ಡಾ. ಹರೀಶ ದೇಲಂತ ಬೆಟ್ಟು
ಭದ್ರಾವತಿ : ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರಕ್ಕೆ ಸಿದ್ಧಾರೂಢ ನಗರದ ನಿವಾಸಿ, ಮನೋ ವೈದ್ಯ ಡಾ. ಹರಿಶ ದೇಲಂತ ಬೆಟ್ಟು ಅವರನ್ನು ನಾಮ ನಿರ್ದೇಶನ ಗೊಳಿಸಲಾಗಿದೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಾನಸಿಕ ಆರೋಗ್ಯ ಆರೈಕೆ ಕಾಯ್ದೆ ೨೦೧೭ರಡಿ ನಿಯಮ ೪೬(೧)ರಲ್ಲಿ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರದಿಂದ ಅಧಿಕಾರೇತರ ಸದಸ್ಯರನ್ನು ನೇಮಿಸಲು ಅವಕಾಶ ಕಲ್ಪಿಸಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜ.೧೮ರಂದು ಅಧಿಕಾರೇತರ ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿದೆ.
ಡಾ. ಹರೀಶ ದೇಲಂತ ಬೆಟ್ಟುರವರು ನಗರದಲ್ಲಿ ಪ್ರಸಿದ್ದ ಮನೋ ವೈದ್ಯರಾಗಿ ಗುರುತಿಸಿಕೊಂಡಿದ್ದು, ಅಲ್ಲದೆ ಭಾರತೀಯ ವೈದ್ಯಕೀಯ ಸಂಘದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಇದರ ಜೊತೆಗೆ ವಿವಿಧ ಸಂಘ-ಸಂಸ್ಥೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
No comments:
Post a Comment