ಮಂಗಳವಾರ, ಮಾರ್ಚ್ 4, 2025

ಮನುಷ್ಯನನ್ನು ಮನುಷ್ಯನ ರೀತಿಯಲ್ಲಿ ನೋಡಿದಾಗ ಮಾತ್ರ ಜಾತಿ ನಿರ್ಮೂಲನೆ ಸಾಧ್ಯ : ಎಂ. ಶಿವಕುಮಾರ್

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಹಾಗೂ ಶಿವಮೊಗ್ಗ ನೇಸರ ಸೆಂಟರ್ ಫಾರ್  ರೂರಲ್  ಸಂಯುಕ್ತ ಆಶ್ರಯದಲ್ಲಿ ಭದ್ರಾವತಿ ತಾಲೂಕಿನ ತಾವರಘಟ್ಟ ಪಂಚಾಯಿತಿಯಲ್ಲಿ  ಹಮ್ಮಿಕೊಂಡಿದ್ದ  ಪರಿಶಿಷ್ಟ ಜಾತಿ ಮತ್ತು ವರ್ಗಗಳ ಮೇಲಿನ ದೌರ್ಜನ್ಯ ನಿಷೇಧ ಹಾಗೂ ಅಸ್ಪೃಶ್ಯ ಜಾತಿಗಳ ನಿರ್ಮೂಲನೆ ಬಗ್ಗೆ ಅರಿವು /ಜಾಗೃತಿ ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ, ನ್ಯಾಯವಾದಿ ಎಂ. ಶಿವಕುಮಾರ್  ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು.  
ಭದ್ರಾವತಿ: ಮನುಷ್ಯನನ್ನು ಮನುಷ್ಯನ ರೀತಿಯಲ್ಲಿ ನೋಡಿದಾಗ ಮಾತ್ರ  ಜಾತಿ ನಿರ್ಮೂಲನೆ ಸಾಧ್ಯ ಎಂದು ಕುವೆಂಪು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ, ನ್ಯಾಯವಾದಿ ಎಂ. ಶಿವಕುಮಾರ್ ಹೇಳಿದರು.
    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಹಾಗೂ ಶಿವಮೊಗ್ಗ ನೇಸರ ಸೆಂಟರ್ ಫಾರ್  ರೂರಲ್  ಸಂಯುಕ್ತ ಆಶ್ರಯದಲ್ಲಿ  ತಾಲೂಕಿನ ತಾವರಘಟ್ಟ ಪಂಚಾಯಿತಿಯಲ್ಲಿ  ಹಮ್ಮಿಕೊಂಡಿದ್ದ  ಪರಿಶಿಷ್ಟ ಜಾತಿ ಮತ್ತು ವರ್ಗಗಳ ಮೇಲಿನ ದೌರ್ಜನ್ಯ ನಿಷೇಧ ಹಾಗೂ ಅಸ್ಪೃಶ್ಯ ಜಾತಿಗಳ ನಿರ್ಮೂಲನೆ ಬಗ್ಗೆ ಅರಿವು /ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು.  
    ಇತ್ತೀಚಿನ ದಿನಗಳಲ್ಲಿ ಜಾತಿ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ನಗರ ಪ್ರದೇಶಗಳಲ್ಲಿ ಇವು ಇನ್ನೂ ಹೆಚ್ಚಾಗಿವೆ. ಸಂವಿಧಾನದ ಆಶಯಕ್ಕೆ ಇವು ಕಳಂಕ ತಂದಿವೆ.  ಜಾತಿ ನಿರ್ಮೂಲನೆಯಿಂದ ಸ್ವಾಸ್ಥ್ಯ ಸಮಾಜ,  ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು. 
      ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್. ಹನುಮಂತಪ್ಪ, ಉಪಾಧ್ಯಕ್ಷ ಗಿರೀಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ  ದಸ್ತಗಿರ್, ಸದಸ್ಯರಾದ  ಲೋಕೇಶ್,  ಶೋಭಾ, ಸಂಧ್ಯಾ, ದೇವಲನಾಯ್ಕ, ಮಂಜುನಾಥ, ಸೋಮಶೇಖರ್ ಹಾಗು ನೇಸರ ಸಂಸ್ಥೆಯ ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ