Saturday, March 1, 2025

ಮೀನುಗಾರರಿಗೆ ಸರ್ಕಾರದಿಂದ ಮಂಜೂರಾದ ಸೌಲಭ್ಯಗಳ ವಿತರಣೆ

ಮೀನುಗಾರಿಕೆ ಇಲಾಖೆಯಿಂದ ಮಂಜೂರಾದ ವೃತ್ತಿ ಚಟುವಟಿಕೆಗಳಿಗೆ ಪೂರಕವಾದ ಸೌಲಭ್ಯಗಳನ್ನು ಸುಮಾರು ೨೦ಕ್ಕೂ ಹೆಚ್ಚು ಫಲಾಭವಿಗಳಿಗೆ ಭದ್ರಾವತಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಶನಿವಾರ ವಿತರಿಸಿದರು.
ಭದ್ರಾವತಿ : ಮೀನುಗಾರಿಕೆ ಇಲಾಖೆಯಿಂದ ಮಂಜೂರಾದ ವೃತ್ತಿ ಚಟುವಟಿಕೆಗಳಿಗೆ ಪೂರಕವಾದ ಸೌಲಭ್ಯಗಳನ್ನು ಸುಮಾರು ೨೦ಕ್ಕೂ ಹೆಚ್ಚು ಫಲಾಭವಿಗಳಿಗೆ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಶನಿವಾರ ವಿತರಿಸಿದರು. 
ಮೀನುಗಾರರು ವೃತ್ತಿ ಚಟುವಟಿಕೆಗಳ ಸಂದರ್ಭದಲ್ಲಿ ಉಂಟಾಗಬಹುದಾದ ಅವಘಡಗಳಿಂದ ರಕ್ಷಿಸಿಕೊಳ್ಳಲು ಸುರಕ್ಷತಾ ಸಾಧನಗಳ ಕಿಟ್, ಬಲೆ ಕಿಟ್ ಹಾಗು ಸುಮಾರು ೧೦ಕ್ಕೂ ಹೆಚ್ಚು ಫಲಾನುಭವಿಗಳಿಗೆ ಫೈಬರ್ ತೆಪ್ಪಗಳನ್ನು ವಿತರಿಸಲಾಯಿತು. 
ರಾಜ್ಯ ಸರ್ಕಾರ ಕಳೆದ ಬಾರಿ ಬಜೆಟ್‌ನಲ್ಲಿ ಘೋಷಿಸಿದ್ದ ಹೈಟೆಕ್ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ತಕ್ಷಣ ೧೦ ಕೋ. ರು. ಬಿಡುಗಡೆಗೊಳಿಸುವ ಮೂಲಕ ಕಾಮಗಾರಿ ಆರಂಭಿಸುವಂತೆ ಹಾಗು ಇದರ ಜೊತೆಗೆ ಮೀನುಗಾರರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಡಲು ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ನಿಗಮದಿಂದ ಸುಮಾರು ೨೨ ಕೋ.ರು. ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಬೇಕೆಂದು ಸಂಗಮೇಶ್ವರ್‌ರವರಿಗೆ ಮೀನುಗಾರರ ಸಂಘದ ವತಿಯಿಂದ ಮನವಿ ಮಾಡಲಾಯಿತು. 
ಭದ್ರಾ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ, ಕರ್ನಾಟಕ ರಾಜ್ಯ ಮೀನುಗಾರಿಕೆ ಮಹಾಮಂಡಳಿ ನಿರ್ದೇಶಕ ಮುರುಗನ್, ಮೀನುಗಾರಿಕೆ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಶಿವಕುಮಾರ್, ಸಹಾಯಕ ನಿರ್ದೇಶಕ ಮೋಹನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಮಾವಿನಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್, ಮುಖಂಡರ್ ರಾಜ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

No comments:

Post a Comment