Thursday, March 27, 2025

ಎಂಪಿಎಂ ನಿವೃತ್ತ ಕಾರ್ಮಿಕ ಎಂ. ಪುಟ್ಟಸ್ವಾಮಿ ನಿಧನ

ಎಂ. ಪುಟ್ಟಸ್ವಾಮಿ 
    ಭದ್ರಾವತಿ: ನಗರದ ಹುಡ್ಕೋ ಕಾಲೋನಿ ಉಂಬ್ಳೆಬೈಲು ರಸ್ತೆ ನಿವಾಸಿ, ಮೈಸೂರು ಕಾಗದ ಕಾರ್ಖಾನೆ ಓಲ್ಡ್ ಸ್ಟಾಕ್ ರೂಮ್ ನಿವೃತ್ತ ಕಾರ್ಮಿಕ ಎಂ. ಪುಟ್ಟಸ್ವಾಮಿ (೭೨) ಬುಧವಾರ ರಾತ್ರಿ ನಿಧನ ಹೊಂದಿದ್ದಾರೆ. 
    ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಇದ್ದಾರೆ. ಮೃತರ ಅಂತ್ಯಕ್ರಿಯೆ ಬೈಪಾಸ್ ರಸ್ತೆ ಸಮೀಪದ ತಿಮ್ಲಾಪುರ ರಸ್ತೆಯ ಶಂಕರಪ್ಪನಕಟ್ಟೆ ಶ್ರೀ ಸತ್ಯಹರಿಶ್ಚಂದ್ರ ಹಿಂದು ರುದ್ರಭೂಮಿಯಲ್ಲಿ ಗುರುವಾರ ಸಂಜೆ ನೆರವೇರಿತು. ಇವರ ನಿಧನಕ್ಕೆ ಮೈಸೂರು ಕಾಗದ ಕಾರ್ಖಾನೆ ನಿವೃತ್ತ ಕಾರ್ಮಿಕರು, ಸ್ಥಳೀಯ ಮುಖಂಡರು, ನಗರದ ಗಣ್ಯರು ಸಂತಾಪ ಸೂಚಿಸಿದ್ದಾರೆ. 

No comments:

Post a Comment