಎಚ್ ಹುಲಿಯಪ್ಪ ನೇತೃತ್ವದಲ್ಲಿ ಸಿಬ್ಬಂದಿಗಳಾದ ಬಬು, ಆನಂದ್, ಮಂಜುನಾಥ್, ಸುರೇಶ್, ಶ್ರೀನಿವಾಸ್, ಹರೀಶ್, ಮಹೇಂದ್ರ, ರಾಜಾನಾಯ್ಕ, ವೀರೇಶ್, ಬಾಬಲು ಮಾಣಿಕ ಬಾಯ್ ಮತ್ತು ಸಿದ್ದಪ್ಪ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. 

ಗಮನ ಸೆಳೆದ ಸಂಗೀತದಲ್ಲಿ ಸ್ತ್ರೀ ಸಂವೇದನೆ ವಿನೂತನ ಕಾರ್ಯಕ್ರಮ

ಭದ್ರಾವತಿ ಭೂಮಿಕಾ ವೇದಿಕೆ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ನಯನ ಆಸ್ಪತ್ರೆ ಸಭಾಂಗಣದಲ್ಲಿ ಸಂಗೀತದಲ್ಲಿ ಸ್ತ್ರೀ ಸಂವೇದನೆ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಭದ್ರಾವತಿ: ಭೂಮಿಕಾ ವೇದಿಕೆ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ನಯನ ಆಸ್ಪತ್ರೆ ಸಭಾಂಗಣದಲ್ಲಿ ಸಂಗೀತದಲ್ಲಿ ಸ್ತ್ರೀ ಸಂವೇದನೆ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಶಿವಮೊಗ್ಗದ ವಿದುಷಿ ಸುರೇಖಾ ಹೆಗಡೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಭೂಮಿಕಾ ವೇದಿಕೆ ಅಧ್ಯಕ್ಷ ಡಾ. ಕೃಷ್ಣ ಎಸ್. ಭಟ್ ಅಧ್ಯಕ್ಷತೆ ವಹಿಸಿದ್ದರು. ಸಂಗೀತದಲ್ಲಿ ಸ್ತ್ರೀ ಸಂವೇದನೆ ವಿನೂತನ ಕಾರ್ಯಕ್ರಮ ಎಲ್ಲರ ಗಮನ ಸೆಳೆಯುವ ಮೂಲಕ ಮೆಚ್ಚುಗೆಗೆ ಪಾತ್ರವಾಯಿತು. 
   ವೇದಿಕೆ ಪ್ರಧಾನ ಕಾರ್ಯದರ್ಶಿ ಅಪರಂಜಿ ಶಿವರಾಜ್, ಕಾರ್ಯದರ್ಶಿ ಡಾ. ವೀಣಾಭಟ್ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರು, ಸಾಹಿತ್ಯಾಭಿಮಾನಿಗಳು ಹಾಗು ಆಸಕ್ತರು ಪಾಲ್ಗೊಂಡಿದ್ದರು. 

೩ ತಿಂಗಳಿನಿಂದ ಚರಂಡಿಗಳಲ್ಲಿ ಸ್ವಚ್ಛತೆ ಇಲ್ಲ, ಸೊಳ್ಳೆ ಹಾವಳಿಯಿಂದ ನಿವಾಸಿಗಳು ತತ್ತರ

ಭದ್ರಾವತಿ ನಗರಸಭೆ ವಾರ್ಡ್ ನಂ.೯ರ ವ್ಯಾಪ್ತಿಯ ಭದ್ರಾ ಕಾಲೋನಿಯಲ್ಲಿ ಕಳೆದ ಸುಮಾರು ೩ ತಿಂಗಳಿನಿಂದ ಚರಂಡಿ ಸ್ವಚ್ಛತೆ ಕೈಗೊಳ್ಳದ ಕಾರಣ ಸೊಳ್ಳೆ ಹಾವಳಿ ಹೆಚ್ಚಾಗಿದ್ದು, ಇದರಿಂದಾಗಿ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ. 
    ಭದ್ರಾವತಿ : ನಗರಸಭೆ ವಾರ್ಡ್ ನಂ.೯ರ ವ್ಯಾಪ್ತಿಯ ಭದ್ರಾ ಕಾಲೋನಿಯಲ್ಲಿ ಕಳೆದ ಸುಮಾರು ೩ ತಿಂಗಳಿನಿಂದ ಚರಂಡಿ ಸ್ವಚ್ಛತೆ ಕೈಗೊಳ್ಳದ ಕಾರಣ ಸೊಳ್ಳೆ ಹಾವಳಿ ಹೆಚ್ಚಾಗಿದ್ದು, ಇದರಿಂದಾಗಿ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ. 
    ನಗರ ಪ್ರದೇಶಕ್ಕೆ ಹೊಂದಿಕೊಂಡಿರುವ ಸ್ವಲ್ಪ ಗ್ರಾಮೀಣ ಭಾಗವಾಗಿರುವ ಭದ್ರಾ ಕಾಲೋನಿಯಲ್ಲಿ ಹೆಚ್ಚಿನ ನಿವಾಸಿಗಳು ವಾಸವಾಗಿದ್ದು, ನಗರಸಭೆ ವತಿಯಿಂದ ಪ್ರತಿದಿನ ಮನೆ ಮನೆ ಕಸ ಸಂಗ್ರಹಿಸಲಾಗುತ್ತಿದೆ. ಆದರೆ ಕಳೆದ ೩ ತಿಂಗಳಿನಿಂದ ಚರಂಡಿಗಳ ಸ್ವಚ್ಛತೆ ಕೈಗೊಂಡಿಲ್ಲ. ಇದರಿಂದಾಗಿ ಚರಂಡಿಗಳಲ್ಲಿ ಬಾರಿ ಪ್ರಮಾಣದಲ್ಲಿ ಕಸ ಸಂಗ್ರಹವಾಗಿದ್ದು, ಅಲ್ಲದೆ ಚರಂಡಿಗಳಲ್ಲಿ ನೀರು ಮುಂದೆ ಹರಿಯದೆ ನಿಂತುಕೊಳ್ಳುತ್ತಿದೆ. ಇದರಿಂದಾಗಿ ಚರಂಡಿಗಳು ಸೊಳ್ಳೆಗಳಿಗೆ ಆಶ್ರಯ ತಾಣಗಳಾಗಿ ಮಾರ್ಪಾಡಾಗಿವೆ. 
    ದೇವಸ್ಥಾನ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಅದರಲ್ಲೂ ಜನಸಂದಣಿ ಹೆಚ್ಚಾಗಿರುವ ಸ್ಥಳಗಳಲ್ಲಿ ಚರಂಡಿ ಸ್ವಚ್ಛತೆ ಕೈಗೊಳ್ಳದಿರುವುದುನಿವಾಸಿಗಳು ಮತ್ತಷ್ಟು ತೊಂದರೆ ಅನುಭವಿಸುವಂತಾಗಿದೆ. ಪ್ರಸ್ತುತ ಬೇಸಿಗೆ ಕಾಲವಾಗಿರುವುದರಿಂದ ಸೊಳ್ಳೆಗಳ ಸಂತತಿ ವೇಗವಾಗಿ ಬೆಳೆಯುತ್ತಿದ್ದು, ರೋಗರುಜಿನಗಳು ಹೆಚ್ಚಾಗುವ ಭೀತಿ ಎದುರಾಗಿದೆ. ಈಗಾಗಲೇ ಹಲವು ಬಾರಿ ವಾರ್ಡಿನ ನಗರಸಭೆ ಚುನಾಯಿತ ಸದಸ್ಯರಿಗೆ ಹಾಗು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.  ಅಲ್ಲದೆ ತಕ್ಷಣ ಎಲ್ಲಾ ರಸ್ತೆಗಳ ಚರಂಡಿಗಳಲ್ಲಿ ಸ್ವಚ್ಛತೆ ಕೈಗೊಂಡು ಸೊಳ್ಳೆ ಹಾವಳಿಯಿಂದ ರಕ್ಷಿಸುವಂತೆ ನಿವಾಸಿಗಳು ಮನವಿ ಮಾಡಿದ್ದಾರೆ. 

ಮಂಗಳವಾರ, ಮಾರ್ಚ್ 25, 2025

ರೌಡಿಶೀಟರ್ ಅಬಿದ್ ಕಾಲಿಗೆ ಗುಂಡು : ಬಂಧನ

ರೌಡಿಶೀಟರ್ ಕಡೇಕಲ್ ಆಬಿದ್
    ಭದ್ರಾವತಿ : ನಗರದ ಬೊಮ್ಮನಕಟ್ಟೆ ಹಿರಿಯೂರು ಚಾನಲ್ ಬಳಿ ರೌಡಿಶೀಟರ್ ಶಿವಮೊಗ್ಗ ಕಡೇಕಲ್ ನಿವಾಸಿ ಆಬಿದ್(೩೯) ಕಾಲಿಗೆ ಪೇಪರ್‌ಟೌನ್ ಠಾಣೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಮಂಗಳವಾರ ನಡೆದಿದೆ. 
    ಪೊಲೀಸರು ಹಿಡಿಯಲು ಹೋದಾಗ ಕಾನ್ಸ್‌ಸ್ಟೇಬಲ್ ಅರುಣ್‌ನನ್ನು ಚಾಕಿವಿನಿಂದ ಇರಿದು ಓಡಿ ಹೋಗಲು ಯತ್ನಿಸಿದಾಗ ಠಾಣೆ ನಿರೀಕ್ಷಕಿ ನಾಗಮ್ಮ ಗುಂಡು ಹಾರಿಸಿದ್ದಾರೆ.  ಶಿವಮೊಗ್ಗ ರೌಡಿಶೀಟರ್ ಯಾಸಿನ್ ಖುರೇಶಿ ಸಹಚರನಾಗಿರುವ ಈತನು ಇತ್ತೀಚೆಗೆ ಕೊಲೆ ಯತ್ನ ಕೇಸಿನಲ್ಲಿ ಭಾಗಿಯಾಗಿ ನಾಪತ್ತೆಯಾಗಿದ್ದನು. ಈತನ ಬಂಧನಕ್ಕೆ ಪೇಪರ್‌ಟೌನ್ ಠಾಣೆ ಪೊಲೀಸರ ತಂಡ ಬಲೆ ಬೀಸಿತ್ತು. 
    ಬೊಮ್ಮನಕಟ್ಟೆ ಹಿರಿಯೂರು ಚಾನಲ್ ಬಳಿ ಈತನನ್ನು ಪತ್ತೆ ಮಾಡಿದ ತಂಡ ಠಾಣೆ ನಿರೀಕ್ಷಕಿ ನಾಗಮ್ಮ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಂಡಿತ್ತು. ಈತನನ್ನು ಹಿಡಿದು ಬಂಧಿಸಲು ಮುಂದಾದ ಕಾನ್ಸ್‌ಸ್ಟೇಬಲ್ ಅರುಣ್ ಮತ್ತು ಹನುಮಂತ ಇಬ್ಬರ ಮೇಲೆ ದಾಳಿ ನಡೆಸಿದ್ದು,  ಅರುಣ್  ಮೇಲೆ  ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ನಿರೀಕ್ಷಕಿ ನಾಗಮ್ಮ ರಕ್ಷಣೆಗಾಗಿ ಕಾಲಿಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. . ಆತನನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈತನ ಮೇಲೆ ಕೊಲೆ, ಕೊಲೆ ಯತ್ನ. ರಾಬರಿ ಇನ್ನು ಮುಂತಾದ ೨೦ ಪ್ರಕರಣಗಳಿವೆ.   

ಮಹಾನ್ ನಾಯಕರಿಗೆ ಗೌರವ ತಂದುಕೊಡುವ ರೀತಿಯಲ್ಲಿ ಅರ್ಥಪೂರ್ಣವಾಗಿ ಜಯಂತಿ ಆಚರಿಸಿ

ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಬಾಬು ಜಗ ಜೀವನ್‌ರಾಂರವರ ಜಯಂತಿ ಅಂಗವಾಗಿ ಜರುಗಿದ ಪೂರ್ವಭಾವಿ ಸಭೆ ಅಧ್ಯಕ್ಷತೆವಹಿಸಿ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್  ಮಾತನಾಡಿದರು. 
     ಭದ್ರಾವತಿ : ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೪ನೇ ಮತ್ತು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಂರವರ ೧೧೭ನೇ ಜಯಂತಿ ಎಲ್ಲರೂ ಒಗ್ಗಟ್ಟಾಗಿ ಈ ಇಬ್ಬರು ಮಹಾನ್ ನಾಯಕರಿಗೆ ಗೌರವ ತಂದುಕೊಡುವ ರೀತಿಯಲ್ಲಿ ಅರ್ಥಪೂರ್ಣವಾಗಿ ಆಚರಿಲು ಮುಂದಾಗಿ ಎಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. 
    ಅವರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಬಾಬು ಜಗ ಜೀವನ್‌ರಾಂರವರ ಜಯಂತಿ ಅಂಗವಾಗಿ ಜರುಗಿದ ಪೂರ್ವಭಾವಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು. 
    ಎಲ್ಲರೂ ಒಗ್ಗಟ್ಟಾಗಿ ಜಾತ್ಯಾತೀತವಾಗಿ ಮಹಾನ್ ವ್ಯಕ್ತಿಗಳ ಜಯಂತಿ ಆಚರಿಸಬೇಕು. ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರು ಸಹ ಕಡ್ಡಾಯವಾಗಿ ಪಾಲ್ಗೊಳ್ಳಬೇಕೆಂದರು.  
    ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಂಬೇಡ್ಕರ್ ಭವನ ಉದ್ಘಾಟನೆ ಸಂಬಂಧ ದಲಿತ ಮುಖಂಡರು ಒಮ್ಮತದ ನಿರ್ಧಾರ ಕೈಗೊಳ್ಳುವುದು ಸೂಕ್ತ. ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹಾದೇವಪ್ಪ ಅವರನ್ನು ಉದ್ಘಾಟನೆಗೆ ಆಹ್ವಾನಿಸಬಹುದು. ಈ ಸಂಬಂಧ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಿ  ಎಂದರು.  
    ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಬಾಬು ಜಗಜೀವನ್‌ರಾಂರವರ ಜಯಂತಿ ಅಂಗವಾಗಿ ೨ ನೇ ಪೂರ್ವಭಾವಿ ಸಭೆ ಕರೆಯಲಾಗಿದೆ. ಕೆಲ ಅಧಿಕಾರಿಗಳು ಬಾರದಿರುವುದು ವಿಪರ್ಯಾಸದ ಸಂಗತಿಯಾಗಿದೆ. ಈ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕೆಂದರು. 
    ಆರಂಭದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಸೀಲ್ದಾರ್ ಪರುಸಪ್ಪ ಕುರುಬರ ಕಾರ್ಯಕ್ರಮದ ವಿವರಣೆ ನೀಡಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ಪೊಲೀಸ್ ನಗರ ವೃತ್ತ ನಿರೀಕ್ಷಕ ಶ್ರೀಶೈಲಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಸಮಾಜ ಕಲ್ಯಾಧಿಕಾರಿ ಸುರೇಶ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಸಿದ್ದಬಸಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 
    ಸಭೆಯಲ್ಲಿ ಬಿ.ಟಿ.ನಾಗರಾಜ್, ಉಮಾ, ಶಿವಬಸಪ್ಪ, ಬಿ.ಎನ್.ರಾಜು, ಪ್ರಜಾಪ್ರತಿನಿಧಿ ಸುರೇಶ್, ಮುತ್ತು, ಪುಟ್ಟರಾಜು, ರಂಗನಾಥ್, ವಿನೋದ್, ಮಂಜುನಾಥ್, ರಾಜು, ಹೊಳೆಹೊನ್ನೂರು ಭಾಗದ ದಲಿತ ಮುಖಂಡರಾದ ಸುರೇಶ್, ಕೃಷ್ಣಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

ಡಿ.ಕೆ ಶಿವಕುಮಾರ್ ಹೇಳಿಕೆಯಿಂದ ಅಂಬೇಡ್ಕರ್, ಹಿಂದು-ದಲಿತರಿಗೆ ಅವಮಾನ

ಭದ್ರಾವತಿಯಲ್ಲಿ ಬಿಜೆಪಿ ಮಂಡಲ ವತಿಯಿಂದ ಮಂಗಳವಾರ ನಗರದ ರಂಗಪ್ಪ ವೃತ್ತದಲ್ಲಿ ಡಿ.ಕೆ ಶಿವಕುಮಾರ್‌ರವರ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. 
    ಭದ್ರಾವತಿ: ಕಾಂಗ್ರೆಸ್ ಸರ್ಕಾರ ಮುಸ್ಲಿಂ ಧರ್ಮದವರಿಗೆ ಶೇ.೪ರಷ್ಟು ಮೀಸಲಾತಿ ನೀಡಿದ್ದು, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರು ಹೇಳಿರುವ ಹಾಗೆ ಸಂವಿಧಾನ ಬದಲಾಯಿಸುವ ಅವಶ್ಯಕತೆ ಬಂದರೆ ಸಂವಿಧಾನವನ್ನೂ ಸಹ ಬದಲಾಯಿಸುತ್ತೇವೆ. ಕಾಂಗ್ರೆಸ್ ಸರ್ಕಾರವೇ ಸಂವಿಧಾನ ಜಾರಿಗೆ ತಂದದ್ದು ಎಂಬ ಹೇಳಿಕೆ ಮೂಲಕ ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್, ಹಿಂದುಗಳಿಗೆ ಹಾಗು ದಲಿತರಿಗೆ ಅವಮಾನಿಸಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಆರೋಪಿಸಿದರು. 
    ಬಿಜೆಪಿ ಮಂಡಲ ವತಿಯಿಂದ ಮಂಗಳವಾರ ನಗರದ ರಂಗಪ್ಪ ವೃತ್ತದಲ್ಲಿ ಡಿ.ಕೆ ಶಿವಕುಮಾರ್‌ರವರ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ನೇತೃತ್ವವಹಿಸಿ ಮಾತನಾಡಿದರು. 
    ಸ್ವಾತಂತ್ರ್ಯ ಪೂರ್ವದಲ್ಲಿ ಮುಸ್ಲಿಂ ಧರ್ಮದವರಿಗೆ ಪಾಕಿಸ್ತಾನ ಬಿಟ್ಟುಕೊಡುವ ಜೊತೆಗೆ ಅವರಿಗಾಗಿ ದೇಶದಲ್ಲಿ ವಿಶೇಷ ಸ್ಥಾನಮಾನ ಸಹ ನೀಡಲಾಗಿದೆ. ಆದರೂ ಸಹ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಎಲ್ಲಾ ವಿಷಯದಲ್ಲೂ ತಾರತಮ್ಯ ಮಾಡುವ ಮೂಲಕ ಹಿಂದುಗಳನ್ನು ದಮನ ಮಾಡುವ ಪ್ರಜಾಪ್ರಭುತ್ವ ವಿರೋಧಿ ನಿಲುವು, ಧೋರಣೆ ಅನುಸರಿಸಲಾಗುತ್ತಿದೆ. ಸಂವಿಧಾನ ದೇಶದ ರಕ್ಷಣೆಗಾಗಿ ಇದ್ದು, ಆದರೆ ಅದನ್ನು ಆಟಿಕೆಯಂತೆ ವೋಟ್ ಬ್ಯಾಂಕ್‌ಗಾಗಿ ಮುಸ್ಲಿಂ ಧರ್ಮದವರ ಓಲೈಕೆಗಾಗಿ ಪ್ರತಿ ಸಂದರ್ಭದಲ್ಲಿ ಬಳಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  
    ಹಿಂದೂ ವಿರೋಧಿ ನೀತಿ ತಾಳುತ್ತಿರುವ ಡಿ.ಕೆ ಶಿವಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಹುಲ್‌ಗಾಂಧಿ ಅವರಿಗೆ ಸಂವಿಧಾನದ ಮೇಲೆ ಸ್ವಲ್ಪವಾದರೂ ಗೌರವವಿದ್ದಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ತಕ್ಷಣ ಪಕ್ಷದಿಂದ ಉಚ್ಛಾಟಿಸಬೇಕೆಂದು ಆಗ್ರಹಿಸಿದರು. 
ಪ್ರ    ತಿಭಟನೆಯಲ್ಲಿ ಡಿ.ಕೆ ಶಿವಕುಮಾರ್ ಅವರ ಭಾವಚಿತ್ರ ದಹನ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು. ಪಕ್ಷದ ಯುವ ಮುಖಂಡ ಮಂಗೋಟೆ ರುದ್ರೇಶ್, ಜಿಲ್ಲಾ ಉಪಾಧ್ಯಕ್ಷ ಜಿ. ಆನಂದ್ ಕುಮಾರ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್, ಮೊಸರಳ್ಳಿ ಅಣ್ಣಪ್ಪ, ವಿವಿಧ ಮೋರ್ಚಾಗಳ ಅಧ್ಯಕ್ಷರಾದ ಹನುಮಂತ ನಾಯ್ಕ, ಸರಸ್ವತಿ, ಧನುಷ್ ಬೋಸ್ಲೆ, ರಾಜಶೇಖರ್ ಉಪ್ಪಾರ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ಸತೀಶ್, ರಘುರಾವ್, ನಿರಂಜನ್ ಗೌಡ, ಪ್ರಸನ್ನಕುಮಾರ್, ಜಿ.ವಿ ಕುಮಾರ್, ಶಿವಮೂರ್ತಿ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುಲೋಚನ ಪ್ರಕಾಶ್,ನಂಜಪ್ಪ, ಆಟೋ ಮೂರ್ತಿ ಸೇರಿದಂತೆ  ಕಾರ್ಯಕರ್ತರು ಪಾಲ್ಗೊಂಡಿದ್ದರು. 

ಜಾನಪದ ಕಲಾವಿದ, ಶಿಕ್ಷಕ ಎಂ.ಆರ್ ರೇವಣಪ್ಪರಿಗೆ ಜನಪದ ಕಲಾ ಸೇವಾ ರತ್ನ ಪ್ರಶಸ್ತಿ

ಕನ್ನಡ ಫಿಲಂ ಚೇಂಬರ್ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಜನಪದ ಕಲಾ ಸೇವಾ ರತ್ನ ಪ್ರಶಸ್ತಿ ಭದ್ರಾವತಿ ತಾಲೂಕಿನ ಸುಲ್ತಾನ್‌ಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ, ಜನಪದ ಕಲಾವಿದ ಎಂ.ಆರ್ ರೇವಣಪ್ಪ ಅವರಿಗೆ ಲಭಿಸಿದೆ. 
    ಭದ್ರಾವತಿ : ಕನ್ನಡ ಫಿಲಂ ಚೇಂಬರ್ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಜನಪದ ಕಲಾ ಸೇವಾ ರತ್ನ ಪ್ರಶಸ್ತಿ ತಾಲೂಕಿನ ಸುಲ್ತಾನ್‌ಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ, ಜನಪದ ಕಲಾವಿದ ಎಂ.ಆರ್ ರೇವಣಪ್ಪ ಅವರಿಗೆ ಲಭಿಸಿದೆ. 
    ಕನ್ನಡ ಫಿಲಂ ಚೇಂಬರ್ ವತಿಯಿಂದ ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಹಾಗು ಸಾಧನೆಯ ದಾರಿಯಲ್ಲಿ ಸಾಗುತ್ತಿರುವ ಸಾಧಕರಿಗೆ ಸರಳತೆಯ ಶಿಖರ, ಕರ್ನಾಟಕ ರತ್ನ, ನಗು ಮುಖದ ಪರಮಾತ್ಮ, ಅಭಿಮಾನಿಗಳ ಪ್ರೀತಿಯ ಅಪ್ಪು, ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್‌ರವರ ಸ್ಪೂರ್ತಿಯೊಂದಿಗೆ ರಾಜ್ಯಮಟ್ಟದ ಪ್ರಶಸ್ತಿನೀಡಿ ಗೌರವಿಸಲಾಗುತ್ತಿದೆ. 
    ಎಂ.ಆರ್ ರೇವಣಪ್ಪರವರು ಮೂಲತಃ ಶಿಕ್ಷಕರಾಗಿದ್ದು, ವೃತ್ತಿಯೊಂದಿಗೆ ಜಾನಪದ ಅಂತರರಾಷ್ಟ್ರೀಯ ಡೊಳ್ಳು ನೃತ್ಯ ಕಲಾವಿದರು ಹಾಗು ಸುಗ್ಗಿ ಕುಣಿತ ಕೋಲಾಟ ಕಲಾವಿದರಾಗಿದ್ದಾರೆ. ಅಲ್ಲದೆ ಕರ್ನಾಟಕ ಜಾನಪದ ಪರಿಷತ್ ತಾಲೂಕು ಶಾಖೆ ಅಧ್ಯಕ್ಷರಾಗಿದ್ದು, ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರಿಗೆ ಅಂತರರಾಷ್ಟ್ರೀಯ ಹಾಗು ರಾಜ್ಯ ಮಟ್ಟದ ಹಲವಾರು ಪ್ರಶಸ್ತಿಗಳು ಲಭಿಸಿವೆ. 
    ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾ.೨೩ರಂz ಆಯೋಜಿಸಲಾಗಿದ್ದ ಸಮಾರಂಭದಲ್ಲಿ ರೇವಣಪ್ಪರವರು `ಜನಪದ ಕಲಾ ಸೇವಾರತ್ನ' ಪ್ರಶಸ್ತಿ  ಸ್ವೀಕರಿಸಿದರು. ರೇವಣಪ್ಪ ಅವರನ್ನು ನಗರದ ಜನಪ್ರತಿನಿನಿಧಿಗಳು, ವಿವಿಧ ಸಂಘ ಸಂಸ್ಥೆಗಳು, ಗಣ್ಯರು ಅಭಿನಂದಿಸಿದ್ದಾರೆ.

ಸೋಮವಾರ, ಮಾರ್ಚ್ 24, 2025

ಲಕ್ಷಾಂತರ ರು. ಮೌಲ್ಯದ ಅಡಕೆ ಸಸಿ ನಾಶ : ಕ್ರಮ ಕೈಗೊಳ್ಳಲು ಆಗ್ರಹಿಸಿ ಅಹೋ ರಾತ್ರಿ ಧರಣಿ ಸತ್ಯಾಗ್ರಹ

ಸರ್ಕಾರದ ಆದೇಶ ಪತ್ರ ಅಥವಾ ತಿಳುವಳಿಕೆ ಪತ್ರ ಅಥವಾ ಸೂಚನಾ ಪತ್ರ ಸೇರಿದಂತೆ ಯಾವುದನ್ನು ಸಹ ನೀಡದೆ ಏಕಾಏಕಿ ಜಮೀನಿನಲ್ಲಿ ಬೆಳೆಯಲಾಗಿದ್ದ  ಅಡಕೆ ಸಸಿಗಳನ್ನು ಕಿತ್ತು ಹಾಕಿ ಲಕ್ಷಾಂತರ ರು. ನಷ್ಟ ಉಂಟು ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲೂಕಿನ  ಕೂಡ್ಲಿಗೆರೆ ಹೋಬಳಿ, ರತ್ನಾಪುರ ಗ್ರಾಮದಲ್ಲಿ ಸೋಮವಾರದಿಂದ ಅಹೋ ರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. 
    ಭದ್ರಾವತಿ: ಸರ್ಕಾರದ ಆದೇಶ ಪತ್ರ ಅಥವಾ ತಿಳುವಳಿಕೆ ಪತ್ರ ಅಥವಾ ಸೂಚನಾ ಪತ್ರ ಸೇರಿದಂತೆ ಯಾವುದನ್ನು ಸಹ ನೀಡದೆ ಏಕಾಏಕಿ ಜಮೀನಿನಲ್ಲಿ ಬೆಳೆಯಲಾಗಿದ್ದ  ಅಡಕೆ ಸಸಿಗಳನ್ನು ಕಿತ್ತು ಹಾಕಿ ಲಕ್ಷಾಂತರ ರು. ನಷ್ಟ ಉಂಟು ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲೂಕಿನ  ಕೂಡ್ಲಿಗೆರೆ ಹೋಬಳಿ, ರತ್ನಾಪುರ ಗ್ರಾಮದಲ್ಲಿ ಸೋಮವಾರದಿಂದ ಅಹೋ ರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. 
    ತಾಲೂಕಿನ ಕೂಡ್ಲಿಗೆರೆ ಹೋಬಳಿ, ರತ್ನಾಪುರ ಗ್ರಾಮದ ನಿವಾಸಿ, ಪರಿಶಿಷ್ಟ ಜಾತಿ ಭೋವಿ ಜನಾಂಗಕ್ಕೆ ಸೇರಿರುವ ಉತ್ರೇಶ್ ಕುಟುಂಬದವರು ಸರ್ವೆ ನಂ.೬೩ ಮತ್ತು ೬೪ರಲ್ಲಿ ತಲಾ ೨ ಎಕರೆ ಜಮೀನು  ಸುಮಾರು ೫೦-೬೦ ವರ್ಷಗಳಿಂದ  ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಬಂಡಿ ರಸ್ತೆ ಇದ್ದರೂ ಸಹ  ಮೇಲ್ವರ್ಗದವರು ಇವರ ಜಮೀನಿನಲ್ಲಿ ದಾರಿ ಪಡೆಯುವ ಉದ್ದೇಶದಿಂದ ಸುಮಾರು ೫೦ ರಿಂದ ೬೦ ಅಡಕೆ ಸಸಿಗಳನ್ನು ಕಿತ್ತು ಹಾಕಿ ಸುಮಾರು ೧೫ ರಿಂದ ೨೦ ಲಕ್ಷ ರು. ನಷ್ಟ ಉಂಟು ಮಾಡಿದ್ದಾರೆಂದು ಆರೋಪಿಸಿ ಅಹೋ ರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. 
    ತಪ್ಪಿತಸ್ಥರ ವಿರುದ್ಧ  ಕ್ರಮ ಕೈಗೊಂಡು ನ್ಯಾಯ ದೊರಕಿಸಿಕೊಡುವಂತೆ ಕೋರಲಾಗಿದೆ. ಅಲ್ಲದೆ ಜಿಲ್ಲಾಧಿಕಾರಿಗಳು ಹಾಗು ಉಪ ವಿಭಾಗಾಧಿಕಾರಿಗಳು  ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸುವವರೆಗೂ ಧರಣಿ ಸತ್ಯಾಗ್ರಹ ಮುಂದುವರೆಯಲಿದೆ ಎಂದು ಎಚ್ಚರಿಸಲಾಗಿದೆ. 
    ಉತ್ರೇಶ್ ಹಾಗು ಕುಟುಂಬ ವರ್ಗದವರು, ಭೋವಿ ಸಮುದಾಯದ ಮುಖಂಡರು, ಗ್ರಾಮಸ್ಥರು ಸೇರಿದಂತೆ ಇನ್ನಿತರರು ಅಹೋ ರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದಾರೆ. 

ಅಧ್ಯಕ್ಷರಾಗಿ ಎಂ. ಪರಮೇಶ್ವರಪ್ಪ, ಉಪಾಧ್ಯಕ್ಷರಾಗಿ ರಾಜಣ್ಣ

ಕೂಡ್ಲಿಗೆರೆ ಎಂ ಪರಮೇಶ್ವರಪ್ಪ 
    ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೂಡ್ಲಿಗೆರೆ ಎಂ ಪರಮೇಶ್ವರಪ್ಪ ಹಾಗೂ  ಉಪಾಧ್ಯಕ್ಷರಾಗಿ ಅರಳಿಹಳ್ಳಿ ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
     ಸದಸ್ಯರಾದ ಜಿ.ಆರ್ ಪಂಚಾಕ್ಷರಿ, ಮಹೇಶ್ವರನಾಯ್ಕ, ರಾಜ್ ಕುಮಾರ್, ಜಿ.ಆರ್ ಸಿದ್ದೇಶಪ್ಪ,  ಆರ್.ಎನ್ ರುದ್ರೇಶ್, ಗಿರಿಜಮ್ಮ, ವಿಜಯಲಕ್ಷ್ಮಿ ಬಾಯಿ, ವೆಂಕಟೇಶ್, ಆರ್. ಶಿವಣ್ಣ ಮತ್ತು ಟಿ.ತಿಪ್ಪೆಸ್ವಾಮಿ ಚುನಾವಣೆಯಲ್ಲಿ ಪಾಲ್ಗೊಂಡಿದ್ದರು.  


ಅರಳಿಹಳ್ಳಿ ರಾಜಣ್ಣ
     ಸಂಘದ ಮಾಜಿ ಅಧ್ಯಕ್ಷ ಎನ್.ಎಚ್ ಮಹೇಶ್, ಪಿ. ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಿ. ಕೆ  ಶಿವಕುಮಾರ್,  ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮಣಿಶೇಖರ್,  ಅರಳಿಹಳ್ಳಿ ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖರು, ಕೂಡ್ಲಿಗೆರೆ, ಸೀತಾರಾಮಪುರ, ಅತ್ತಿಗುಂದ, ಅರಳಿಹಳ್ಳಿ, ಕಲ್ಪನಹಳ್ಳಿ, ಬಸಲೀಕಟ್ಟೆ, ತಿಪ್ಲಾಪುರ, ಕೋಡಿಹಳ್ಳಿ ಗ್ರಾಮದ ಗ್ರಾಮಸ್ಥರು, ಹಿತೈಷಿಗಳು ಉಪಸ್ಥಿತರಿದ್ದರು.

ಕಾರೇಹಳ್ಳಿ ಸಂತ ಅಂತೋಣಿಯವರ ಪುಣ್ಯ ಕ್ಷೇತ್ರಕ್ಕೆ ಪಾದಯಾತ್ರೆ

ಭದ್ರಾವತಿ ಹಳೇನಗರದ ಗಾಂಧಿನಗರದಲ್ಲಿರುವ ವೇಳಾಂಗಣಿ ಆರೋಗ್ಯ ಮಾತೆ ಧರ್ಮ ಕೇಂದ್ರದ ವತಿಯಿಂದ ಭಾನುವಾರ ಆಯೋಗಗಳ ನಿರ್ದೇಶಕಿ ಸಿಸ್ಟರ್ ಬರ್ನಿ ಅವರ ನೇತೃತ್ವದಲ್ಲಿ ತಾಲೂಕಿನ ಕಾರೆಹಳ್ಳಿ ಸಂತ ಅಂತೋಣಿಯವರ ಪುಣ್ಯಕ್ಷೇತ್ರಕ್ಕೆ ಭಕ್ತರು ಪಾದಯಾತ್ರೆ ಕೈಗೊಂಡರು. 
    ಭದ್ರಾವತಿ : ಹಳೇನಗರದ ಗಾಂಧಿನಗರದಲ್ಲಿರುವ ವೇಳಾಂಗಣಿ ಆರೋಗ್ಯ ಮಾತೆ ಧರ್ಮ ಕೇಂದ್ರದ ವತಿಯಿಂದ ಭಾನುವಾರ ಆಯೋಗಗಳ ನಿರ್ದೇಶಕಿ ಸಿಸ್ಟರ್ ಬರ್ನಿ ಅವರ ನೇತೃತ್ವದಲ್ಲಿ ತಾಲೂಕಿನ ಕಾರೆಹಳ್ಳಿ ಸಂತ ಅಂತೋಣಿಯವರ ಪುಣ್ಯಕ್ಷೇತ್ರಕ್ಕೆ ಭಕ್ತರು ಪಾದಯಾತ್ರೆ ಕೈಗೊಂಡರು. 
    ೨೦೨೫ ಜ್ಯೂಬಿಲಿ ವರ್ಷವನ್ನು "ಭರವಸೆಯ ಯಾತ್ರಿಗಳ " ವರ್ಷವನ್ನಾಗಿ ಕ್ರೈಸ್ತ ಕಥೋಲಿಕ ಧರ್ಮದ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರು ಘೋಷಿಸಿದ್ದಾರೆ. ಈ ಹಿನ್ನಲೆಯಲ್ಲಿ ಸಾಧ್ಯವಾದಷ್ಟು ಪುಣ್ಯಕ್ಷೇತ್ರಗಳಿಗೆ ತೆರಳಿ ಪ್ರಾರ್ಥಿಸಲು ಭಕ್ತರಿಗೆ ಕರೆ ನೀಡಲಾಗಿದೆ. ಕೆಲವು ದಿನಗಳ ಹಿಂದೆ ಶಿವಮೊಗ್ಗ ಪ್ರಧಾನಾಲಯ ಸೆಕ್ರೆಟ್ ಹಾರ್ಟ್ ದೇವಾಲಯಕ್ಕೆ ಪಾದಯಾತ್ರೆ ಕೈಗೊಂಡಿದ್ದರು. 
    ಇದೀಗ ನಗರ ಪ್ರದೇಶದಿಂದ ಸುಮಾರು ೮ ಕಿ.ಮೀ. ದೂರದಲ್ಲಿರುವ ಬಾರಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೇಹಳ್ಳಿಯಲ್ಲಿರುವ ಸಂತ ಅಂತೋಣಿಯವರ ಪುಣ್ಯಕ್ಷೇತ್ರಕ್ಕೆ ಧರ್ಮ ಕೇಂದ್ರದಿಂದ ೨೦೦ಕ್ಕೂ ಅಧಿಕ ಭಕ್ತರು ಕಾಲ್ನಡಿಗೆಯಲ್ಲಿ ಸಾಗಿ ದೇವಾಲಯವನ್ನು ತಲುಪಿದರು ಎಂದು ಧರ್ಮ ಕೇಂದ್ರದ ಗುರುಗಳಾದ ಫಾದರ್ ಸ್ಟೀವನ್ ಡೇಸಾ ತಿಳಿಸಿದರು. 
    ನಂತರ ಕಾರೆಹಳ್ಳಿ ದೇವಾಲಯದ ಧರ್ಮ ಗುರುಗಳಾದ ಫಾದರ್ ಸಂತೋಷ್ ಅಲ್ಮೇಡರವರಿಂದ ಪ್ರಾರ್ಥನೆ ನೆರವೇರಿತು. 
    ಸಿಸ್ಟರ್ ಗ್ಲಾಡಿಸ್ ಪಿಂಟೋ, ಸಿಸ್ಟರ್ ವಿನ್ಸಿ, ಸಿಸ್ಟರ್ ಶೋಭನ, ಸಿಸ್ಟರ್ ನಿರ್ಮಲ, ಸಿಸ್ಟರ್ ತೆರೇಸಾ, ಸಿಸ್ಟರ್ ಸರಿತಾ, ಸಿಸ್ಟರ್ ಮಂಜು, ಸಿಸ್ಟರ್ ಶಾಲ್ಬಿ, ಸಿಸ್ಟರ್ ಸಿಲ್ಜಿ ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.

ಎಚ್.ಎಸ್ ಮಾಯಮ್ಮರವರ ಮೊದಲ ಕೃತಿ `ಮನಸ್ಸು' ಮಾ.೨೫ರಂದು ಬಿಡುಗಡೆ

ಎಚ್.ಎಸ್ ಮಾಯಮ್ಮ ನರಸಿಂಹಮೂರ್ತಿ ಅವರ ಮೊದಲ ಕವನ ಸಂಕಲನ `ಮನಸ್ಸು' ಕೃತಿ ಮುಖ ಪುಟ. 
    ಭದ್ರಾವತಿ : ತಾಲೂಕಿನ ದೇವರ ನರಸೀಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಚ್.ಎಸ್ ಮಾಯಮ್ಮ ನರಸಿಂಹಮೂರ್ತಿ ಅವರ ಮೊದಲ ಕವನ ಸಂಕಲನ `ಮನಸ್ಸು' ಕೃತಿ ಮಾ.೨೫ರಂದು sಸಂಜೆ ೭ ಗಂಟೆಗೆ ಬಿಡುಗಡೆಗೊಳ್ಳಲಿದೆ. 
    ಶ್ರೀ ಮಾರುತಿ ಕೃಪಾ ಪೋಷಿತ ನಾಟಕ ಮಂಡಳಿ ಸಂಯುಕ್ತಾಶ್ರಯದಲ್ಲಿ ಕುಣಿಗಲ್ ತಾಲೂಕಿನ ಹಾಲುವಾಗಿಲು ಗ್ರಾಮದಲ್ಲಿ ಶಾಸಕ ಎಚ್.ಡಿ ರಂಗನಾಥ್‌ರವರು ಕೃತಿ ಬಿಡುಗಡೆಗೊಳಿಸುತ್ತಿದ್ದಾರೆ. ಮೊದಲ ಕವನ ಸಂಕಲನ `ಮನಸ್ಸು' ಕೃತಿಗೆ ನಗರದ ಎಮೆರಿಟಸ್ ಪ್ರಾಧ್ಯಾಪಕಿ ಡಾ. ವಿಜಯಾದೇವಿ ಮುನ್ನುಡಿ ಬರೆದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಶಾಸಕ ಬಿ.ಕೆ ಸಂಗಮೇಶ್ವರ್ ಕೃತಿಯನ್ನು ಅಭಿನಂದಿಸಿದ್ದಾರೆ.
    ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ ತಾಲೂಕಿನ ಶಿಕ್ಷಕ ವೃಂದ, ಸಾಹಿತ್ಯಾಭಿಮಾನಿಗಳು, ಹಿತೈಷಿಗಳು ಸೇರಿದಂತೆ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.  

ಭಾನುವಾರ, ಮಾರ್ಚ್ 23, 2025

ಮ್ಯಾಮ್ಕೋಸ್‌ಗೆ ೧೯ ನಿರ್ದೇಶಕರ ಆಯ್ಕೆ : ಮುಖಂಡರು, ಕಾರ್ಯಕರ್ತರಲ್ಲಿ ಮತ್ತಷ್ಟು ಹುಮ್ಮಸ್ಸು

ಬಿಜೆಪಿ ತಾಲೂಕು ಮಂಡಲ ಅಭಿನಂದನಾ ಕಾರ್ಯಕ್ರಮದಲ್ಲಿ  ಜಿ. ಧರ್ಮಪ್ರಸಾದ್ 

ಭದ್ರಾವತಿ ಬಿಜೆಪಿ ಮಂಡಲದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಮ್ಯಾಮ್ಕೋಸ್‌ಗೆ ನೂತನವಾಗಿ ಆಯ್ಕೆಯಾದ ೧೯ ನಿರ್ದೇಶಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. 
    ಭದ್ರಾವತಿ : ಜಿಲ್ಲೆಯಲ್ಲಿ ನಡೆದ ಮ್ಯಾಮ್ಕೋಸ್ ಚುನಾವಣೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಶ್ರಮವಹಿಸಿದ ಹಿನ್ನಲೆಯಲ್ಲಿ ೧೯ ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಇದು ಸಂಘಟಿತವಾಗಿ ಕಾರ್ಯನಿರ್ವಹಿಸಿದ ಫಲ ಎಂದು ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹೇಳಿದರು. 
    ಅವರು ಭಾನುವಾರ ಮಂಡಲದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮ್ಯಾಮ್ಕೋಸ್‌ಗೆ ನೂತನವಾಗಿ ಆಯ್ಕೆಯಾದ ೧೯ ನಿರ್ದೇಶಕರಿಗೆ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. 
    ಪಕ್ಷದ ಪರವಾಗಿ ೧೯ ಅಭ್ಯರ್ಥಿಗಳನ್ನು ಬೆಂಬಲಿಸಿ ಅವರ ಗೆಲುವಿಗೆ ಶಕ್ತಿಮೀರಿ ಶ್ರಮಿಸಲಾಗಿದ್ದು, ಬೆಂಬಲಿಸಿದ ಎಲ್ಲಾ ೧೯ ನಿರ್ದೇಶಕರು ಸಹ ಗೆಲುವು ಸಾಧಿಸಿರುವುದು ಸಂತೋಷದ ಸಂಗತಿಯಾಗಿದೆ. ಇದು ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿ ಮತ್ತಷ್ಟು ಹುಮ್ಮಸ್ಸು ಹೆಚ್ಚಿಸಿದೆ ಎಂದರು. 
    ಮ್ಯಾಮ್ಕೋಸ್ ಜಿಲ್ಲಾಧ್ಯಕ್ಷ ಮಹೇಶ್ ಉಲ್ಕುಳಿ ಮಾತನಾಡಿ, ಸಹಕಾರ ಭಾರತಿ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಂತಹ ಚುನಾವಣೆಯನ್ನು ಸಮರ್ಥವಾಗಿ ಎದುರಿಸಿದೆ. ೧೯ ಅಭ್ಯರ್ಥಿಗಳ ಗೆಲುವಿಗೆ ಕಾರಣಕರ್ತರಾದ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಖಂಡರು, ಕಾರ್ಯಕರ್ತರ ಶ್ರಮ ಹೆಚ್ಚಿನದ್ದಾಗಿದೆ ಎಂದರು.  
    ಪಕ್ಷದ  ಜಿಲ್ಲಾ ಉಪಾಧ್ಯಕ್ಷ ಜಿ. ಅನಂದ್ ಕುಮಾರ್, ಹೊಳೆಹೊನ್ನೂರು ಮಂಡಲ ಅಧ್ಯಕ್ಷ ಮಲ್ಲೇಶಪ್ಪ, ಜಿಲ್ಲಾ ವಿಶೇಷ ಆಹ್ವಾನಿತ ಎಚ್. ತೀರ್ಥಯ್ಯ, ಸಹಕಾರ ಭಾರತಿ ಜಿಲ್ಲಾ ನಿರ್ದೇಶಕರಾದ ಕುಪೇಂದ್ರಪ್ಪ, ಕೀರ್ತಿರಾಜ್, ಮಹೇಶ್, ಭೀಮಣ್ಣ, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಉಪಾಧ್ಯಕ್ಷ ಶಿವಕುಮಾರ್, ಸಂಘದ ಪ್ರಮುಖರಾದ ಡಾ. ದತ್ತಾತ್ರೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚೆನ್ನೇಶ್ ಹಾಗೂ ಮೊಸರಳ್ಳಿ ಅಣ್ಣಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಪ್ರಸ್ತುತ ಬಗರ್‌ಹುಕುಂ ಸಾಗುವಳಿದಾರರಿಗೆ ಎದುರಾಗಿರುವ ಸಮಸ್ಯೆ ಬಗೆಹರಿಸಲು ಸರ್ಕಾರ ಬದ್ಧ : ಸಚಿವ ಮಧು ಬಂಗಾರಪ್ಪ

ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮುಂಬರುವ ತಾಲೂಕು ಪಂಚಾಯಿತಿ ಹಾಗು ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ಭದ್ರಾವತಿ ನಗರದ ಕೋಡಿಹಳ್ಳಿ ರಸ್ತೆಯಲ್ಲಿರುವ ದೈವಜ್ಞ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕರ್ತರ ಸಭೆ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಉದ್ಘಾಟಿಸಿದರು. 
    ಭದ್ರಾವತಿ: ರಾಜ್ಯ ಸರ್ಕಾರ ಎಂದಿಗೂ ರೈತರ ಪರವಾಗಿದ್ದು, ಯಾವುದೇ ಕಾರಣಕ್ಕೂ ಅವರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಪ್ರಸ್ತುತ ಬಗರ್‌ಹುಕುಂ ಸಾಗುವಳಿದಾರರಿಗೆ ಎದುರಾಗಿರುವ ಸಮಸ್ಯೆ ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. 
    ಅವರು ಭಾನುವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮುಂಬರುವ ತಾಲೂಕು ಪಂಚಾಯಿತಿ ಹಾಗು ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ನಗರದ ಕೋಡಿಹಳ್ಳಿ ರಸ್ತೆಯಲ್ಲಿರುವ ದೈವಜ್ಞ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು. 
    ಬಗರ್ ಹುಕುಂ ಸಾಗುವಳಿದಾರರಿಗೆ ನೀಡಿರುವ ನೋಟಿಸ್‌ನಿಂದ ಯಾರು ಸಹ ಭಯಪಡಬೇಕಾದ ಅಗತ್ಯವಿಲ್ಲ. ಸರ್ಕಾರ ಎದುರಾಗಿರುವ ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ ಎಂದರು. 
    ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಮೈಸೂರು ಕಾಗದ ಕಾರ್ಖಾನೆ ಪುನರ್ ಆರಂಭಿಸುವ ಸಂಬಂಧ ಶಾಸಕರು ಹೆಚ್ಚಿನ ಶ್ರಮವಹಿಸುತ್ತಿದ್ದಾರೆ. ಅವರೊಂದಿಗೆ ನಾನು ಸಹ ಕೈಜೋಡಿಸುತ್ತೇನೆ. ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ. ಒಂದು ವೇಳೆ ಕೇಂದ್ರ ಸರ್ಕಾರದ ಜೊತೆಗೆ ಚರ್ಚಿಸುವ ಅಗತ್ಯವಿದ್ದಲ್ಲಿ ಇದ್ದಕ್ಕೂ ಸಹ ಸಿದ್ದವಿದ್ದೇನೆ ಎಂದರು. 


ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮುಂಬರುವ ತಾಲೂಕು ಪಂಚಾಯಿತಿ ಹಾಗು ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ಭದ್ರಾವತಿ ನಗರದ ಕೋಡಿಹಳ್ಳಿ ರಸ್ತೆಯಲ್ಲಿರುವ ದೈವಜ್ಞ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹಾಗು ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಪಕ್ಷದ ಜಿಲ್ಲಾಧ್ಯಕ್ಷ, ವಿಧಾನಪರಿಷತ್ ಮಾಜಿ ಸದಸ್ಯ ಆರ್. ಪ್ರಸನ್ನಕುಮಾರ್ ಮಾತನಾಡಿ, ಪಕ್ಷದ ರಾಜ್ಯಾಧ್ಯಕ್ಷರಾದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರ ಆದೇಶದಂತೆ ತಾಲೂಕು ಪಂಚಾಯಿತಿ ಹಾಗು ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ಎಲ್ಲಾ ತಾಲೂಕು ಹಾಗು ಜಿಲ್ಲೆಗಳಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಲಾಗುತ್ತಿದೆ. ಕ್ಷೇತ್ರದಲ್ಲಿ ಈಗಾಗಲೇ ನಗರಸಭೆ ಆಡಳಿತ ಕಾಂಗ್ರೆಸ್ ಪಕ್ಷದಲ್ಲಿದ್ದು, ಶಾಸಕರ ನೇತೃತ್ವದಲ್ಲಿ ಪಕ್ಷ ಹೆಚ್ಚು ಕ್ರಿಯಾಶೀಲವಾಗಿದೆ. ಈ ಹಿನ್ನಲೆಯಲ್ಲಿ ತಾಲೂಕು ಪಂಚಾಯಿತಿ ಹಾಗು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು. 
    ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಚುನಾವಣೆಯಲ್ಲಿ ಎಲ್ಲರಿಗೂ ಟಿಕೆಟ್ ಕೊಡಲು ಸಾಧ್ಯವಿಲ್ಲ. ಪಕ್ಷ ಯಾರನ್ನು ಆಯ್ಕೆ ಮಾಡುತ್ತವೆಯೋ ಅವರನ್ನು ಬೆಂಬಲಿಸಿ ಅವರ ಗೆಲುವಿಗೆ ಶ್ರಮಿಸಬೇಕು. ಕ್ಷೇತ್ರದಾದ್ಯಂತ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ಅವುಗಳನ್ನು ತಿಳಿಸುವ ಮೂಲಕ ಅಭಿವೃದ್ಧಿ ಕುರಿತು ಮನವರಿಕೆ ಮಾಡಿಕೊಡಬೇಕೆಂದರು. 
    ವಿಧಾನಪರಿಷತ್ ಸದಸ್ಯೆ ಬಲ್ಕೀಶ್ ಬಾನು, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ಪ್ರಮುಖರಾದ ಚಂದ್ರಭೂಪಾಲ, ವೈ. ರೇಣುಕಮ್ಮ, ಬಿ.ಕೆ ಮೋಹನ್, ಬಿ.ಕೆ ಶಿವಕುಮಾರ್, ಸಿ.ಎಂ ಖಾದರ್, ಎಸ್. ಮಣಿಶೇಖರ್, ಬಿ.ಎಸ್ ಗಣೇಶ್, ಸುಕನ್ಯ ದಶರಥಗಿರಿ, ಎಚ್. ರವಿಕುಮಾರ್, ನಗರಸಭೆ ಸದಸ್ಯರಾದ ವಿ. ಕದಿರೇಶ್, ಶಶಿಕಲಾ ನಾರಾಯಣಪ್ಪ, ಬಿ.ಟಿ ನಾಗರಾಜ್, ಅಮೀರ್ ಜಾನ್, ಗಂಗಾಧರ್, ಎಂ. ಶಿವಕುಮಾರ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗು ಕಾರ್ಯಕರ್ತರು ಪಾಲ್ಗೊಂಡಿದ್ದರು. 

ಶನಿವಾರ, ಮಾರ್ಚ್ 22, 2025

ಮಾ.೨೩ರಂದು ವಿದ್ಯುತ್ ವ್ಯತ್ಯಯ


    ಭದ್ರಾವತಿ :  ಮೆಸ್ಕಾಂ ನಗರ /ಗ್ರಾಮೀಣ ಉಪವಿಭಾಗಗಳ ವ್ಯಾಪ್ತಿಯಲ್ಲಿ ಮಾ.೨೩ರ ಭಾನುವಾರ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 
    ಕಾಗದನಗರ, ಉಜ್ಜನೀಪುರ, ದೊಡ್ಡಗೊಪ್ಪೇನಹಳ್ಳಿ, ಹುಡ್ಕೋಕಾಲೋನಿ, ವಿದ್ಯಾಮಂದಿರ, ನ್ಯೂಕಾಲೋನಿ, ಜೆ.ಪಿ.ಎಸ್ ಕಾಲೋನಿ, ಜನ್ನಾಪುರ, ಆನೆಕೊಪ್ಪ ಕುಡಿಯುವ ನೀರಿನ ಸ್ಥಾವರ, ಹೊಸ ಸಿದ್ದಾಪುರ ಕುಡಿಯುವ ನೀರಿನ ಸ್ಥಾವರ, ಬೊಮ್ಮನಕಟ್ಟೆ ಕುಡಿಯುವ ನೀರಿನ ಸ್ಥಾವರ, ಬಾರಂದೂರು, ಭದ್ರಾ ಪ್ಯಾಕೇಟ್ಸ್ ಮಾರ್ಗ, ಮೊಸರಹಳ್ಳಿ, ಕಾರೇಹಳ್ಳಿ, ಬೊಮ್ಮೇನಹಳ್ಳಿ, ಕಾಳಿಂಗನಹಳ್ಳಿ, ಹಡ್ಲಘಟ್ಟ, ಶಿವಪುರ, ಕೆಂಚೇನಹಳ್ಳಿ, ಮಾವಿನಕೆರೆ, ಮಾವಿನಕೆರೆ ಕಾಲೋನಿ, ಅಂತರಗಂಗೆ, ಭೋವಿ ಕಾಲೋನಿ, ಗಂಗೂರು, ದೊಡ್ಡೇರಿ, ಉಕ್ಕುಂದ, ದೇವರ ನರಸೀಪುರ, ಕೆಂಚಮ್ಮನ ಹಳ್ಳಿ, ಲಕ್ಷ್ಮೀಪುರ, ದೊಣಬಘಟ್ಟ, ಪದ್ಮೇನಹಳ್ಳಿ, ತಡಸ ಹಿರಿಯೂರು, ಕಾಳನಕಟ್ಟೆ, ಕಂಬದಾಳು ಹೊಸೂರು, ಹೊನ್ನಹಟ್ಟಿ ಹೊಸೂರು, ಅರಳಿಕೊಪ್ಪ, ಕಾಚಗೊಂಡನ ಹಳ್ಳಿ, ಗೊಂದಿ, ಗೊಂದಿ ಕುಡಿಯುವ ನೀರಿನ ಸ್ಥಾವರ, ಶ್ರೀನಿವಾಸಪುರ ಸುತ್ತ ಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ. 

ಮಾ.೨೩ರಂದು ಸಂಗೀತದಲ್ಲಿ ಸ್ತ್ರೀ ಸಂವೇಧನೆ ವಿನೂತನ ಕಾರ್ಯಕ್ರಮ



    
ಭದ್ರಾವತಿ: ನಗರದ ಭೂಮಿಕಾ ವೇದಿಕೆ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾ.೨೩ರಂದು ಸಂಜೆ ೬ ಗಂಟೆಗೆ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ನಯನ ಆಸ್ಪತ್ರೆ ಸಭಾಂಗಣದಲ್ಲಿ ಸಂಗೀತದಲ್ಲಿ ಸ್ತ್ರೀ ಸಂವೇದನೆ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿದೆ. 
    ಶಿವಮೊಗ್ಗದ ವಿದುಷಿ ಸುರೇಖಾ ಹೆಗಡೆ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದು, ಭೂಮಿಕಾ ವೇದಿಕೆ ಅಧ್ಯಕ್ಷ ಡಾ. ಕೃಷ್ಣ ಎಸ್. ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಪುನೀತ್‌ರಾಜ್‌ಕುಮಾರ್ ನಾಡಿನ ಸಾಂಸ್ಕೃತಿಕ ನಾಯಕ : ಕೋಗಲೂರು ತಿಪ್ಪೇಸ್ವಾಮಿ

ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ಶನಿವಾರ ಭದ್ರಾವತಿ ನ್ಯೂಟೌನ್ ಅಯ್ಯಪ್ಪ ಸ್ವಾಮಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರತ್ನ, ನಟ, ಸಮಾಜ ಸೇವಕ ಪುನೀತ್‌ರಾಜ್‌ಕುಮಾರ್‌ರವರ ೫೦ನೇ ವರ್ಷದ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ವಿಶೇಷವಾಗಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ಕಲಾವಿದ ಅಪೇಕ್ಷ ಮಂಜುನಾಥ್ ಮತ್ತು ರಂಗ ಕಲಾವಿದ ವೈ.ಕೆ ಹನುಮಂತಯ್ಯ ಅವರನ್ನು ಸನ್ಮಾನಿಸಲಾಯಿತು.
    ಭದ್ರಾವತಿ: ಕರ್ನಾಟಕ ರತ್ನ, ನಟ, ಸಮಾಜ ಸೇವಕ ಪುನೀತ್‌ರಾಜ್‌ಕುಮಾರ್ ಈ ನಾಡಿನ ಸಾಂಸ್ಕೃತಿಕ ನಾಯಕ ಎಂದು ಎರೇಹಳ್ಳಿ ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯ ಕೋಗಲೂರು ತಿಪ್ಪೇಸ್ವಾಮಿ ಬಣ್ಣಿಸಿದರು. 
    ಅವರು ನಗರದ ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ಶನಿವಾರ ನ್ಯೂಟೌನ್ ಅಯ್ಯಪ್ಪ ಸ್ವಾಮಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರತ್ನ, ನಟ, ಸಮಾಜ ಸೇವಕ ಪುನೀತ್‌ರಾಜ್‌ಕುಮಾರ್‌ರವರ ೫೦ನೇ ವರ್ಷದ ಹುಟ್ಟುಹಬ್ಬ ಉದ್ಘಾಟಿಸಿ ಮಾತನಾಡಿದರು. 
  ಅಂದು ಪುನೀತ್ ರಾಜ್‌ಕುಮಾರ್‌ರವರ ನಿಧನಕ್ಕೆ ಇಡೀ ವಿಶ್ವವೇ ಕಂಬನಿ ಮುಡಿದಿತ್ತು. ಅವರೊಬ್ಬ ಧೀಮಂತ ನಾಯಕರಾಗಿ ಇಂದಿಗೂ ಕಂಗೊಳಿಸುತ್ತಿದ್ದಾರೆ. ಅವರಿಲ್ಲದ ೫೦ನೇ ವರ್ಷದ ಹುಟ್ಟುಹಬ್ಬ ಇಂದು ನಮ್ಮೆಲ್ಲರಿಗೂ ಸಂಕಟದ ದಿನವಾಗಿದೆ. ನಿಜ ಜೀವನದ ಒಬ್ಬ ನಾಯಕನಾಗಿ, ಸೇವಕನಾಗಿ ನಮ್ಮೆಲ್ಲರಿಗೂ ಭೂತಕಾಲ, ವರ್ತಮಾನ ಕಾಲ ಹಾಗು ಭವಿಷ್ಯ ಕಾಲ ೩ ಕಾಲಕ್ಕೂ ಒಪ್ಪುವಂತಹ ಎಂದೆಂದಿಗೂ ಏಕೈಕ ಆದರ್ಶ ವ್ಯಕ್ತಿ ಪುನೀತ್ ರಾಜ್‌ಕುಮಾರ್ ಎಂದರೆ ತಪ್ಪಾಗಲಾರದು. ಇಂತಹ ಮಹಾನ್ ವ್ಯಕ್ತಿಯ ಹುಟ್ಟುಹಬ್ಬ ಆಚರಣೆ ಮಾಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಕಲಾವಿದರು ಇವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದರು.  
    ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ನಟರಾಜ್, ಸಂಘದ ಗೌರವ ಸಲಹೆಗಾರ ರಾಜವಿಕ್ರಂ, ಹಿರಿಯ ಕಲಾವಿದ ಜೆ.ಪಿ ನಂಜುಂಡೇಗೌಡ ಹಾಗು ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ಎಲ್. ದೇವರಾಜ್  ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.  
    ವಿಶೇಷವಾಗಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ಕಲಾವಿದ ಅಪೇಕ್ಷ ಮಂಜುನಾಥ್ ಮತ್ತು ರಂಗ ಕಲಾವಿದ ವೈ.ಕೆ ಹನುಮಂತಯ್ಯ ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. 
    ಸಂಘದ ಪದಾಧಿಕಾರಿಗಳು, ಕಲಾವಿದರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಕಲಾವಿದರಿಂದ ಪುನೀತ್‌ರಾಜ್‌ಕುಮಾರ್ ಚಲನಚಿತ್ರ ಗೀತೆಗಳ ಗಾಯನ ನಡೆಯಿತು. 

ಜಮೀನಿಗೆ ಅಕ್ರಮವಾಗಿ ಪ್ರವೇಶಿಸಿ ತೊಂದರೆ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಿ : ಮನವಿ

ಭದ್ರಾವತಿ  ತಾಲೂಕಿನ ಹುಳಿಯಾರು ರಾಮೇನಕೊಪ್ಪ ಗ್ರಾಮದ ಸರ್ವೆ ನಂಬರ್ ೩೬ರಲ್ಲಿರುವ ಮೂರು ಎಕರೆ ಹಾಗೂ ಸರ್ವೇ ನಂಬರ್ ೩೭ರಲ್ಲಿರುವ ೩ ಎಕರೆ ಜಮೀನಿಗೆ  ಅಕ್ರಮವಾಗಿ ಪ್ರವೇಶಿಸಿ ತೊಂದರೆ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗು ಸ್ವಾಧೀನಕ್ಕೆ ಜಮೀನು ಬಿಟ್ಟುಕೊಡಬೇಕೆಂದು ಜಮೀನಿನ ವಾರಸುದಾರರಾದ ಪ್ರಸನ್ನ ಕುಮಾರ್ ಹಾಗೂ ಅನಿತಾ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.
    ಭದ್ರಾವತಿ : ತಾಲೂಕಿನ ಹುಳಿಯಾರು ರಾಮೇನಕೊಪ್ಪ ಗ್ರಾಮದ ಸರ್ವೆ ನಂಬರ್ ೩೬ರಲ್ಲಿರುವ ಮೂರು ಎಕರೆ ಹಾಗೂ ಸರ್ವೇ ನಂಬರ್ ೩೭ರಲ್ಲಿರುವ ೩ ಎಕರೆ ಜಮೀನಿಗೆ  ಅಕ್ರಮವಾಗಿ ಪ್ರವೇಶಿಸಿ ತೊಂದರೆ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗು ಸ್ವಾಧೀನಕ್ಕೆ ಜಮೀನು ಬಿಟ್ಟುಕೊಡಬೇಕೆಂದು ಜಮೀನಿನ ವಾರಸುದಾರರಾದ ಪ್ರಸನ್ನ ಕುಮಾರ್ ಹಾಗೂ ಅನಿತಾ ಮನವಿ ಮಾಡಿದರು.
  ಅವರು ಈ ಸಂಬಂಧ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಾಲೂಕಿನ ಹುಳಿಯಾರು ರಾಮೇನಕೊಪ್ಪ ಗ್ರಾಮದ ಸರ್ವೆ ನಂಬರ್ ೩೬ರಲ್ಲಿರುವ (ಹಳೆಯ ಸರ್ವೆ ನಂಬರ್ ೧೫) ೩ ಎಕರೆ ಜಮೀನನ್ನು ಕರ್ನಾಟಕ ಭೂಸುಧಾರಣಾ ಕಾಯ್ದೆಯ ಪ್ರಕಾರ ವೆಂಕಟೇಶ್ ಬಿನ್ ತಿಮ್ಮಯ್ಯ ಅವರ ಹೆಸರಿಗೆ (ಸಾಗುವಳಿ ಚೀಟಿ ಸಂಖ್ಯೆ ೫೦೮/೯೬-೯೭) ಹಾಗೂ ಸರ್ವೇ ನಂಬರ್ ೩೭ರಲ್ಲಿರುವ ಮೂರು ಎಕರೆ ಜಮೀನನ್ನು ನಂಜಮ್ಮ ಬಿನ್ ದೊಡ್ಡಯ್ಯ ಅವರ ಹೆಸರಿಗೆ (ಸಾಗುವಳಿ ಚೀಟಿ ಸಂಖ್ಯೆ ೫೦೫/ ೯೬-೯೭) ಸರ್ಕಾರ ೧೯೯೭ರಲ್ಲಿ ಸಾಗುವಳಿ ಚೀಟಿ ನೀಡಿರುತ್ತದೆ. ವೆಂಕಟೇಶ್ ಹಾಗೂ ನಂಜಮ್ಮ ಅವರ ಹೆಸರಿಗೆ ಜಮೀನಿನ ಖಾತೆ, ಪಹಣಿ ಆಗಿದ್ದು, ಹದ್ದುಬಸ್ತನ್ನೂ ಸಹ ಮಾಡಿಕೊಂಡಿರುತ್ತಾರೆ. ೧೯೯೭ರಿಂದ ವೆಂಕಟೇಶ್ ಹಾಗೂ ನಂಜಮ್ಮ ಅವರ ಕುಟುಂಬದವರೇ ಜಮೀನಿನ ಅನುಭೋಗದಲ್ಲಿದ್ದಾರೆ. ಸರ್ವೆ ನಂಬರ್ ೩೭ರಲ್ಲಿರುವ ಮೂರು ಎಕರೆ ಜಮೀನಿನ ಮಾಲೀಕರಾದ ನಂಜಮ್ಮ ಅವರು ಈಚೆಗೆ ವಿಭಾಗ ಪತ್ರದ ಮೂಲಕ ಪುತ್ರಿ ಅನಿತಾ ಹೆಸರಿಗೆ ಜಮೀನಿನ ಖಾತೆ ವರ್ಗಾವಣೆ ಮಾಡಿಕೊಟ್ಟಿರುತ್ತಾರೆ ಎಂದರು.
     ಸರ್ವೆ ನಂಬರ್ ೩೬ರಲ್ಲಿರುವ ಮೂರು ಎಕರೆ ಜಮೀನನ್ನು ಅಗಸ್ಟ್ ೧೪, ೨೦೨೪ರಂದು ವೆಂಕಟೇಶ್ ಅವರ ಪುತ್ರ ಪ್ರದೀಪ್.ವಿ ಅವರಿಂದ ಪ್ರಸನ್ನ ಕುಮಾರ್ ಕ್ರಯಕ್ಕೆ ಪಡೆದಿರುತ್ತಾರೆ. ಈ ಸಂಬಂಧ  ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಎಂಆರ್ ಎಚ್೨/೨೦೨೪-೨೫ರಂತೆ ಖಾತೆಯೂ ಆಗಿದೆ. ಇದರ ನಡುವೆ ಫೆಬ್ರುವರಿ ೨೫ರಂದು  ತಾಲೂಕಿನ ಜಿಂಕ್‌ಲೈನ್ ನಿವಾಸಿ ಕುಮಾರ್ ಹಾಗೂ ಅವರ ಕುಟುಂಬದ ಸದಸ್ಯರು ನಮ್ಮ ಜಮೀನಿನೊಳಗೆ ಅಕ್ರಮವಾಗಿ ಪ್ರವೇಶಿಸಿ ಹದ್ದುಬಸ್ತು ಬಾಂದ್ ಕಲ್ಲನ್ನು ಕಿತ್ತುಹಾಕಿ ಜೀವ ಬೆದರಿಕೆ ಹಾಕಿದ್ದಾರೆ. ಗೂಂಡಾಗಳನ್ನು ಕರೆತಂದು ಭಯ ಹುಟ್ಟಿಸುತ್ತಿದ್ದಾರೆ. ನಮ್ಮ ಜಮೀನಿನೊಳಗೆ ಇಸ್ಪೀಟ್ ಸಹಿತ ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ದೂರಿದರು. 
    ಈ ಬಗ್ಗೆ ರಕ್ಷಣೆ ಕೋರಿ ಪೊಲೀಸ್ ಇಲಾಖೆಗೂ ದೂರು ನೀಡಲಾಗಿದೆ. ಜಮೀನಿನ ಕ್ರಯ ಪತ್ರ, ನ್ಯಾಯಾಲಯದ ಶಾಶ್ವತ ನಿರ್ಬಂಧಾಜ್ಞೆ ಆದೇಶ ಪ್ರತಿ, ಪಹಣಿ ಸಾಗುವಳಿ ಚೀಟಿ, ಮ್ಯುಟೇಷನ್, ಪೋಡು ನಕ್ಷೆ, ಸರ್ವೆ ಪ್ರತಿ ಸಹಿತ ಅಗತ್ಯ ದಾಖಲೆಗಳೆಲ್ಲವೂ ನಮ್ಮ ಹೆಸರಿನಲ್ಲೇ ಇವೆ. ೨೦೦೪ರಲ್ಲಿ ಜಮೀನಿಗೆ ವಿದ್ಯುತ್ ಸಂಪರ್ಕ ಪಡೆಯಲಾಗಿದೆ. ಬೋರ್‌ವೆಲ್ ಕೊರೆಸಲಾಗಿದೆ. ಸಣ್ಣ ಹೆಂಚಿನ ಮನೆಯನ್ನೂ ನಿರ್ಮಿಸಲಾಗಿದೆ. ತಹಶೀಲ್ದಾರ್ ಹಾಗೂ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಆದೇಶದಂತೆ ಮಾರ್ಚ್ ೧೮ರಂದು ಭೂಮಾಪಕರು, ಗ್ರಾಮ ಲೆಕ್ಕಾಧಿಕಾರಿ, ರಾಜಸ್ವ ನಿರೀಕ್ಷಕರು ಗಡಿ ಗುರುತಿಸಿದ್ದು ಸರ್ವೆ ನಂಬರ್ ೩೬ರಲ್ಲಿರುವ ಮೂರು ಎಕರೆ ಜಮೀನು ಪ್ರಸನ್ನಕುಮಾರ್ ಬಿನ್ ತಿಮ್ಮಯ್ಯ ಅವರ ಹೆಸರಿನಲ್ಲಿ ಇರುವುದಾಗಿ ಅಧಿಕಾರಿಗಳು ವರದಿ ನೀಡಿದ್ದಾರೆ ಎಂದರು.
    ಇಷ್ಟಾದರೂ ಕುಮಾರ್ ಹಾಗೂ ಅವರ ಕುಟುಂಬದ ಸದಸ್ಯರು ಜಮೀನಿಗೆ ನುಗ್ಗಿ ಅನಗತ್ಯ ಕಿರುಕುಳ ನೀಡುತ್ತಿದ್ದು, ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಜಮೀನು ಪ್ರವೇಶ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನಮ್ಮ ಸ್ವಾಧೀನಕ್ಕೆ ಜಮೀನು ಬಿಟ್ಟುಕೊಡಬೇಕು ಎಂದು ಮನವಿ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ  ಸಂಬಂಧಿ ಪಾರ್ವತಮ್ಮ ಉಪಸ್ಥಿತರಿದ್ದರು.

ಆಯುಷ್ಮಾನ್ ಕಾರ್ಡ್ ಯೋಜನೆ ಯಶಸ್ವಿಗೆ ರಾಜ್ಯ ಸರ್ಕಾರ ಆಸಹಕಾರ : ಸಂಸದ ಬಿ.ವೈ ರಾಘವೇಂದ್ರ



ಭದ್ರಾವತಿ ಹಳೇನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ಬಿಜೆಪಿ ಪಕ್ಷದ ಯುವ ಮುಖಂಡರಾದ ಜಿ. ಆನಂದಕುಮಾರ್ ಮತ್ತು ಮಂಗೋಟೆ ರುದ್ರೇಶ್‌ರವರು ಆನಂದ ಸಾಮಾಜಿಕ ಸೇವಾ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಿದ್ದ ಆಯುಷ್ಮಾನ್ ಭಾರತ್ ಯೋಜನೆಯ ಉಚಿತ ಸ್ಮಾರ್ಟ್ ಕಾರ್ಡ್ ವಿತರಣಾ ಸಮಾರಂಭದಲ್ಲಿ ಫಲಾನುಭವಿಗಳಿಗೆ ಸಂಸದ ಬಿ.ವೈ ರಾಘವೇಂದ್ರ ಸ್ಮಾರ್ಟ್ ಕಾರ್ಡ್ ವಿತರಿಸಿದರು.
    ಭದ್ರಾವತಿ : ಆಯುಷ್ಮಾನ್ ಕಾರ್ಡ್ ೧೬೫೦ಕ್ಕೂ ವಿವಿಧ ತರಹದ ಚಿಕಿತ್ಸೆ, ೯೩೪ ತುರ್ತು ಸಂದರ್ಭದ ಚಿಕಿತ್ಸೆ ಹಾಗು ೧೭ ಅತಿ ತುರ್ತು ಸಂದರ್ಭದ ಚಿಕಿತ್ಸೆಗಳನ್ನು ಒಳಗೊಂಡಿದೆ. ಆದರೆ ಈ ಯೋಜನೆ ಸಂಪೂರ್ಣವಾಗಿ ಅನುಷ್ಠಾನಗೊಳ್ಳಲು ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ಸಂಸದ ಬಿ.ವೈ ರಾಘವೇಂದ್ರ ಆರೋಪಿಸಿದರು.
    ಅವರು ಹಳೇನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ಬಿಜೆಪಿ ಪಕ್ಷದ ಯುವ ಮುಖಂಡರಾದ ಜಿ. ಆನಂದಕುಮಾರ್ ಮತ್ತು ಮಂಗೋಟೆ ರುದ್ರೇಶ್‌ರವರು ಆನಂದ ಸಾಮಾಜಿಕ ಸೇವಾ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಿದ್ದ ಆಯುಷ್ಮಾನ್ ಭಾರತ್ ಯೋಜನೆಯ ಉಚಿತ ಸ್ಮಾರ್ಟ್ ಕಾರ್ಡ್ ವಿತರಣಾ ಸಮಾರಂಭದಲ್ಲಿ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿ ಮಾತನಾಡಿದರು. 
    ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕೆಂಬ ಬಹುದೊಡ್ಡ ಕನಸು ಕಂಡಿದ್ದಾರೆ. ದೇಶದಲ್ಲಿ ಕೋವಿಡ್ ನಂತರ ಜನನ ಪ್ರಮಾಣಕ್ಕಿಂತ ಮರಣ ಪ್ರಮಾಣ ಸಂಖ್ಯೆ ಹೆಚ್ಚುತ್ತಿರುವುದು ಆತಂಕದ ಸಂಗತಿಯಾಗಿದೆ. ಇಂತಹ ಸಂದರ್ಭದಲ್ಲಿ ಆಸ್ಪತ್ರೆಯ ವೆಚ್ಚಕ್ಕೆ ಕಡಿವಾಣ ಹಾಕಲು ಈ ಯೋಜನೆ ಸಹಕಾರಿಯಾಗಿದೆ ಎಂದರು.
    ಕುಟುಂಬದಲ್ಲಿ ಹಿರಿಯರ ಆರೋಗ್ಯ ಮತ್ತು ಯೋಗ ಕ್ಷೇಮ ನೋಡಿಕೊಳ್ಳುವುದು ಕಿರಿಯರ ಜವಾಬ್ದಾರಿಯಾಗಿದೆ. ಅದರೆ ಇತ್ತೀಚಿನ ದಿನಗಳಲ್ಲಿ ಹಿರಿಯರ ಆರೈಕೆ ಮಾಡುವುದನ್ನು ಕಡೆಗಣಿಸುತ್ತಿರುವ ಪ್ರವೃತ್ತಿ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂತಹ ಪ್ರವೃತ್ತಿ ಸಮಾಜದಲ್ಲಿ ತೊಲಗಬೇಕು. ಹಿರಿಯ ಆರೈಕೆ ಮಾಡುವುದು ಪುಣ್ಯದ ಕೆಲಸವಾಗಿದೆ ಎಂದರು.
  ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಮಾತನಾಡಿ, ಪಕ್ಷದ ಮುಖಂಡರು, ಕಾರ್ಯಕರ್ತರು ಈ ಯೋಜನೆ ಯಶಸ್ವಿಗಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ. ಸಮಾಜದ ಪ್ರತಿಯೊಬ್ಬ ಕಡು ಬಡವನಿಗೂ ಈ ಯೋಜನೆ ತಲುಪಬೇಕು. ಈ ನಿಟ್ಟಿನಲ್ಲಿ ಸಂಸದ ರಾಘವೇಂದ್ರರವರು ಈ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳಲು ಶಕ್ತಿಮೀರಿ ಶ್ರಮಿಸುತ್ತಿದ್ದಾರೆ ಎಂದರು.                    
    ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಜಿ.ಧರ್ಮ ಪ್ರಸಾದ್ ಮಾತನಾಡಿ, ಸಮಾಜದಲ್ಲಿನ ಮಧ್ಯಮ ವರ್ಗ ಹಾಗು ಶ್ರೀ ಸಾಮನ್ಯರಿಗೆ ಈ ಯೋಜನೆ ವರದಾನವಾಗಿದೆ ಎಂದರು.
    ಯುವ ಮುಖಂಡರಾದ ಜಿ.ಆನಂದ ಕುಮಾರ್, ಟಿ.ಎಸ್ ದುಗ್ಗೇಶ್, ಅಣ್ಣಪ್ಪ, ಬಿ.ಜಿ ರಾಮಲಿಂಗಯ್ಯ, ಎಂ. ಮಂಜುನಾಥ್, ಮಧುಕರ್ ಕಾನಿಟ್ಕರ್, ದಿನೇಶ್, ಕೆ.ಎಚ್ ತೀರ್ಥಯ್ಯ, ನಗರಸಭಾ ಸದಸ್ಯೆ ಅನುಪಮ ಚನ್ನೇಶ್ ಸೇರಿದಂತೆ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಗಜೇಂದ್ರ ಪ್ರಾರ್ಥಿಸಿ, ವೆಂಕಟೇಶ್ ಸ್ವಾಗತಿಸಿದರು. ಮಂಗೋಟೆ ರುದ್ರೇಶ್ ಪ್ರಸ್ತಾವಿಕ ನುಡಿಗಳನ್ನಾಡಿ, ಚನ್ನೇಶ್ ಕಾರ್ಯಕ್ರಮ  ನಿರೂಪಿಸಿ, ಆನಂದ್ ವಂದಿಸಿದರು. 

ಬಷೀರುನ್ನೀಸ ನಿಧನ


ಬಷೀರುನ್ನೀಸ 
    ಭದ್ರಾವತಿ : ನಗರದ ಜನ್ನಾಪುರ ನಂದಿನಿ ಸರ್ಕಲ್ ದಿನ ಪತ್ರಿಕೆಗಳ ಮಾರಾಟಗಾರ ನವಾಬ್‌ರವರ ತಾಯಿ ಬಷೀರುನ್ನೀಸ(೭೦) ವಯೋ ಸಹಜವಾಗಿ ನಿಧನ ಹೊಂದಿದರು. 
    ಪತಿ, ಓರ್ವ ಪುತ್ರಿ ಹಾಗು ನವಾಬ್ ಸೇರಿದಂತೆ ಇಬ್ಬರು ಪುತ್ರರು ಇದ್ದಾರೆ. ಜನ್ನಾಪುರ ರಾಜಪ್ಪ ಬಡಾವಣೆಯಲ್ಲಿ ವಾಸವಾಗಿದ್ದರು. ಇವರ ಅಂತ್ಯಕ್ರಿಯೆ ಶನಿವಾರ ತರೀಕೆರೆ ರಸ್ತೆಯ ಸಾದತ್ ದರ್ಗಾ ಖಬರ್‌ಸ್ತಾನದಲ್ಲಿ ನೆರವೇರಿತು. ಇವರ ನಿಧನಕ್ಕೆ ನಗರದ ಗಣ್ಯರು ಸಂತಾಪ ಸೂಚಿಸಿದ್ದಾರೆ. 




ಶುಕ್ರವಾರ, ಮಾರ್ಚ್ 21, 2025

ಅರಣ್ಯ ಸಚಿವರ ನೇತೃತ್ವದಲ್ಲಿ ಸಭೆ : ಎಂಪಿಎಂ ಕಾರ್ಖಾನೆ ಪುನರ್ ಪ್ರಾರಂಭಿಸುವ ಭರವಸೆ

ಭದ್ರಾವತಿ ಎಂಪಿಎಂ ಕಾರ್ಖಾನೆ ಪುನರ್ ಪ್ರಾರಂಭಿಸುವ ಕುರಿತು ಸದನದಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್  ಚರ್ಚಿಸಿದ ಪರಿಣಾಮ ಶುಕ್ರವಾರ ಸಚಿವ ಈಶ್ವರ ಖಂಡ್ರೆ ಸಮ್ಮುಖದಲ್ಲಿ ಸಭೆ ಜರುಗಿತು. 
    ಭದ್ರಾವತಿ : ನಗರದ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ (ಎಂ.ಪಿ.ಎಂ) ಪುನರ್ ಪ್ರಾರಂಭಿಸುವ ಸಂಬಂಧ ಅರಣ್ಯ ಇಲಾಖೆಯಿಂದ ಎದುರಾಗಿರುವ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದ್ದಾರೆ. 
    ಕಳೆದ ೩ ದಿನಗಳ ಹಿಂದೆ ಎಂಪಿಎಂ ಕಾರ್ಖಾನೆ ಪುನರ್ ಪ್ರಾರಂಭಿಸುವ ಕುರಿತು ಸದನದಲ್ಲಿ ನಾನು ಚರ್ಚಿಸಿದ ಪರಿಣಾಮ ಶುಕ್ರವಾರ ಸಚಿವ ಈಶ್ವರ ಖಂಡ್ರೆ ಸಮ್ಮುಖದಲ್ಲಿ ಸಭೆ ಜರುಗಿತು. ಪ್ರಸ್ತುತ ಎಂಪಿಎಂ ಕಾರ್ಖಾನೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ಸಚಿವರಿಗೆ ತಿಳಿಸುವ ಮೂಲಕ ಕಾರ್ಖಾನೆ ಪುನರ್ ಪ್ರಾರಂಭಿಸುವುದರಿಂದ ಯುವಕರಿಗೆ ಉದ್ಯೋಗಗಳನ್ನು ಸೃಷ್ಟಿಸುವಂತಹ ಕಾರ್ಯ ಸಾಕಾರಗೊಳ್ಳುವ ಕುರಿತು ಮನವರಿಕೆ ಮಾಡಿಕೊಡಲಾಯಿತು. 
    ಸಚಿವರು, ಅರಣ್ಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಹಾಗೂ ಹಿರಿಯ ಅರಣ್ಯ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಆದಷ್ಟು ಬೇಗನೆ ಕಾರ್ಖಾನೆಯನ್ನು ಪುನರ್ ಪ್ರಾರಂಭಿಸಲು ಎಲ್ಲ ರೀತಿಯ ಸಹಕಾರ ನೀಡಲು ಬದ್ಧರಿರುವುದಾಗಿ ತಿಳಿಸಿದ್ದು, ಇದರಿಂದಾಗಿ ಮುಂದಿನ ದಿನಗಳಲ್ಲಿ ಕಾರ್ಖಾನೆ ಪುನರ್ ಪ್ರಾರಂಭಿಸುವ ವಿಶ್ವಾಸ ಹೆಚ್ಚಾಗಿದೆ ಎಂದು ಶಾಸಕರು ತಿಳಿಸಿದ್ದಾರೆ. 

ಮಾ.೨೨ರಂದು ಪುನೀತ್‌ರಾಜ್‌ಕುಮಾರ್ ೫೦ನೇ ಹುಟ್ಟುಹಬ್ಬ



    ಭದ್ರಾವತಿ: ನಗರದ ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ಕರ್ನಾಟಕ ರತ್ನ, ನಟ, ಸಮಾಜ ಸೇವಕ ಪುನೀತ್‌ರಾಜ್‌ಕುಮಾರ್‌ರವರ ೫೦ನೇ ವರ್ಷದ ಹುಟ್ಟುಹಬ್ಬ ಮಾ.೨೨ರ ಶನಿವಾರ ಸಂಜೆ ೪ ಗಂಟೆಗೆ ನ್ಯೂಟೌನ್ ಅಯ್ಯಪ್ಪ ಸ್ವಾಮಿ ಸಭಾಭವನದಲ್ಲಿ ಆಯೋಜಿಸಲಾಗಿದೆ. 
    ನಗರಸಭೆ ಉಪಾಧ್ಯಕ್ಷ ಎಂ. ಮಣಿ ಎಎನ್‌ಎಸ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಎರೇಹಳ್ಳಿ ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯ ಕೋಗಲೂರು ತಿಪ್ಪೇಸ್ವಾಮಿ ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ. 
    ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ನಟರಾಜ್, ಸಂಘದ ಗೌರವ ಸಲಹೆಗಾರ ರಾಜವಿಕ್ರಂ, ಲಯನ್ಸ್ ಪ್ರಾಂತೀಯ ಅಧ್ಯಕ್ಷ ದೇವರಾಜ್, ಹಿರಿಯ ಕಲಾವಿದ ಜೆ.ಪಿ ನಂಜುಂಡೇಗೌಡ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. 
    ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ಕಲಾವಿದ ಅಪೇಕ್ಷ ಮಂಜುನಾಥ್ ಮತ್ತು ರಂಗ ಕಲಾವಿದ ವೈ.ಕೆ ಹನುಮಂತಯ್ಯ ಅವರಿಗೆ ಸನ್ಮಾನ ನಡೆಯಲಿದೆ. ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದು, ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಕೇಂದ್ರ ಉಕ್ಕು ಸಚಿವರಿಂದ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರಿಗೆ ಕೆಲಸದ ದಿನ ಹೆಚ್ಚಿಸುವ ಭರವಸೆ

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನೇತೃತ್ವದಲ್ಲಿ ಭದ್ರಾವತಿ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ನಿಯೋಗ ಶುಕ್ರವಾರ ದೆಹಲಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ. 
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರಿಗೆ ಕೆಲಸದ ದಿನ ಹೆಚ್ಚಿಸುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ ಕುಮಾರ ಸ್ವಾಮಿಯವರು ಭರವಸೆ ನೀಡಿದ್ದಾರೆ. 
    ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನೇತೃತ್ವದಲ್ಲಿ ಗುತ್ತಿಗೆ ಕಾರ್ಮಿಕರ ನಿಯೋಗ ಶುಕ್ರವಾರ ದೆಹಲಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ. 
    ಕಾರ್ಖಾನೆ ಅಭಿವೃದ್ಧಿ ಹೊಂದುವ ಯಾವುದೇ ಲಕ್ಷಣಗಳು ಕಂಡು ಬರುತ್ತಿಲ್ಲ. ಇದರಿಂದಾಗಿ ಕಾರ್ಮಿಕ ವಲಯ ಹಾಗು ಕ್ಷೇತ್ರದ ಜನತೆಯಲ್ಲಿ ಆತಂಕ ಛಾಯೆ ಆವರಿಸಿಕೊಂಡಿದ್ದು, ಅಲ್ಲದೆ ಗುತ್ತಿಗೆ ಕಾರ್ಮಿಕರಿಗೆ ಕೆಲಸದ ದಿನಗಳು ಹೆಚ್ಚಳವಾಗದ ಕಾರಣ ಸಂಕಷ್ಟದಲ್ಲಿ ಬದುಕುವಂತಾಗಿದೆ ಎಂದು ಎಂದು ನಿಯೋಗ ಅಳಲು ವ್ಯಕ್ತಪಡಿಸಿದೆ.  
    ಸಚಿವ ಕುಮಾರಸ್ವಾಮಿ ನಿಯೋಗಕ್ಕೆ ಸ್ಪಂದಿಸಿ ಕಾರ್ಖಾನೆ ಅಭಿವೃದ್ಧಿ ಹಾಗು ಗುತ್ತಿಗೆ ಕಾರ್ಮಿಕರಿಗೆ ಕೆಲಸ ದಿನ ಹೆಚ್ಚಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆಂದು ಗುತ್ತಿಗೆ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಕೇಶ್ ತಿಳಿಸಿದ್ದಾರೆ.  
    ನಿಯೋಗದಲ್ಲಿ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಸೇರಿದಂತೆ ಪದಾಧಿಕಾರಿಗಳು, ನಿರ್ದೇಶಕರು ಪಾಲ್ಗೊಂಡಿದ್ದರು.