Tuesday, March 11, 2025

ಎ.ಎಸ್ ಪದ್ಮಾವತಿ, ಡಾ. ವೀಣಾ ಭಟ್ ಇಬ್ಬರು ಸಾಧಕಿಯರಿಗೆ `ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ'

`ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ' ಪುರಸ್ಕೃತರಾದ ಎ.ಎಸ್. ಪದ್ಮಾವತಿ 
    ಭದ್ರಾವತಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಂಘ-ಸಂಸ್ಥೆಗಳಿಗೆ ಹಾಗು ಮಹಿಳಾ ಸಾಧಕಿಯರಿಗೆ ನೀಡಲಾಗುವ `ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ' ಈ ಬಾರಿ ನಗರದ ಇಬ್ಬರು ಮಹಿಳಾ ಸಾಧಕಿಯರಿಗೆ ಲಭಿಸಿದೆ. 
    ನಗರದ ಜನ್ನಾಪುರ ನಿವಾಸಿ ಎ.ಎಸ್ ಪದ್ಮಾವತಿ(ಪದ್ಮಾವತಿ ಸಚ್ಚಿದಾನಂದ ಗುಪ್ತ) ಅವರಿಗೆ ಕಲಾ ವಿಭಾಗದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಹಾಗು ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ನಯನ ಆಸ್ಪತ್ರೆ ಪ್ರಸೂತಿ ತಜ್ಞೆ, ವೈದ್ಯ ಸಾಹಿತಿ ಡಾ. ವೀಣಾ ಭಟ್ ಅವರಿಗೆ ಮಹಿಳೆಯರ ಅಭಿವೃದ್ಧಿಗಾಗಿ   ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗಿದೆ. 
    ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಾಧಕಿಯರಾದ ಎ.ಎಸ್ ಪದ್ಮಾವತಿ ಮತ್ತು ಡಾ. ವೀಣಾ ಭಟ್ ಪ್ರಶಸ್ತಿ ಸ್ವೀಕರಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
 

`ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ' ಪುರಸ್ಕೃತರಾದ ಡಾ. ವೀಣಾ ಭಟ್ 

No comments:

Post a Comment