ಗುರುವಾರ, ಮಾರ್ಚ್ 6, 2025

ಮಕ್ಕಳು ಭವಿಷ್ಯದ ಉತ್ತಮ ಪ್ರಜೆಗಳಾಗಿ ರೂಪುಕೊಳ್ಳಲು ವಿದ್ಯಾದಾನ ಸಹಕಾರಿ : ಎ.ಕೆ ನಾಗೇಂದ್ರಪ್ಪ

ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ, ಕೂಲಿ ಕಾರ್ಮಿಕರಿಗೆ ವಸ್ತ್ರ ವಿತರಣೆ 

ಭದ್ರಾವತಿಯಲ್ಲಿ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಹಾಗು ಬಡ ಕೂಲಿ ಕಾರ್ಮಿಕರಿಗೆ ವಸ್ತ್ರ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 
    ಭದ್ರಾವತಿ : ದಾನಗಳಲ್ಲಿ ವಿದ್ಯಾದಾನ ಸಹ ಶ್ರೇಷ್ಠವಾಗಿದ್ದು, ಮಕ್ಕಳು ಭವಿಷ್ಯದ ಉತ್ತಮ ಪ್ರಜೆಗಳಾಗಿ ರೂಪುಕೊಳ್ಳಲು ವಿದ್ಯಾದಾನ ಸಹಕಾರಿಯಗಲಿದೆ ಈ ಹಿನ್ನಲೆಯಲ್ಲಿ ದಾನಿಗಳು ಈ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಮನವಿ ಮಾಡಿದರು. 
    ಅವರು ನಗರದ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಹಾಗು ಬಡ ಕೂಲಿ ಕಾರ್ಮಿಕರಿಗೆ ವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.  
    ಧರ್ಮಸಂಸ್ಥೆ ವತಿಯಿಂದ ಪ್ರತಿ ವರ್ಷ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ನೆರವು ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದ್ದು, ಇದರ ಜೊತೆಗೆ ದಾನಿಗಳು ವಿದ್ಯಾದಾನ ಮಾಡುವ ಮೂಲಕ ಇನ್ನೂ ಹೆಚ್ಚಿನ ಸೇವೆ ನೀಡಬೇಕು. ಆ ಮೂಲಕ ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ಕೈ ಜೋಡಿಸಬೇಕೆಂದು ಮನವಿ ಮಾಡಿದರು. . 
    ಹಿರಿಯ ಮುಖಂಡ, ಉದ್ಯಮಿ ಬಿ.ಕೆ ಜಗನ್ನಾಥ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಧರ್ಮಸಂಸ್ಥೆ ಸೇವಾ ಕಾರ್ಯ ಇತರರಿಗೆ ಮಾದರಿಯಾಗಿದೆ. ಸಮಾಜದಲ್ಲಿ ಈ ರೀತಿಯ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕೆಂದರು.  
    ಧರ್ಮಸಂಸ್ಥೆ ಅಧ್ಯಕ್ಷ ಶಿವಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಧರ್ಮಸಂಸ್ಥೆಯನ್ನು ೧೯೯೮ರಲ್ಲಿ ಆರಂಭಿಸಲಾಯಿತು. ಎಲ್ಲರ ಸಹಕಾರದಿಂದ ಅಂದಿನಿಂದ ನಿರಂತರವಾಗಿ ಹಲವಾರು ಸೇವಾ ಕಾರ್ಯಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವಾ ಕಾರ್ಯಗಳನ್ನು ಕೈಗೊಳ್ಳುವ ಆಶಯ ನಮ್ಮದಾಗಿದೆ ಎಂದರು. 
    ಸಮಾಜ ಸೇವಕ ರಾಜುನಾಯ್ಕ, ಚಲನಚಿತ್ರ ನಟ, ನಿರ್ಮಾಪಕ ಮಂಜು(ಮಿಲ್ಟ್ರಿ) ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಧರ್ಮಸಂಸ್ಥೆ ಟ್ರಸ್ಟಿ ಶಶಿಕಲಾ ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. 
. ನಂದಿನಿ ಮಲ್ಲಿಕಾರ್ಜುನ ಪ್ರಾರ್ಥಿಸಿ, ಪೇಪರ್‌ಟೌನ್ ಪ್ರೌಢಶಾಲೆ ಮುಖ್ಯ ಶಿಕ್ಷಕ ಪಿ. ಬಸವರಾಜ್ ಸ್ವಾಗತಿಸಿದರು. ಅಪೇಕ್ಷ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ