Friday, March 21, 2025

ಮಾ.೨೨ರಂದು ಪುನೀತ್‌ರಾಜ್‌ಕುಮಾರ್ ೫೦ನೇ ಹುಟ್ಟುಹಬ್ಬ



    ಭದ್ರಾವತಿ: ನಗರದ ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ಕರ್ನಾಟಕ ರತ್ನ, ನಟ, ಸಮಾಜ ಸೇವಕ ಪುನೀತ್‌ರಾಜ್‌ಕುಮಾರ್‌ರವರ ೫೦ನೇ ವರ್ಷದ ಹುಟ್ಟುಹಬ್ಬ ಮಾ.೨೨ರ ಶನಿವಾರ ಸಂಜೆ ೪ ಗಂಟೆಗೆ ನ್ಯೂಟೌನ್ ಅಯ್ಯಪ್ಪ ಸ್ವಾಮಿ ಸಭಾಭವನದಲ್ಲಿ ಆಯೋಜಿಸಲಾಗಿದೆ. 
    ನಗರಸಭೆ ಉಪಾಧ್ಯಕ್ಷ ಎಂ. ಮಣಿ ಎಎನ್‌ಎಸ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಎರೇಹಳ್ಳಿ ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯ ಕೋಗಲೂರು ತಿಪ್ಪೇಸ್ವಾಮಿ ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ. 
    ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ನಟರಾಜ್, ಸಂಘದ ಗೌರವ ಸಲಹೆಗಾರ ರಾಜವಿಕ್ರಂ, ಲಯನ್ಸ್ ಪ್ರಾಂತೀಯ ಅಧ್ಯಕ್ಷ ದೇವರಾಜ್, ಹಿರಿಯ ಕಲಾವಿದ ಜೆ.ಪಿ ನಂಜುಂಡೇಗೌಡ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. 
    ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ಕಲಾವಿದ ಅಪೇಕ್ಷ ಮಂಜುನಾಥ್ ಮತ್ತು ರಂಗ ಕಲಾವಿದ ವೈ.ಕೆ ಹನುಮಂತಯ್ಯ ಅವರಿಗೆ ಸನ್ಮಾನ ನಡೆಯಲಿದೆ. ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದು, ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

No comments:

Post a Comment