Friday, March 7, 2025

ಮಾ.೧೨ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಡಾ. ವಿಜಯದೇವಿಗೆ `ಕಾರುಣ್ಯ ವರ್ಷದ ಮಹಿಳೆ" ಪ್ರಶಸ್ತಿ

ಡಾ. ವಿಜಯದೇವಿ 
    ಭದ್ರಾವತಿ : ನಗರದ ಜನ್ನಾಪುರ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾ.೧೨ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು, ಈ ಬಾರಿ ಸಾಹಿತಿ, ಎಮೆರಿಟಸ್ ಪ್ರಾಧ್ಯಾಪಕಿ ಡಾ. ವಿಜಯದೇವಿ(ಎಸ್.ಎಸ್ ವಿಜಯ) ಅವರಿಗೆ `ಕಾರುಣ್ಯ ವರ್ಷದ ಮಹಿಳೆ' ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. 
    ಕಳೆದ ೪ ವರ್ಷಗಳಿಂದ ಅನಾಥಶ್ರಮ, ವೃದ್ಧಾಶ್ರಮ, ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಹಲವಾರು ಯೋಜನೆ, ಕಾರ್ಯಾಗಾರ, ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗಾಗಿ ಕಾರುಣ್ಯ ದಾರಿದೀಪ ಯೋಜನೆ ಅನುಷ್ಠಾನಗೊಳಿಸಿರುವುದು ಸೇರಿದಂತೆ ವಿಭಿನ್ನ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ವಿಶೇಷವಾಗಿ ಆಚರಿಸಿಕೊಂಡು ಬರುತ್ತಿದೆ. ಸಮಾಜದಲ್ಲಿನ ಮಹಿಳಾ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. 
    ಟ್ರಸ್ಟ್ ವತಿಯಿಂದ ಮಾ.೧೨ರಂದು ನಗರದ ನ್ಯೂಟೌನ್ ರೋಟರಿ ಕ್ಲಬ್‌ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಲಿದ್ದು, ಇಂದಿರಾ ಕೃಷ್ಣಪ್ಪ ಸೇರಿದಂತೆ ಚಿಂತಕರು, ಮಹಿಳಾ ಸಾಧಕಿಯರು, ಗಣ್ಯರು ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. 
    ನಗರ ಮತ್ತು ಗ್ರಾಮೀಣ ಭಾಗದಲ್ಲಿರುವ ಸಂಘ-ಸಂಸ್ಥೆ ಹಾಗು ಗುಂಪುಗಳಿಗೆ ಸಮೂಹ ನೃತ್ಯ ಸ್ಪರ್ಧೆ ಆಯೋಜಿಸಲಾಗಿದೆ. ಆಸಕ್ತರು ಮಾ.೧೦ರೊಳಗಾಗಿ ಹೆಸರು ನೋಂದಾಯಿಸಿ ಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಎನ್. ನಾಗವೇಣಿ ಮೊ: ೯೭೪೦೫೭೦೭೮೪ ಅಥವಾ ಆರ್. ಮಂಜುಳಾ ಮೊ: ೮೬೬೦೬೬೬೫೦೨ ಸಂಖ್ಯೆಗೆ ಕರೆ ಮಾಡಬಹುದಾಗಿದೆ. 
    ಡಾ. ವಿಜಯದೇವಿ(ಎಸ್.ಎಸ್ ವಿಜಯ) : 
    ಡಾ. ವಿಜಯದೇವಿಯವರು ಮೂಲತಃ ಪ್ರಾಧ್ಯಾಪಕಿಯಾಗಿದ್ದು, ನಗರದ ಸರ್.ಎಂ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು ಸೇರಿದಂತೆ ವಿವಿಧ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ವಿಜಯಪುರ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದಾರೆ. 
  ಇವರು ಶಿಕ್ಷಣ ಹಾಗು ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರವಾಗಿದೆ. ಹಲವಾರು ಕೃತಿಗಳನ್ನು ರಚಿಸಿ ಹೊರತಂದಿದ್ದಾರೆ.  ತಾಲೂಕು ಹಾಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಾಗು ಶರಣ ಸಾಹಿತ್ಯ ಸಮ್ಮೇಳನಗಳ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇವರಿಗೆ ಶ್ರೀ ಅಲ್ಲಮಪ್ರಭು, ಶ್ರೀ ಅಕ್ಕಮಹಾದೇವಿ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳು ಸಂದಿವೆ. ಇದೀಗ `ಕಾರುಣ್ಯ ವರ್ಷದ ಮಹಿಳೆ' ಪ್ರಶಸ್ತಿ ಲಭಿಸಿದೆ. ಇವರಿಗೆ ನಗರದ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು, ಜನಪ್ರತಿನಿಧಿಗಳು ಅಭಿನಂದನೆ ಸಲ್ಲಿಸಿದ್ದಾರೆ.

No comments:

Post a Comment