ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸರ್ಕಾರದ ವಿವಿಧ ಇಲಾಖೆಗಳು ಹಾಗು ಬಲಿಜ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ತಾಲೂಕು ಕಛೇರಿ ಸಭಾಂಗಣದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರರ(ಕೈವಾರ ತಾತಯ್ಯ) ಜನ್ಮದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ : ಕಾಲಜ್ಞಾನಿ ಕೈವಾರ ತಾತಯ್ಯನವರ ಆದರ್ಶತನಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರ ಜನ್ಮದಿನಾಚರಣೆ ಸಾರ್ಥಕವಾಗುತ್ತದೆ ಎಂದು ತಹಸೀಲ್ದಾರ್ ಪರುಸಪ್ಪ ಕುರುಬರ ಹೇಳಿದರು.
ಅವರು ಶುಕ್ರವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸರ್ಕಾರದ ವಿವಿಧ ಇಲಾಖೆಗಳು ಹಾಗು ಬಲಿಜ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ತಾಲೂಕು ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಯೋಗಿನಾರೇಯಣ ಯತೀಂದ್ರರ(ಕೈವಾರ ತಾತಯ್ಯ) ಜನ್ಮದಿನಾಚರಣೆ ಕಾರ್ಯಕ್ರಮದ ನೇತೃತ್ವದವಹಿಸಿ ಮಾತನಾಡಿದರು.
ಕೈವಾರ ತಾತಯ್ಯನವರು ಭಕ್ತಿ ಮಾರ್ಗದಲ್ಲಿ ಸಾಗುವ ಮೂಲಕ ಸಮಾಜಕ್ಕೆ ಭಕ್ತಿಗೀತೆ, ಕೀರ್ತನೆಗಳ ಮೂಲಕ ಉತ್ತಮ ಸಂದೇಶಗಳನ್ನು ಸಾರಿದರು. ಇಂದಿನ ಸಮಾಜಕ್ಕೆ ಅವರ ಆದರ್ಶತನಗಳು ಮಾದರಿಯಾಗಿವೆ ಎಂದರು.
ಬಲಿಜ ಸಂಘದ ಅಧ್ಯಕ್ಷ ಬಲಜ ಸಂಘದ ಅಧ್ಯಕ್ಷ ಎಚ್.ಆರ್ ರಂಗನಾಥ್, ಗೌರವಾಧ್ಯಕ್ಷ ಸುಬ್ರಮಣ್ಯ(ತಾತಯ್ಯ), ಉಪಾಧ್ಯಕ್ಷ ಜಂಗಮಪ್ಪ, ಕಾರ್ಯದರ್ಶಿಗಳಾದ ಟಿ. ರಮೇಶ್, ಸತೀಶ್, ಹಿಂದುಳಿದ ವರ್ಗಗಳ ಮುಖಂಡ ಟಿ. ವೆಂಕಟೇಶ್ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಸೀಲ್ದಾರ್ ಕಛೇರಿ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment