Saturday, March 22, 2025

ಮಾ.೨೩ರಂದು ಸಂಗೀತದಲ್ಲಿ ಸ್ತ್ರೀ ಸಂವೇಧನೆ ವಿನೂತನ ಕಾರ್ಯಕ್ರಮ



    
ಭದ್ರಾವತಿ: ನಗರದ ಭೂಮಿಕಾ ವೇದಿಕೆ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾ.೨೩ರಂದು ಸಂಜೆ ೬ ಗಂಟೆಗೆ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ನಯನ ಆಸ್ಪತ್ರೆ ಸಭಾಂಗಣದಲ್ಲಿ ಸಂಗೀತದಲ್ಲಿ ಸ್ತ್ರೀ ಸಂವೇದನೆ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿದೆ. 
    ಶಿವಮೊಗ್ಗದ ವಿದುಷಿ ಸುರೇಖಾ ಹೆಗಡೆ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದು, ಭೂಮಿಕಾ ವೇದಿಕೆ ಅಧ್ಯಕ್ಷ ಡಾ. ಕೃಷ್ಣ ಎಸ್. ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

No comments:

Post a Comment