Monday, March 31, 2025

ನಗರದಲ್ಲಿ ಪವಿತ್ರ ರಂಜಾನ್ ಆಚರಣೆ

ಭದ್ರಾವತಿ ನಗರದಲ್ಲಿ ಮುಸ್ಲಿಂ ಸಮುದಾಯದವರು ಪ್ರೀತಿ, ಶಾಂತಿ, ಸಮಾನತೆ, ಮಾನವೀಯ ಮೌಲ್ಯಗಳ ಸಂಕೇತವಾದ ಪವಿತ್ರ ಈದ್ ಉಲ್ ಫಿತರ್(ರಂಜಾನ್) ಹಬ್ಬ ಸಡಗರ ಸಂಭ್ರಮದಿಂದ ಆಚರಿಸಿದರು. ಮಸೀದಿಯೊಂದರಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. 
    ಭದ್ರಾವತಿ: ನಗರದಲ್ಲಿ ಮುಸ್ಲಿಂ ಸಮುದಾಯದವರು ಪ್ರೀತಿ, ಶಾಂತಿ, ಸಮಾನತೆ, ಮಾನವೀಯ ಮೌಲ್ಯಗಳ ಸಂಕೇತವಾದ ಪವಿತ್ರ ಈದ್ ಉಲ್ ಫಿತರ್(ರಂಜಾನ್) ಹಬ್ಬ ಸಡಗರ ಸಂಭ್ರಮದಿಂದ ಆಚರಿಸಿದರು. 
    ನಗರದ ಪ್ರಮುಖ ಮಸೀದಿ ಹಾಗು ಈದ್ಗಾ ಮೈದಾನಗಳಲ್ಲಿ ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಪರಸ್ಪರ ಹಬ್ಬದ ಶುಭಾಶಯ ಕೋರಿದರು. ಹಬ್ಬದ ಪ್ರಯುಕ್ತ ಕಳೆದ ೧ ತಿಂಗಳಿನಿಂದ ಉಪಹಾಸ ವ್ರತ ಕೈಗೊಂಡು ಕೊನೆಯ ದಿನವಾದ ಸೋಮವಾರ ಸಾಮೂಹಿಕ ಪ್ರಾರ್ಥನೆಯೊಂದಿಗೆ ಅಂತ್ಯಗೊಳಿಸಿದರು. 
    ಅಲ್ಲದೆ ಹಬ್ಬದ ನಡುವೆ ಸರ್ವಧರ್ಮಗಳ ನಡುವೆ ಸಾಮರಸ್ಯ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೆಲವು ಮುಸ್ಲಿಂ ಸಂಘಟನೆಗಳಿಂದ ಇಫ್ತಾರ್ ಕೂಟ ಆಯೋಜಿಸುವ ಮೂಲಕ ಹಬ್ಬದ ಮಹತ್ವ ತಿಳಿಸಿಕೊಡಲಾಯಿತು. 
    ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ತರೀಕೆರೆ ರಸ್ತೆಯ ಸಾದತ್ ದರ್ಗಾ ಈದ್ಗಾ ಮೈದಾನದಲ್ಲಿ ಸಾವಿರಾರು ಮಂದಿ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಚುನಾಯಿತ ಪ್ರತಿನಿಧಿಗಳು, ಗಣ್ಯರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಹಬ್ಬದ ಶುಭಾಶಯ ಕೋರಿದರು. 

No comments:

Post a Comment